ಪೊಲೀಸರು ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ನಮ್ಮ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಪೊಲೀಸ್ ಸಂಸ್ಮರಣಾ ದಿನದ ಅಂಗವಾಗಿ ಹುತಾತ್ಮ ಪೊಲೀಸ್ ಸಿಬ್ಬಂದಿಗೆ ಗೌರವ ನಮನ ಸಲ್ಲಿಸಿ ಮಾತನಾಡಿದರು.
ಜನರ ಪ್ರಾಣ, ಆಸ್ತಿ ರಕ್ಷಿಸುವ ಪೊಲೀಸ್ ಸಿಬ್ಬಂದಿಯ ಹಿತ ರಕ್ಷಿಸಲು ಸರ್ಕಾರ ಬದ್ಧವಾಗಿದೆ. ಇದಕ್ಕಾಗಿ 2025 ರಲ್ಲಿ 10 ಸಾವಿರ ಪೊಲೀಸ್ ವಸತಿ ಮನೆಗಳ ನಿರ್ಮಾಣಕ್ಕೆ ₹2,000 ಕೋಟಿ ನೀಡಿದ್ದೇವೆ. ₹200 ಕೋಟಿ ವೆಚ್ಚದಲ್ಲಿ 100 ಹೊಸ ಠಾಣೆಗಳ ನಿರ್ಮಾಣ ಆಗುತ್ತಿವೆ. ಪೊಲೀಸರ ಮಕ್ಕಳಿಗಾಗಿ 7 ಪ್ರಮುಖ ಸ್ಥಳಗಳಲ್ಲಿ 7 ಪಬ್ಲಿಕ್ ಶಾಲೆಗಳನ್ನು ತೆರೆಯಲು ನಿರ್ಧರಿಸಿದ್ದೇವೆ ಎಂದರು.
ಕಳೆದ ಒಂದು ವರ್ಷದಲ್ಲಿ ದೇಶದಲ್ಲಿ 216 ಮಂದಿ, ರಾಜ್ಯದಲ್ಲಿ 12 ಮಂದಿ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳು ಕರ್ತವ್ಯದ ಮೇಲಿದ್ದಾಗಲೇ ಹುತಾತ್ಮರಾಗಿದ್ದಾರೆ. ಇವರ ಆತ್ಮಕ್ಕೆ ನಾನು ಶಾಂತಿ ಕೋರುತ್ತಾ, ಅವರ ಕುಟುಂಬಗಳಿಗೆ ಸಂತಾಪ ಸೂಚಿಸಲು ಬಯಸುತ್ತೇನೆ. ದೇಶದ, ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವ, ಜನರ ಪ್ರಾಣ, ಮಾನ ಕಾಪಾಡುವ ಪವಿತ್ರ ಕಾರ್ಯದಲ್ಲಿ ಇವರೆಲ್ಲಾ ಹುತಾತ್ಮರಾಗಿದ್ದಾರೆ ಎಂದು ಹೇಳಿದರು.
ದೇಶದಲ್ಲಿ ಆಂತರಿಕ ಭದ್ರತೆ ಕಾಪಾಡುವಲ್ಲಿ, ದೌರ್ಜನ್ಯ, ಅಪರಾಧ, ದುರಂತಗಳನ್ನು ತಡೆಯುವುದರಲ್ಲಿ ಪ್ರಮುಖ ಪಾತ್ರ ವಹಿಸುವುದು ನಮ್ಮ ಪೊಲೀಸ್ ಸಿಬ್ಬಂದಿ. ಹೀಗಾಗಿ ಇವರ ಜವಾಬ್ದಾರಿ ಬಹಳ ದೊಡ್ಡದು ಎಂದು ತಿಳಿಸಿದರು.
ಅಸಮಾನತೆ ಇರುವ ಸಮಾಜದಲ್ಲಿ ಶೋಷಣೆ, ದೌರ್ಜನ್ಯಗಳೂ ಇರುತ್ತವೆ. ಈ ಶೋಷಿತರ ಸಂವಿಧಾನಬದ್ಧವಾದ ಹಕ್ಕುಗಳನ್ನು ಕಾಪಾಡಲು ಮುಖ್ಯ ಪಾತ್ರ ವಹಿಸುವವರು ನಮ್ಮ ಪೊಲೀಸರು. ಇವರ ಜೊತೆಗೆ ಸರ್ಕಾರ ಇರುತ್ತದೆ ಎಂದರು.
ಅಪರಾಧ ತಡೆಯಲು 6000 ಸಾವಿರ ಸಿಸಿ ಕ್ಯಾಮರಾಗಳು, 260 ಕ್ಕೂ ಹೆಚ್ಚು ಹೆದ್ದಾರಿ ಗಸ್ತು ವಾಹನಗಳು ಕರ್ತವ್ಯ ನಿರ್ವಹಿಸುತ್ತಿವೆ ಎಂದು ಹೇಳಿದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…