200 ವರ್ಷಗಳ ಇತಿಹಾಸ ಇರುವ ಭದ್ರಕಾಳಮ್ಮ ಸಮೇತ ರುದ್ರದೇವರ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ಕೆ ಚಾಲನೆ

ನಗರದ ಸೌಂದರ್ಯ ಮಹಲ್ ಮುಖ್ಯರಸ್ತೆಯಲ್ಲಿ ಶಿಥಿಲಗೊಂಡಿದ್ದ ಸುಮಾರು 200 ವರ್ಷಗಳ ಇತಿಹಾಸ ಇರುವ ಭದ್ರಕಾಳಮ್ಮ ಸಮೇತ ರುದ್ರದೇವರ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ಕೆ ಓಬದೇನಹಳ್ಳಿ ಕೆ.ಮುನಿಯಪ್ಪ ನೇತೃತ್ವದಲ್ಲಿ ವೀರ ಶೈವ ಸಂಘದ ಪದಾಧಿಕಾರಿಗಳು ಹಾಗೂ ಭೋವಿ ಸಮುದಾಯದ ಮುಖಂಡರು ಪೂಜೆ ಸಲ್ಲಿಸಿ ಸಿಹಿ ಹಂಚುವ ಮೂಲಕ ಜೀರ್ಣೋದ್ಧಾರ ಕಾರ್ಯಕ್ಕೆ ಚಾಲನೆ ನೀಡಿದರು.

ಸಂದರ್ಭದಲ್ಲಿ ಮುಖಂಡರಾದ ಒಬದೇನಹಳ್ಳಿ ಕೆ.ಮುನಿಯಪ್ಪ ಮಾತನಾಡಿ, ಐತಿಹಾಸಿಕ ಭದ್ರಾಕಾಳಮ್ಮ ಸಮೇತ ವೀರಭದ್ರಸ್ವಾಮಿ ದೇವಾಲಯ ಶಿಥಿಲಾವಸ್ಥೆ ತಲುಪಿದ್ದು, ದೇವಾಲಯವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಭೋವಿ ಸಮಾಜ ಹಾಗೂ ವೀರ ಶೈವ ಸಮುದಾಯದ ಮುಖಂಡರು ಒಮ್ಮತದಿಂದ ನಿರ್ಧರಿಸಿ ಜೀರ್ಣೋದ್ಧಾರ ಕಾರ್ಯಕ್ಕೆ ಮುಂದಾಗಿದ್ದು. ಐತಿಹಾಸಿಕ ದೇವಾಲಯದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಿರುವುದು ಸಂತಸ ತಂದಿದೆ ಎಂದರು.

ವೀರ ಶೈವ ಸಮುದಾಯದ ಮುಖಂಡರಾದ ಸೋಮಣ್ಣ ಮಾತನಾಡಿ, ಪಾಳು ಬಿದಿದ್ದ ದೇವಾಲಯವನ್ನು ಅಭಿವೃದ್ಧಿಪಡಿಸುವ ಮೂಲಕ 200 ವರ್ಷಗಳಷ್ಟು ಹಳೆಯ ಭದ್ರಕಾಳಮ್ಮ ಸಮೇತ ವೀರಭದ್ರಸ್ವಾಮಿ ದೇವಾಲಯದ ಉಳಿವಿಗೆ ಎರಡು ಸಮುದಾಯದ ಮುಖಂಡರು ಮುಂದಾಗಿರುವುದು ಸಂತಸ ತಂದಿದೆ. ನಗರ ಭಾಗದಲ್ಲಿ ಕೇವಲ ಒಂದು ವೀರಭದ್ರಸ್ವಾಮಿ ದೇವಾಲಯವಿದ್ದು, ಈ ಜೀರ್ಣೋದ್ಧಾರ ಕಾರ್ಯವು ಆದಷ್ಟು ತೀವ್ರ ಗತಿಯಲ್ಲಿ ನಡೆಯಲಿದೆ ಎಂದರು.

ಈ ವೇಳೆ ವೀರ ಶೈವ ಸಂಘದ ಅಧ್ಯಕ್ಷರಾದ ಸೋಮ ರುದ್ರಶರ್ಮ, ಕಾರ್ಯದರ್ಶಿ ಮಂಜುನಾಥ್, ಖಜಾಂಜಿ ಗಿರೀಶ್, ಮುಖಂಡರಾದ ಪಣೀಶ್, ಪರಮೇಶ್, ಗಿರೀಶ್ , ಶಿವಾನಂದಪ್ಪ , ಮಂಜುನಾಥ್ , ಉಮಾಪತಿ , ಸಿದ್ದಣ್ಣ , ನಗರ ಸಭಾ ಸದಸ್ಯ ಪದ್ಮರಾಜು, ಸದಸ್ಯರಾದ ಭಾಸ್ಕರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

10 minutes ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

1 day ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

1 day ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago