200 ವರ್ಷಗಳ ಇತಿಹಾಸ ಇರುವ ಭದ್ರಕಾಳಮ್ಮ ಸಮೇತ ರುದ್ರದೇವರ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ಕೆ ಚಾಲನೆ

ನಗರದ ಸೌಂದರ್ಯ ಮಹಲ್ ಮುಖ್ಯರಸ್ತೆಯಲ್ಲಿ ಶಿಥಿಲಗೊಂಡಿದ್ದ ಸುಮಾರು 200 ವರ್ಷಗಳ ಇತಿಹಾಸ ಇರುವ ಭದ್ರಕಾಳಮ್ಮ ಸಮೇತ ರುದ್ರದೇವರ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ಕೆ ಓಬದೇನಹಳ್ಳಿ ಕೆ.ಮುನಿಯಪ್ಪ ನೇತೃತ್ವದಲ್ಲಿ ವೀರ ಶೈವ ಸಂಘದ ಪದಾಧಿಕಾರಿಗಳು ಹಾಗೂ ಭೋವಿ ಸಮುದಾಯದ ಮುಖಂಡರು ಪೂಜೆ ಸಲ್ಲಿಸಿ ಸಿಹಿ ಹಂಚುವ ಮೂಲಕ ಜೀರ್ಣೋದ್ಧಾರ ಕಾರ್ಯಕ್ಕೆ ಚಾಲನೆ ನೀಡಿದರು.

ಸಂದರ್ಭದಲ್ಲಿ ಮುಖಂಡರಾದ ಒಬದೇನಹಳ್ಳಿ ಕೆ.ಮುನಿಯಪ್ಪ ಮಾತನಾಡಿ, ಐತಿಹಾಸಿಕ ಭದ್ರಾಕಾಳಮ್ಮ ಸಮೇತ ವೀರಭದ್ರಸ್ವಾಮಿ ದೇವಾಲಯ ಶಿಥಿಲಾವಸ್ಥೆ ತಲುಪಿದ್ದು, ದೇವಾಲಯವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಭೋವಿ ಸಮಾಜ ಹಾಗೂ ವೀರ ಶೈವ ಸಮುದಾಯದ ಮುಖಂಡರು ಒಮ್ಮತದಿಂದ ನಿರ್ಧರಿಸಿ ಜೀರ್ಣೋದ್ಧಾರ ಕಾರ್ಯಕ್ಕೆ ಮುಂದಾಗಿದ್ದು. ಐತಿಹಾಸಿಕ ದೇವಾಲಯದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಿರುವುದು ಸಂತಸ ತಂದಿದೆ ಎಂದರು.

ವೀರ ಶೈವ ಸಮುದಾಯದ ಮುಖಂಡರಾದ ಸೋಮಣ್ಣ ಮಾತನಾಡಿ, ಪಾಳು ಬಿದಿದ್ದ ದೇವಾಲಯವನ್ನು ಅಭಿವೃದ್ಧಿಪಡಿಸುವ ಮೂಲಕ 200 ವರ್ಷಗಳಷ್ಟು ಹಳೆಯ ಭದ್ರಕಾಳಮ್ಮ ಸಮೇತ ವೀರಭದ್ರಸ್ವಾಮಿ ದೇವಾಲಯದ ಉಳಿವಿಗೆ ಎರಡು ಸಮುದಾಯದ ಮುಖಂಡರು ಮುಂದಾಗಿರುವುದು ಸಂತಸ ತಂದಿದೆ. ನಗರ ಭಾಗದಲ್ಲಿ ಕೇವಲ ಒಂದು ವೀರಭದ್ರಸ್ವಾಮಿ ದೇವಾಲಯವಿದ್ದು, ಈ ಜೀರ್ಣೋದ್ಧಾರ ಕಾರ್ಯವು ಆದಷ್ಟು ತೀವ್ರ ಗತಿಯಲ್ಲಿ ನಡೆಯಲಿದೆ ಎಂದರು.

ಈ ವೇಳೆ ವೀರ ಶೈವ ಸಂಘದ ಅಧ್ಯಕ್ಷರಾದ ಸೋಮ ರುದ್ರಶರ್ಮ, ಕಾರ್ಯದರ್ಶಿ ಮಂಜುನಾಥ್, ಖಜಾಂಜಿ ಗಿರೀಶ್, ಮುಖಂಡರಾದ ಪಣೀಶ್, ಪರಮೇಶ್, ಗಿರೀಶ್ , ಶಿವಾನಂದಪ್ಪ , ಮಂಜುನಾಥ್ , ಉಮಾಪತಿ , ಸಿದ್ದಣ್ಣ , ನಗರ ಸಭಾ ಸದಸ್ಯ ಪದ್ಮರಾಜು, ಸದಸ್ಯರಾದ ಭಾಸ್ಕರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

7 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

8 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

9 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

9 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

13 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

15 hours ago