200 ವರ್ಷಗಳ ಇತಿಹಾಸ ಇರುವ ಭದ್ರಕಾಳಮ್ಮ ಸಮೇತ ರುದ್ರದೇವರ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ಕೆ ಚಾಲನೆ

ನಗರದ ಸೌಂದರ್ಯ ಮಹಲ್ ಮುಖ್ಯರಸ್ತೆಯಲ್ಲಿ ಶಿಥಿಲಗೊಂಡಿದ್ದ ಸುಮಾರು 200 ವರ್ಷಗಳ ಇತಿಹಾಸ ಇರುವ ಭದ್ರಕಾಳಮ್ಮ ಸಮೇತ ರುದ್ರದೇವರ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ಕೆ ಓಬದೇನಹಳ್ಳಿ ಕೆ.ಮುನಿಯಪ್ಪ ನೇತೃತ್ವದಲ್ಲಿ ವೀರ ಶೈವ ಸಂಘದ ಪದಾಧಿಕಾರಿಗಳು ಹಾಗೂ ಭೋವಿ ಸಮುದಾಯದ ಮುಖಂಡರು ಪೂಜೆ ಸಲ್ಲಿಸಿ ಸಿಹಿ ಹಂಚುವ ಮೂಲಕ ಜೀರ್ಣೋದ್ಧಾರ ಕಾರ್ಯಕ್ಕೆ ಚಾಲನೆ ನೀಡಿದರು.

ಸಂದರ್ಭದಲ್ಲಿ ಮುಖಂಡರಾದ ಒಬದೇನಹಳ್ಳಿ ಕೆ.ಮುನಿಯಪ್ಪ ಮಾತನಾಡಿ, ಐತಿಹಾಸಿಕ ಭದ್ರಾಕಾಳಮ್ಮ ಸಮೇತ ವೀರಭದ್ರಸ್ವಾಮಿ ದೇವಾಲಯ ಶಿಥಿಲಾವಸ್ಥೆ ತಲುಪಿದ್ದು, ದೇವಾಲಯವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಭೋವಿ ಸಮಾಜ ಹಾಗೂ ವೀರ ಶೈವ ಸಮುದಾಯದ ಮುಖಂಡರು ಒಮ್ಮತದಿಂದ ನಿರ್ಧರಿಸಿ ಜೀರ್ಣೋದ್ಧಾರ ಕಾರ್ಯಕ್ಕೆ ಮುಂದಾಗಿದ್ದು. ಐತಿಹಾಸಿಕ ದೇವಾಲಯದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಿರುವುದು ಸಂತಸ ತಂದಿದೆ ಎಂದರು.

ವೀರ ಶೈವ ಸಮುದಾಯದ ಮುಖಂಡರಾದ ಸೋಮಣ್ಣ ಮಾತನಾಡಿ, ಪಾಳು ಬಿದಿದ್ದ ದೇವಾಲಯವನ್ನು ಅಭಿವೃದ್ಧಿಪಡಿಸುವ ಮೂಲಕ 200 ವರ್ಷಗಳಷ್ಟು ಹಳೆಯ ಭದ್ರಕಾಳಮ್ಮ ಸಮೇತ ವೀರಭದ್ರಸ್ವಾಮಿ ದೇವಾಲಯದ ಉಳಿವಿಗೆ ಎರಡು ಸಮುದಾಯದ ಮುಖಂಡರು ಮುಂದಾಗಿರುವುದು ಸಂತಸ ತಂದಿದೆ. ನಗರ ಭಾಗದಲ್ಲಿ ಕೇವಲ ಒಂದು ವೀರಭದ್ರಸ್ವಾಮಿ ದೇವಾಲಯವಿದ್ದು, ಈ ಜೀರ್ಣೋದ್ಧಾರ ಕಾರ್ಯವು ಆದಷ್ಟು ತೀವ್ರ ಗತಿಯಲ್ಲಿ ನಡೆಯಲಿದೆ ಎಂದರು.

ಈ ವೇಳೆ ವೀರ ಶೈವ ಸಂಘದ ಅಧ್ಯಕ್ಷರಾದ ಸೋಮ ರುದ್ರಶರ್ಮ, ಕಾರ್ಯದರ್ಶಿ ಮಂಜುನಾಥ್, ಖಜಾಂಜಿ ಗಿರೀಶ್, ಮುಖಂಡರಾದ ಪಣೀಶ್, ಪರಮೇಶ್, ಗಿರೀಶ್ , ಶಿವಾನಂದಪ್ಪ , ಮಂಜುನಾಥ್ , ಉಮಾಪತಿ , ಸಿದ್ದಣ್ಣ , ನಗರ ಸಭಾ ಸದಸ್ಯ ಪದ್ಮರಾಜು, ಸದಸ್ಯರಾದ ಭಾಸ್ಕರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಆಘಾತದಲ್ಲಿ ಮಡಿದ ಬೆಸ್ಕಾಂ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಿಸಿದ ಇಂಧನ ಸಚಿವ ಜಾರ್ಜ್‌

ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್‌ ತಲಾ ಒಂದು ಕೋಟಿ ರೂ.…

6 hours ago

ಎಸ್ಮಾ ಜಾರಿ ಮಾಡಿದರೂ ಬಗ್ಗಲ್ಲ.. ಜಗ್ಗಲ್ಲ.. ಡಿಸಿಎಂ ಡಿಕೆಶಿಗೆ ಶಾಸಕ ಧೀರಜ್ ಮುನಿರಾಜು ಸವಾಲ್

ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…

7 hours ago

ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್ ನಿಸಾರ್ ನೇಮಕ

ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…

8 hours ago

ಅಂಗವಿಕಲ ಅಭ್ಯರ್ಥಿಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು 'ಅಧ್ಯಯನ ವೃತ್ತ' (ಸ್ಟಡಿ…

8 hours ago

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟ: 10 ಸಾವಿರ ಕಾಂಡೋಮ್ ಗಳು ಕೇವಲ 3 ದಿನದಲ್ಲಿ ಖಾಲಿ: ಇನ್ನೂ ಹೆಚ್ಚಿನ ಕಾಂಡೋಮ್ ಗಳು ಬೇಕು ಎಂಬ ಬೇಡಿಕೆ

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…

12 hours ago

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಬಿದ್ದು ಸಾ*ವು!

ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…

19 hours ago