20 ಲಕ್ಷ ನಗದು, ಬೆಳ್ಳಿ ಆಭರಣಗಳು ಸೇರಿ ಸುಮಾರು 42 ಲಕ್ಷ ರೂ.ಮೌಲ್ಯದ ವಸ್ತುಗಳ ಜಪ್ತಿ; 347 ಲೀಟರ್ ಮದ್ಯ, 13 ಸಾವಿರ ಗ್ರಾಂ ಡ್ರಗ್ಸ್ ಹಾಗೂ 536 ಕುಕ್ಕರ್ ವಶ-ಜಿಲ್ಲಾಧಿಕಾರಿ ಆರ್.ಲತಾ

ರಾಜ್ಯ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ದಾಖಲೆ ರಹಿತವಾಗಿ ಸಾಗಿಸುತ್ತಿದ್ದ 20 ಲಕ್ಷ ರೂ.ನಗದು, ಸುಮಾರು 20 ಲಕ್ಷಕ್ಕೂ ಅಧಿಕ ಮೌಲ್ಯದ 48 ಕೆ.ಜಿ.ಬೆಳ್ಳಿ , ವಿವಿಧ ಉಡುಪು, ಬಟ್ಟೆಗಳು ಸೇರಿ ಸುಮಾರು 42,83,320 ರೂ.ಮೌಲ್ಯದ ವಸ್ತುಗಳನ್ನು ನಿನ್ನೆ ಶುಕ್ರವಾರ ನೆಲಮಂಗಲದಲ್ಲಿ ಪೊಲೀಸರು ಜಪ್ತಿ ಮಾಡಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ 1,66,980 ರೂ.ಮೌಲ್ಯದ 347 ಲೀಟರ್ ಅಕ್ರಮ ಮದ್ಯ, 3 ಲಕ್ಷ ರೂ.ಗಳಿಗೂ ಅಧಿಕ ಮೌಲ್ಯದ 13 ಸಾವಿರ ಗ್ರಾಂ ಡ್ರಗ್ಸ್ ಹಾಗೂ 3 ಲಕ್ಷಕ್ಕೂ ಅಧಿಕ ಮೌಲ್ಯದ 536 ಕುಕ್ಕರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ, ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕು ವ್ಯಾಪ್ತಿಯಲ್ಲಿ ಶುಕ್ರವಾರ ಮಾರ್ಚ್ 24 ರಂದು ಪೊಲೀಸರು ಕಾರ್ಯಾಚರಣೆ ನಡೆಸಿ, ಎರಡು ಕಾರುಗಳಲ್ಲಿ ಸೂಕ್ತ ದಾಖಲೆಗಳಿಲ್ಲದೇ ಸಾಗಣೆ ಮಾಡುತ್ತಿದ್ದ 20 ಲಕ್ಷ ರೂ.ನಗದು,20,22,300 ರೂ.ಮೌಲ್ಯದ 48.156 ಕೆಜಿ ಬೆಳ್ಳಿ,1,23,000 ರೂ.ಮೌಲ್ಯದ 410 ಸೀರೆಗಳು,87,800 ರೂ.ಮೌಲ್ಯದ 439 ಚೂಡಿದಾರ್‌ಗಳು, ಸುಮಾರು 39 ಸಾವಿರ ರೂ.ಮೌಲ್ಯದ ಪ್ಯಾಂಟ್ ಬಟ್ಟೆ,9,800 ರೂ.ಮೌಲ್ಯದ 49 ಶರ್ಟ್ ಪೀಸ್‌ಗಳು ಸೇರಿ ಒಟ್ಟು 42,83,320 ರೂ.ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರ ಮಾರ್ಗದರ್ಶನದಲ್ಲಿ ನೆಲಮಂಗಲ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

2 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

5 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

18 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

19 hours ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

21 hours ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

23 hours ago