200 ವರ್ಷಗಳ ಇತಿಹಾಸ ಇರುವ ಭದ್ರಕಾಳಮ್ಮ ಸಮೇತ ರುದ್ರದೇವರ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ಕೆ ಚಾಲನೆ

ನಗರದ ಸೌಂದರ್ಯ ಮಹಲ್ ಮುಖ್ಯರಸ್ತೆಯಲ್ಲಿ ಶಿಥಿಲಗೊಂಡಿದ್ದ ಸುಮಾರು 200 ವರ್ಷಗಳ ಇತಿಹಾಸ ಇರುವ ಭದ್ರಕಾಳಮ್ಮ ಸಮೇತ ರುದ್ರದೇವರ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ಕೆ ಓಬದೇನಹಳ್ಳಿ ಕೆ.ಮುನಿಯಪ್ಪ ನೇತೃತ್ವದಲ್ಲಿ ವೀರ ಶೈವ ಸಂಘದ ಪದಾಧಿಕಾರಿಗಳು ಹಾಗೂ ಭೋವಿ ಸಮುದಾಯದ ಮುಖಂಡರು ಪೂಜೆ ಸಲ್ಲಿಸಿ ಸಿಹಿ ಹಂಚುವ ಮೂಲಕ ಜೀರ್ಣೋದ್ಧಾರ ಕಾರ್ಯಕ್ಕೆ ಚಾಲನೆ ನೀಡಿದರು.

ಸಂದರ್ಭದಲ್ಲಿ ಮುಖಂಡರಾದ ಒಬದೇನಹಳ್ಳಿ ಕೆ.ಮುನಿಯಪ್ಪ ಮಾತನಾಡಿ, ಐತಿಹಾಸಿಕ ಭದ್ರಾಕಾಳಮ್ಮ ಸಮೇತ ವೀರಭದ್ರಸ್ವಾಮಿ ದೇವಾಲಯ ಶಿಥಿಲಾವಸ್ಥೆ ತಲುಪಿದ್ದು, ದೇವಾಲಯವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಭೋವಿ ಸಮಾಜ ಹಾಗೂ ವೀರ ಶೈವ ಸಮುದಾಯದ ಮುಖಂಡರು ಒಮ್ಮತದಿಂದ ನಿರ್ಧರಿಸಿ ಜೀರ್ಣೋದ್ಧಾರ ಕಾರ್ಯಕ್ಕೆ ಮುಂದಾಗಿದ್ದು. ಐತಿಹಾಸಿಕ ದೇವಾಲಯದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಿರುವುದು ಸಂತಸ ತಂದಿದೆ ಎಂದರು.

ವೀರ ಶೈವ ಸಮುದಾಯದ ಮುಖಂಡರಾದ ಸೋಮಣ್ಣ ಮಾತನಾಡಿ, ಪಾಳು ಬಿದಿದ್ದ ದೇವಾಲಯವನ್ನು ಅಭಿವೃದ್ಧಿಪಡಿಸುವ ಮೂಲಕ 200 ವರ್ಷಗಳಷ್ಟು ಹಳೆಯ ಭದ್ರಕಾಳಮ್ಮ ಸಮೇತ ವೀರಭದ್ರಸ್ವಾಮಿ ದೇವಾಲಯದ ಉಳಿವಿಗೆ ಎರಡು ಸಮುದಾಯದ ಮುಖಂಡರು ಮುಂದಾಗಿರುವುದು ಸಂತಸ ತಂದಿದೆ. ನಗರ ಭಾಗದಲ್ಲಿ ಕೇವಲ ಒಂದು ವೀರಭದ್ರಸ್ವಾಮಿ ದೇವಾಲಯವಿದ್ದು, ಈ ಜೀರ್ಣೋದ್ಧಾರ ಕಾರ್ಯವು ಆದಷ್ಟು ತೀವ್ರ ಗತಿಯಲ್ಲಿ ನಡೆಯಲಿದೆ ಎಂದರು.

ಈ ವೇಳೆ ವೀರ ಶೈವ ಸಂಘದ ಅಧ್ಯಕ್ಷರಾದ ಸೋಮ ರುದ್ರಶರ್ಮ, ಕಾರ್ಯದರ್ಶಿ ಮಂಜುನಾಥ್, ಖಜಾಂಜಿ ಗಿರೀಶ್, ಮುಖಂಡರಾದ ಪಣೀಶ್, ಪರಮೇಶ್, ಗಿರೀಶ್ , ಶಿವಾನಂದಪ್ಪ , ಮಂಜುನಾಥ್ , ಉಮಾಪತಿ , ಸಿದ್ದಣ್ಣ , ನಗರ ಸಭಾ ಸದಸ್ಯ ಪದ್ಮರಾಜು, ಸದಸ್ಯರಾದ ಭಾಸ್ಕರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

10 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

11 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

17 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

18 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

23 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago