ಪೊಲೀಸರು ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ನಮ್ಮ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಪೊಲೀಸ್ ಸಂಸ್ಮರಣಾ ದಿನದ ಅಂಗವಾಗಿ ಹುತಾತ್ಮ ಪೊಲೀಸ್ ಸಿಬ್ಬಂದಿಗೆ ಗೌರವ ನಮನ ಸಲ್ಲಿಸಿ ಮಾತನಾಡಿದರು.
ಜನರ ಪ್ರಾಣ, ಆಸ್ತಿ ರಕ್ಷಿಸುವ ಪೊಲೀಸ್ ಸಿಬ್ಬಂದಿಯ ಹಿತ ರಕ್ಷಿಸಲು ಸರ್ಕಾರ ಬದ್ಧವಾಗಿದೆ. ಇದಕ್ಕಾಗಿ 2025 ರಲ್ಲಿ 10 ಸಾವಿರ ಪೊಲೀಸ್ ವಸತಿ ಮನೆಗಳ ನಿರ್ಮಾಣಕ್ಕೆ ₹2,000 ಕೋಟಿ ನೀಡಿದ್ದೇವೆ. ₹200 ಕೋಟಿ ವೆಚ್ಚದಲ್ಲಿ 100 ಹೊಸ ಠಾಣೆಗಳ ನಿರ್ಮಾಣ ಆಗುತ್ತಿವೆ. ಪೊಲೀಸರ ಮಕ್ಕಳಿಗಾಗಿ 7 ಪ್ರಮುಖ ಸ್ಥಳಗಳಲ್ಲಿ 7 ಪಬ್ಲಿಕ್ ಶಾಲೆಗಳನ್ನು ತೆರೆಯಲು ನಿರ್ಧರಿಸಿದ್ದೇವೆ ಎಂದರು.
ಕಳೆದ ಒಂದು ವರ್ಷದಲ್ಲಿ ದೇಶದಲ್ಲಿ 216 ಮಂದಿ, ರಾಜ್ಯದಲ್ಲಿ 12 ಮಂದಿ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳು ಕರ್ತವ್ಯದ ಮೇಲಿದ್ದಾಗಲೇ ಹುತಾತ್ಮರಾಗಿದ್ದಾರೆ. ಇವರ ಆತ್ಮಕ್ಕೆ ನಾನು ಶಾಂತಿ ಕೋರುತ್ತಾ, ಅವರ ಕುಟುಂಬಗಳಿಗೆ ಸಂತಾಪ ಸೂಚಿಸಲು ಬಯಸುತ್ತೇನೆ. ದೇಶದ, ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವ, ಜನರ ಪ್ರಾಣ, ಮಾನ ಕಾಪಾಡುವ ಪವಿತ್ರ ಕಾರ್ಯದಲ್ಲಿ ಇವರೆಲ್ಲಾ ಹುತಾತ್ಮರಾಗಿದ್ದಾರೆ ಎಂದು ಹೇಳಿದರು.
ದೇಶದಲ್ಲಿ ಆಂತರಿಕ ಭದ್ರತೆ ಕಾಪಾಡುವಲ್ಲಿ, ದೌರ್ಜನ್ಯ, ಅಪರಾಧ, ದುರಂತಗಳನ್ನು ತಡೆಯುವುದರಲ್ಲಿ ಪ್ರಮುಖ ಪಾತ್ರ ವಹಿಸುವುದು ನಮ್ಮ ಪೊಲೀಸ್ ಸಿಬ್ಬಂದಿ. ಹೀಗಾಗಿ ಇವರ ಜವಾಬ್ದಾರಿ ಬಹಳ ದೊಡ್ಡದು ಎಂದು ತಿಳಿಸಿದರು.
ಅಸಮಾನತೆ ಇರುವ ಸಮಾಜದಲ್ಲಿ ಶೋಷಣೆ, ದೌರ್ಜನ್ಯಗಳೂ ಇರುತ್ತವೆ. ಈ ಶೋಷಿತರ ಸಂವಿಧಾನಬದ್ಧವಾದ ಹಕ್ಕುಗಳನ್ನು ಕಾಪಾಡಲು ಮುಖ್ಯ ಪಾತ್ರ ವಹಿಸುವವರು ನಮ್ಮ ಪೊಲೀಸರು. ಇವರ ಜೊತೆಗೆ ಸರ್ಕಾರ ಇರುತ್ತದೆ ಎಂದರು.
ಅಪರಾಧ ತಡೆಯಲು 6000 ಸಾವಿರ ಸಿಸಿ ಕ್ಯಾಮರಾಗಳು, 260 ಕ್ಕೂ ಹೆಚ್ಚು ಹೆದ್ದಾರಿ ಗಸ್ತು ವಾಹನಗಳು ಕರ್ತವ್ಯ ನಿರ್ವಹಿಸುತ್ತಿವೆ ಎಂದು ಹೇಳಿದರು.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…