ನಗರದ ಸೌಂದರ್ಯ ಮಹಲ್ ಮುಖ್ಯರಸ್ತೆಯಲ್ಲಿ ಶಿಥಿಲಗೊಂಡಿದ್ದ ಸುಮಾರು 200 ವರ್ಷಗಳ ಇತಿಹಾಸ ಇರುವ ಭದ್ರಕಾಳಮ್ಮ ಸಮೇತ ರುದ್ರದೇವರ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ಕೆ ಓಬದೇನಹಳ್ಳಿ ಕೆ.ಮುನಿಯಪ್ಪ ನೇತೃತ್ವದಲ್ಲಿ ವೀರ ಶೈವ ಸಂಘದ ಪದಾಧಿಕಾರಿಗಳು ಹಾಗೂ ಭೋವಿ ಸಮುದಾಯದ ಮುಖಂಡರು ಪೂಜೆ ಸಲ್ಲಿಸಿ ಸಿಹಿ ಹಂಚುವ ಮೂಲಕ ಜೀರ್ಣೋದ್ಧಾರ ಕಾರ್ಯಕ್ಕೆ ಚಾಲನೆ ನೀಡಿದರು.
ಸಂದರ್ಭದಲ್ಲಿ ಮುಖಂಡರಾದ ಒಬದೇನಹಳ್ಳಿ ಕೆ.ಮುನಿಯಪ್ಪ ಮಾತನಾಡಿ, ಐತಿಹಾಸಿಕ ಭದ್ರಾಕಾಳಮ್ಮ ಸಮೇತ ವೀರಭದ್ರಸ್ವಾಮಿ ದೇವಾಲಯ ಶಿಥಿಲಾವಸ್ಥೆ ತಲುಪಿದ್ದು, ದೇವಾಲಯವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಭೋವಿ ಸಮಾಜ ಹಾಗೂ ವೀರ ಶೈವ ಸಮುದಾಯದ ಮುಖಂಡರು ಒಮ್ಮತದಿಂದ ನಿರ್ಧರಿಸಿ ಜೀರ್ಣೋದ್ಧಾರ ಕಾರ್ಯಕ್ಕೆ ಮುಂದಾಗಿದ್ದು. ಐತಿಹಾಸಿಕ ದೇವಾಲಯದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಿರುವುದು ಸಂತಸ ತಂದಿದೆ ಎಂದರು.
ಈ ವೇಳೆ ವೀರ ಶೈವ ಸಂಘದ ಅಧ್ಯಕ್ಷರಾದ ಸೋಮ ರುದ್ರಶರ್ಮ, ಕಾರ್ಯದರ್ಶಿ ಮಂಜುನಾಥ್, ಖಜಾಂಜಿ ಗಿರೀಶ್, ಮುಖಂಡರಾದ ಪಣೀಶ್, ಪರಮೇಶ್, ಗಿರೀಶ್ , ಶಿವಾನಂದಪ್ಪ , ಮಂಜುನಾಥ್ , ಉಮಾಪತಿ , ಸಿದ್ದಣ್ಣ , ನಗರ ಸಭಾ ಸದಸ್ಯ ಪದ್ಮರಾಜು, ಸದಸ್ಯರಾದ ಭಾಸ್ಕರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…