200 ವರ್ಷಗಳ ಇತಿಹಾಸ ಇರುವ ಭದ್ರಕಾಳಮ್ಮ ಸಮೇತ ರುದ್ರದೇವರ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ಕೆ ಚಾಲನೆ

ನಗರದ ಸೌಂದರ್ಯ ಮಹಲ್ ಮುಖ್ಯರಸ್ತೆಯಲ್ಲಿ ಶಿಥಿಲಗೊಂಡಿದ್ದ ಸುಮಾರು 200 ವರ್ಷಗಳ ಇತಿಹಾಸ ಇರುವ ಭದ್ರಕಾಳಮ್ಮ ಸಮೇತ ರುದ್ರದೇವರ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ಕೆ ಓಬದೇನಹಳ್ಳಿ ಕೆ.ಮುನಿಯಪ್ಪ ನೇತೃತ್ವದಲ್ಲಿ ವೀರ ಶೈವ ಸಂಘದ ಪದಾಧಿಕಾರಿಗಳು ಹಾಗೂ ಭೋವಿ ಸಮುದಾಯದ ಮುಖಂಡರು ಪೂಜೆ ಸಲ್ಲಿಸಿ ಸಿಹಿ ಹಂಚುವ ಮೂಲಕ ಜೀರ್ಣೋದ್ಧಾರ ಕಾರ್ಯಕ್ಕೆ ಚಾಲನೆ ನೀಡಿದರು.

ಸಂದರ್ಭದಲ್ಲಿ ಮುಖಂಡರಾದ ಒಬದೇನಹಳ್ಳಿ ಕೆ.ಮುನಿಯಪ್ಪ ಮಾತನಾಡಿ, ಐತಿಹಾಸಿಕ ಭದ್ರಾಕಾಳಮ್ಮ ಸಮೇತ ವೀರಭದ್ರಸ್ವಾಮಿ ದೇವಾಲಯ ಶಿಥಿಲಾವಸ್ಥೆ ತಲುಪಿದ್ದು, ದೇವಾಲಯವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಭೋವಿ ಸಮಾಜ ಹಾಗೂ ವೀರ ಶೈವ ಸಮುದಾಯದ ಮುಖಂಡರು ಒಮ್ಮತದಿಂದ ನಿರ್ಧರಿಸಿ ಜೀರ್ಣೋದ್ಧಾರ ಕಾರ್ಯಕ್ಕೆ ಮುಂದಾಗಿದ್ದು. ಐತಿಹಾಸಿಕ ದೇವಾಲಯದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಿರುವುದು ಸಂತಸ ತಂದಿದೆ ಎಂದರು.

ವೀರ ಶೈವ ಸಮುದಾಯದ ಮುಖಂಡರಾದ ಸೋಮಣ್ಣ ಮಾತನಾಡಿ, ಪಾಳು ಬಿದಿದ್ದ ದೇವಾಲಯವನ್ನು ಅಭಿವೃದ್ಧಿಪಡಿಸುವ ಮೂಲಕ 200 ವರ್ಷಗಳಷ್ಟು ಹಳೆಯ ಭದ್ರಕಾಳಮ್ಮ ಸಮೇತ ವೀರಭದ್ರಸ್ವಾಮಿ ದೇವಾಲಯದ ಉಳಿವಿಗೆ ಎರಡು ಸಮುದಾಯದ ಮುಖಂಡರು ಮುಂದಾಗಿರುವುದು ಸಂತಸ ತಂದಿದೆ. ನಗರ ಭಾಗದಲ್ಲಿ ಕೇವಲ ಒಂದು ವೀರಭದ್ರಸ್ವಾಮಿ ದೇವಾಲಯವಿದ್ದು, ಈ ಜೀರ್ಣೋದ್ಧಾರ ಕಾರ್ಯವು ಆದಷ್ಟು ತೀವ್ರ ಗತಿಯಲ್ಲಿ ನಡೆಯಲಿದೆ ಎಂದರು.

ಈ ವೇಳೆ ವೀರ ಶೈವ ಸಂಘದ ಅಧ್ಯಕ್ಷರಾದ ಸೋಮ ರುದ್ರಶರ್ಮ, ಕಾರ್ಯದರ್ಶಿ ಮಂಜುನಾಥ್, ಖಜಾಂಜಿ ಗಿರೀಶ್, ಮುಖಂಡರಾದ ಪಣೀಶ್, ಪರಮೇಶ್, ಗಿರೀಶ್ , ಶಿವಾನಂದಪ್ಪ , ಮಂಜುನಾಥ್ , ಉಮಾಪತಿ , ಸಿದ್ದಣ್ಣ , ನಗರ ಸಭಾ ಸದಸ್ಯ ಪದ್ಮರಾಜು, ಸದಸ್ಯರಾದ ಭಾಸ್ಕರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Ramesh Babu

Journalist

Recent Posts

ವಿಜಯಪುರದ ಬಸವ ಕಲ್ಯಾಣ ಮಠದಲ್ಲಿ 38ನೇ ವರ್ಷದ ಕಡ್ಲೆಕಾಯಿ ಪರಿಷೆ

ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…

14 minutes ago

ಸಾಸಲು ಹೋಬಳಿಯಲ್ಲಿ ಮಿತಿಮೀರಿದ ಕೃಷಿ ಬೋರ್ ವೆಲ್ ಕೇಬಲ್ ಕಳ್ಳರ ಹಾವಳಿ: ಒಂದೇ ದಿನ ಹಲವು ಕಡೆ ಕೇಬಲ್ ಕಟ್

ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…

3 hours ago

ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ

ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…

5 hours ago

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ: ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಪಂ ವಿಫಲ: ಸಿಡಿದ್ದೆದ್ದ ದಲಿತರು

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…

8 hours ago

ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ:ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ: ಬೇಡಿಕೆ ಯಾವುದು….?

ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…

20 hours ago

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

22 hours ago