ನಗರದ ಸೌಂದರ್ಯ ಮಹಲ್ ಮುಖ್ಯರಸ್ತೆಯಲ್ಲಿ ಶಿಥಿಲಗೊಂಡಿದ್ದ ಸುಮಾರು 200 ವರ್ಷಗಳ ಇತಿಹಾಸ ಇರುವ ಭದ್ರಕಾಳಮ್ಮ ಸಮೇತ ರುದ್ರದೇವರ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ಕೆ ಓಬದೇನಹಳ್ಳಿ ಕೆ.ಮುನಿಯಪ್ಪ ನೇತೃತ್ವದಲ್ಲಿ ವೀರ ಶೈವ ಸಂಘದ ಪದಾಧಿಕಾರಿಗಳು ಹಾಗೂ ಭೋವಿ ಸಮುದಾಯದ ಮುಖಂಡರು ಪೂಜೆ ಸಲ್ಲಿಸಿ ಸಿಹಿ ಹಂಚುವ ಮೂಲಕ ಜೀರ್ಣೋದ್ಧಾರ ಕಾರ್ಯಕ್ಕೆ ಚಾಲನೆ ನೀಡಿದರು.
ಸಂದರ್ಭದಲ್ಲಿ ಮುಖಂಡರಾದ ಒಬದೇನಹಳ್ಳಿ ಕೆ.ಮುನಿಯಪ್ಪ ಮಾತನಾಡಿ, ಐತಿಹಾಸಿಕ ಭದ್ರಾಕಾಳಮ್ಮ ಸಮೇತ ವೀರಭದ್ರಸ್ವಾಮಿ ದೇವಾಲಯ ಶಿಥಿಲಾವಸ್ಥೆ ತಲುಪಿದ್ದು, ದೇವಾಲಯವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಭೋವಿ ಸಮಾಜ ಹಾಗೂ ವೀರ ಶೈವ ಸಮುದಾಯದ ಮುಖಂಡರು ಒಮ್ಮತದಿಂದ ನಿರ್ಧರಿಸಿ ಜೀರ್ಣೋದ್ಧಾರ ಕಾರ್ಯಕ್ಕೆ ಮುಂದಾಗಿದ್ದು. ಐತಿಹಾಸಿಕ ದೇವಾಲಯದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಿರುವುದು ಸಂತಸ ತಂದಿದೆ ಎಂದರು.
ಈ ವೇಳೆ ವೀರ ಶೈವ ಸಂಘದ ಅಧ್ಯಕ್ಷರಾದ ಸೋಮ ರುದ್ರಶರ್ಮ, ಕಾರ್ಯದರ್ಶಿ ಮಂಜುನಾಥ್, ಖಜಾಂಜಿ ಗಿರೀಶ್, ಮುಖಂಡರಾದ ಪಣೀಶ್, ಪರಮೇಶ್, ಗಿರೀಶ್ , ಶಿವಾನಂದಪ್ಪ , ಮಂಜುನಾಥ್ , ಉಮಾಪತಿ , ಸಿದ್ದಣ್ಣ , ನಗರ ಸಭಾ ಸದಸ್ಯ ಪದ್ಮರಾಜು, ಸದಸ್ಯರಾದ ಭಾಸ್ಕರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…