200 ಕೋಟಿ ವೆಚ್ಚದಲ್ಲಿ 100 ಹೊಸ ಠಾಣೆಗಳ ನಿರ್ಮಾಣ: 10 ಸಾವಿರ ಪೊಲೀಸ್ ವಸತಿ ಮನೆಗಳ ನಿರ್ಮಾಣ: ಪೊಲೀಸರ ಮಕ್ಕಳಿಗಾಗಿ 7 ಪ್ರಮುಖ ಸ್ಥಳಗಳಲ್ಲಿ 7 ಪಬ್ಲಿಕ್ ಶಾಲೆ ತೆರೆಯಲು ನಿರ್ಧಾರ- ಸಿಎಂ ಸಿದ್ದರಾಮಯ್ಯ

ಪೊಲೀಸರು ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ನಮ್ಮ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಪೊಲೀಸ್ ಸಂಸ್ಮರಣಾ ದಿನದ ಅಂಗವಾಗಿ ಹುತಾತ್ಮ ಪೊಲೀಸ್ ಸಿಬ್ಬಂದಿಗೆ ಗೌರವ ನಮನ ಸಲ್ಲಿಸಿ ಮಾತನಾಡಿದರು.

ಜನರ ಪ್ರಾಣ, ಆಸ್ತಿ ರಕ್ಷಿಸುವ ಪೊಲೀಸ್ ಸಿಬ್ಬಂದಿಯ ಹಿತ ರಕ್ಷಿಸಲು ಸರ್ಕಾರ ಬದ್ಧವಾಗಿದೆ. ಇದಕ್ಕಾಗಿ 2025 ರಲ್ಲಿ 10 ಸಾವಿರ ಪೊಲೀಸ್ ವಸತಿ ಮನೆಗಳ ನಿರ್ಮಾಣಕ್ಕೆ ₹2,000 ಕೋಟಿ ನೀಡಿದ್ದೇವೆ. ₹200 ಕೋಟಿ ವೆಚ್ಚದಲ್ಲಿ 100 ಹೊಸ ಠಾಣೆಗಳ ನಿರ್ಮಾಣ ಆಗುತ್ತಿವೆ. ಪೊಲೀಸರ ಮಕ್ಕಳಿಗಾಗಿ 7 ಪ್ರಮುಖ ಸ್ಥಳಗಳಲ್ಲಿ 7 ಪಬ್ಲಿಕ್ ಶಾಲೆಗಳನ್ನು ತೆರೆಯಲು ನಿರ್ಧರಿಸಿದ್ದೇವೆ ಎಂದರು.

ಕಳೆದ ಒಂದು ವರ್ಷದಲ್ಲಿ ದೇಶದಲ್ಲಿ 216 ಮಂದಿ, ರಾಜ್ಯದಲ್ಲಿ 12 ಮಂದಿ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳು ಕರ್ತವ್ಯದ ಮೇಲಿದ್ದಾಗಲೇ ಹುತಾತ್ಮರಾಗಿದ್ದಾರೆ. ಇವರ ಆತ್ಮಕ್ಕೆ ನಾನು ಶಾಂತಿ ಕೋರುತ್ತಾ, ಅವರ ಕುಟುಂಬಗಳಿಗೆ ಸಂತಾಪ ಸೂಚಿಸಲು ಬಯಸುತ್ತೇನೆ. ದೇಶದ, ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವ, ಜನರ ಪ್ರಾಣ, ಮಾನ ಕಾಪಾಡುವ ಪವಿತ್ರ ಕಾರ್ಯದಲ್ಲಿ ಇವರೆಲ್ಲಾ ಹುತಾತ್ಮರಾಗಿದ್ದಾರೆ ಎಂದು ಹೇಳಿದರು.

ದೇಶದಲ್ಲಿ ಆಂತರಿಕ ಭದ್ರತೆ ಕಾಪಾಡುವಲ್ಲಿ, ದೌರ್ಜನ್ಯ, ಅಪರಾಧ, ದುರಂತಗಳನ್ನು ತಡೆಯುವುದರಲ್ಲಿ ಪ್ರಮುಖ ಪಾತ್ರ ವಹಿಸುವುದು ನಮ್ಮ ಪೊಲೀಸ್ ಸಿಬ್ಬಂದಿ. ಹೀಗಾಗಿ ಇವರ ಜವಾಬ್ದಾರಿ ಬಹಳ ದೊಡ್ಡದು ಎಂದು ತಿಳಿಸಿದರು.

ಅಸಮಾನತೆ ಇರುವ ಸಮಾಜದಲ್ಲಿ ಶೋಷಣೆ, ದೌರ್ಜನ್ಯಗಳೂ ಇರುತ್ತವೆ. ಈ ಶೋಷಿತರ ಸಂವಿಧಾನಬದ್ಧವಾದ ಹಕ್ಕುಗಳನ್ನು ಕಾಪಾಡಲು ಮುಖ್ಯ ಪಾತ್ರ ವಹಿಸುವವರು ನಮ್ಮ ಪೊಲೀಸರು. ಇವರ ಜೊತೆಗೆ ಸರ್ಕಾರ ಇರುತ್ತದೆ ಎಂದರು.

ಅಪರಾಧ ತಡೆಯಲು 6000 ಸಾವಿರ ಸಿಸಿ ಕ್ಯಾಮರಾಗಳು, 260 ಕ್ಕೂ ಹೆಚ್ಚು ಹೆದ್ದಾರಿ ಗಸ್ತು ವಾಹನಗಳು ಕರ್ತವ್ಯ ನಿರ್ವಹಿಸುತ್ತಿವೆ ಎಂದು ಹೇಳಿದರು.

Ramesh Babu

Journalist

Recent Posts

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

3 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

1 day ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

1 day ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

1 day ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

1 day ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

2 days ago