ರಾಜ್ಯ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ದಾಖಲೆ ರಹಿತವಾಗಿ ಸಾಗಿಸುತ್ತಿದ್ದ 20 ಲಕ್ಷ ರೂ.ನಗದು, ಸುಮಾರು 20 ಲಕ್ಷಕ್ಕೂ ಅಧಿಕ ಮೌಲ್ಯದ 48 ಕೆ.ಜಿ.ಬೆಳ್ಳಿ , ವಿವಿಧ ಉಡುಪು, ಬಟ್ಟೆಗಳು ಸೇರಿ ಸುಮಾರು 42,83,320 ರೂ.ಮೌಲ್ಯದ ವಸ್ತುಗಳನ್ನು ನಿನ್ನೆ ಶುಕ್ರವಾರ ನೆಲಮಂಗಲದಲ್ಲಿ ಪೊಲೀಸರು ಜಪ್ತಿ ಮಾಡಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 1,66,980 ರೂ.ಮೌಲ್ಯದ 347 ಲೀಟರ್ ಅಕ್ರಮ ಮದ್ಯ, 3 ಲಕ್ಷ ರೂ.ಗಳಿಗೂ ಅಧಿಕ ಮೌಲ್ಯದ 13 ಸಾವಿರ ಗ್ರಾಂ ಡ್ರಗ್ಸ್ ಹಾಗೂ 3 ಲಕ್ಷಕ್ಕೂ ಅಧಿಕ ಮೌಲ್ಯದ 536 ಕುಕ್ಕರ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ, ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕು ವ್ಯಾಪ್ತಿಯಲ್ಲಿ ಶುಕ್ರವಾರ ಮಾರ್ಚ್ 24 ರಂದು ಪೊಲೀಸರು ಕಾರ್ಯಾಚರಣೆ ನಡೆಸಿ, ಎರಡು ಕಾರುಗಳಲ್ಲಿ ಸೂಕ್ತ ದಾಖಲೆಗಳಿಲ್ಲದೇ ಸಾಗಣೆ ಮಾಡುತ್ತಿದ್ದ 20 ಲಕ್ಷ ರೂ.ನಗದು,20,22,300 ರೂ.ಮೌಲ್ಯದ 48.156 ಕೆಜಿ ಬೆಳ್ಳಿ,1,23,000 ರೂ.ಮೌಲ್ಯದ 410 ಸೀರೆಗಳು,87,800 ರೂ.ಮೌಲ್ಯದ 439 ಚೂಡಿದಾರ್ಗಳು, ಸುಮಾರು 39 ಸಾವಿರ ರೂ.ಮೌಲ್ಯದ ಪ್ಯಾಂಟ್ ಬಟ್ಟೆ,9,800 ರೂ.ಮೌಲ್ಯದ 49 ಶರ್ಟ್ ಪೀಸ್ಗಳು ಸೇರಿ ಒಟ್ಟು 42,83,320 ರೂ.ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರ ಮಾರ್ಗದರ್ಶನದಲ್ಲಿ ನೆಲಮಂಗಲ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…