ನಗರದ ಸೌಂದರ್ಯ ಮಹಲ್ ಮುಖ್ಯರಸ್ತೆಯಲ್ಲಿ ಶಿಥಿಲಗೊಂಡಿದ್ದ ಸುಮಾರು 200 ವರ್ಷಗಳ ಇತಿಹಾಸ ಇರುವ ಭದ್ರಕಾಳಮ್ಮ ಸಮೇತ ರುದ್ರದೇವರ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ಕೆ ಓಬದೇನಹಳ್ಳಿ ಕೆ.ಮುನಿಯಪ್ಪ ನೇತೃತ್ವದಲ್ಲಿ ವೀರ ಶೈವ ಸಂಘದ ಪದಾಧಿಕಾರಿಗಳು ಹಾಗೂ ಭೋವಿ ಸಮುದಾಯದ ಮುಖಂಡರು ಪೂಜೆ ಸಲ್ಲಿಸಿ ಸಿಹಿ ಹಂಚುವ ಮೂಲಕ ಜೀರ್ಣೋದ್ಧಾರ ಕಾರ್ಯಕ್ಕೆ ಚಾಲನೆ ನೀಡಿದರು.
ಸಂದರ್ಭದಲ್ಲಿ ಮುಖಂಡರಾದ ಒಬದೇನಹಳ್ಳಿ ಕೆ.ಮುನಿಯಪ್ಪ ಮಾತನಾಡಿ, ಐತಿಹಾಸಿಕ ಭದ್ರಾಕಾಳಮ್ಮ ಸಮೇತ ವೀರಭದ್ರಸ್ವಾಮಿ ದೇವಾಲಯ ಶಿಥಿಲಾವಸ್ಥೆ ತಲುಪಿದ್ದು, ದೇವಾಲಯವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಭೋವಿ ಸಮಾಜ ಹಾಗೂ ವೀರ ಶೈವ ಸಮುದಾಯದ ಮುಖಂಡರು ಒಮ್ಮತದಿಂದ ನಿರ್ಧರಿಸಿ ಜೀರ್ಣೋದ್ಧಾರ ಕಾರ್ಯಕ್ಕೆ ಮುಂದಾಗಿದ್ದು. ಐತಿಹಾಸಿಕ ದೇವಾಲಯದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಿರುವುದು ಸಂತಸ ತಂದಿದೆ ಎಂದರು.
ಈ ವೇಳೆ ವೀರ ಶೈವ ಸಂಘದ ಅಧ್ಯಕ್ಷರಾದ ಸೋಮ ರುದ್ರಶರ್ಮ, ಕಾರ್ಯದರ್ಶಿ ಮಂಜುನಾಥ್, ಖಜಾಂಜಿ ಗಿರೀಶ್, ಮುಖಂಡರಾದ ಪಣೀಶ್, ಪರಮೇಶ್, ಗಿರೀಶ್ , ಶಿವಾನಂದಪ್ಪ , ಮಂಜುನಾಥ್ , ಉಮಾಪತಿ , ಸಿದ್ದಣ್ಣ , ನಗರ ಸಭಾ ಸದಸ್ಯ ಪದ್ಮರಾಜು, ಸದಸ್ಯರಾದ ಭಾಸ್ಕರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…
ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…