2.17 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ : ಘಾಟಿ ಜಾತ್ರೆಯ ಉತ್ತಮ ರಾಸುಗಳಿಗೆ ಬಹುಮಾನ ವಿತರಣೆ

ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹೆಗ್ಗಡಿಹಳ್ಳಿ ಗ್ರಾಮ ಪಂಚಾಯಿತಿ, ಮೇಳೇಕೋಟೆ ಗ್ರಾಮ ಪಂಚಾಯಿತಿ, ಮೇಲಿನಜೂಗಾನಹಳ್ಳಿ(ಎಸ್.ಎಸ್ ಘಾಟಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 2.17 ಕೋಟಿ ರೂಗಳ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಚಾಲನೆ ನೀಡಿದರು.

ಹೆಗ್ಗಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ 161.98 ಲಕ್ಷ ರೂಗಳ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ, ಸಿ.ಸಿ ರಸ್ತೆ, ಚರಂಡಿ, ಅಂಗನವಾಡಿ ದುರಸ್ಥಿ, ನೂತನ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿಗಳಿಗೆ ಗುದ್ದಲಿಪೂಜೆ ನೆರವೇರಿಸಿದರು.

ಮೆಳೇಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ 21 ಲಕ್ಷ ರೂ.ಗಳ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ, ಎನ್.ಆರ್.ಎಲ್.ಎಂ ಭವನದಲ್ಲಿ ವಿಶೇಷ ಚೇತನರ ಉಪಯೋಗಕ್ಕಾಗಿ ರ್ಯಾಂಪ್ ನಿರ್ಮಾಣ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

ಮೇಲಿನಜೂಗಾನಹಳ್ಳಿ(ಎಸ್.ಎಸ್ ಘಾಟಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 34.99 ಲಕ್ಷ ರೂಗಳ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ, ಶುದ್ಧ ಕುಡಿಯುವ ನೀರು ಘಟಕ ಯಂತ್ರೋಪಕರಣ ಅಳವಡಿಕೆಗೆ ಚಾಲನೆ ನೀಡಿದರು.

*ಘಾಟಿ ಜಾತ್ರೆಯಲ್ಲಿ ಉತ್ತಮ ರಾಸುಗಳಿಗೆ ಬಹುಮಾನ ವಿತರಣೆ*

ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವತಿಯಿಂದ ಎಸ್.ಎಸ್ ಘಾಟಿ ಕ್ಷೇತ್ರದಲ್ಲಿ ಈ ವರ್ಷ ನಡೆದ ರಾಸುಗಳ ಜಾತ್ರೆಯಲ್ಲಿ ಭಾಗವಹಿಸಿದ್ದ ಉತ್ತಮ ರಾಸುಗಳ ವಿಜೇತ ಮಾಲೀಕರಿಗೆ ಜಿಲ್ಲಾ ಉಸ್ತುವಾರಿ ಸಚಿವರು ಬಹುಮಾನ ವಿತರಿಸಿ ಸನ್ಮಾನಿಸಿ ಮಾತನಾಡಿ ಒಕ್ಕಲು ಮಕ್ಕಳಾದ ನಾವು ಪಶು ಸಂಪತ್ತಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಘಾಟಿ ಅಭಿವೃದ್ಧಿ ಪ್ರಾಧಿಕಾರ ಉತ್ತಮ ಕೆಲಸ ಮಾಡುತಿದ್ದು ಶ್ರೀ ಕ್ಷೇತ್ರದ ಅಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲು ಬದ್ದನಾಗಿದ್ದು, ತಮ್ಮ ತಾತ ತಂದೆಯ ಕಾಲದಲ್ಲಿ ಜಾತ್ರೆಗೆ ಭಾಗವಹಿಸುತಿದ್ದುದನ್ನು ಸ್ಮರಿಸಿದರು.

ಹಾಲು ಹಲ್ಲಿನ ಹೋರಿಗಳಲ್ಲಿ ಪ್ರಥಮ ಬಹುಮಾನವಾಗಿ ಹೊಸಕೋಟೆ ತಾಲ್ಲೂಕಿನ ತರಬರಹಳ್ಳಿಯ ನಾರಾಯಣಸ್ವಾಮಿ, ಬಾಯಿ ಗೂಡಿದ ಜೋಡಿ ಎತ್ತುಗಳಲ್ಲಿ ಪ್ರಥಮ ಬಹುಮಾನವಾಗಿ ದೇವನಹಳ್ಳಿ ತಾಲ್ಲೂಕು ಚೆನ್ನಹಳ್ಳಿ ಗ್ರಾಮದ ಮುನಿಯಪ್ಪ, ಹಾಲು ಹಲ್ಲಿನ ಜೊತೆ ಎತ್ತುಗಳಲ್ಲಿ ಪ್ರಥಮ ಬಹುಮಾನವಾಗಿ ಬೆಂ.ನಗರ ಜಿಲ್ಲೆಯ ಜಕ್ಕೂರಿನ ಜಶ್ವಂತ್, ಆರು ಹಲ್ಲಿನ ಜೊತೆ ಎತ್ತುಗಳಲ್ಲಿ ಪ್ರಥಮ ಬಹುಮಾನವಾಗಿ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಹೋಬಳಿಯ ಆದರ್ಶ್, ನಾಲ್ಕು ಹಲ್ಲಿನ ಜೋಡಿ ಎತ್ತುಗಳಲ್ಲಿ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಮಾನೆ ನಾರಾಯಣಪ್ಪ, ಆರು ಹಲ್ಲಿನ ಹೋರಿಗಳಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಗೆದ್ದಲಪಾಳ್ಯದ ಚಿಕ್ಕ ಮುನಿಯಪ್ಪ, ಎರಡು ಹಲ್ಲಿನ ಜೊತೆ ಎತ್ತುಗಳಲ್ಲಿ ದೇವನಹಳ್ಳಿ ಶ್ರೀನಿವಾಸ್ ಇವರುಗಳಿಗೆ ಪ್ರಥಮ ಬಹುಮಾನ ಪಡೆದುಕೊಂಡರು.

ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷರಾದ ರಾಜಣ್ಣ, ಪ್ರಭಾರ ಜಿಲ್ಲಾಧಿಕಾರಿ ಡಾ.ಕೆ.ಎನ್ ಅನುರಾಧ, ಉಪವಿಭಾಗಾಧಿಕಾರಿ ದುರ್ಗ ಶ್ರೀ, ತಹಶೀಲ್ದಾರ್ ವಿದ್ಯಾ ವಿಭಾ ರಾಥೋಡ್, ಇಒ ಮುನಿರಾಜು, ಧಾರ್ಮಿಕ ದತ್ತಿ ಸಹಾಯಕ ನಿರ್ದೇಶಕರಾದ ಇ ದಿನೇಶ್, ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಂಗಣ್ಣ, ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಜಗದೀಶ್, ವಿವಿಧ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

3 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

4 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

4 days ago