ರಾಜ್ಯ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ದಾಖಲೆ ರಹಿತವಾಗಿ ಸಾಗಿಸುತ್ತಿದ್ದ 20 ಲಕ್ಷ ರೂ.ನಗದು, ಸುಮಾರು 20 ಲಕ್ಷಕ್ಕೂ ಅಧಿಕ ಮೌಲ್ಯದ 48 ಕೆ.ಜಿ.ಬೆಳ್ಳಿ , ವಿವಿಧ ಉಡುಪು, ಬಟ್ಟೆಗಳು ಸೇರಿ ಸುಮಾರು 42,83,320 ರೂ.ಮೌಲ್ಯದ ವಸ್ತುಗಳನ್ನು ನಿನ್ನೆ ಶುಕ್ರವಾರ ನೆಲಮಂಗಲದಲ್ಲಿ ಪೊಲೀಸರು ಜಪ್ತಿ ಮಾಡಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 1,66,980 ರೂ.ಮೌಲ್ಯದ 347 ಲೀಟರ್ ಅಕ್ರಮ ಮದ್ಯ, 3 ಲಕ್ಷ ರೂ.ಗಳಿಗೂ ಅಧಿಕ ಮೌಲ್ಯದ 13 ಸಾವಿರ ಗ್ರಾಂ ಡ್ರಗ್ಸ್ ಹಾಗೂ 3 ಲಕ್ಷಕ್ಕೂ ಅಧಿಕ ಮೌಲ್ಯದ 536 ಕುಕ್ಕರ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ, ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕು ವ್ಯಾಪ್ತಿಯಲ್ಲಿ ಶುಕ್ರವಾರ ಮಾರ್ಚ್ 24 ರಂದು ಪೊಲೀಸರು ಕಾರ್ಯಾಚರಣೆ ನಡೆಸಿ, ಎರಡು ಕಾರುಗಳಲ್ಲಿ ಸೂಕ್ತ ದಾಖಲೆಗಳಿಲ್ಲದೇ ಸಾಗಣೆ ಮಾಡುತ್ತಿದ್ದ 20 ಲಕ್ಷ ರೂ.ನಗದು,20,22,300 ರೂ.ಮೌಲ್ಯದ 48.156 ಕೆಜಿ ಬೆಳ್ಳಿ,1,23,000 ರೂ.ಮೌಲ್ಯದ 410 ಸೀರೆಗಳು,87,800 ರೂ.ಮೌಲ್ಯದ 439 ಚೂಡಿದಾರ್ಗಳು, ಸುಮಾರು 39 ಸಾವಿರ ರೂ.ಮೌಲ್ಯದ ಪ್ಯಾಂಟ್ ಬಟ್ಟೆ,9,800 ರೂ.ಮೌಲ್ಯದ 49 ಶರ್ಟ್ ಪೀಸ್ಗಳು ಸೇರಿ ಒಟ್ಟು 42,83,320 ರೂ.ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರ ಮಾರ್ಗದರ್ಶನದಲ್ಲಿ ನೆಲಮಂಗಲ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…