200 ವರ್ಷಗಳ ಇತಿಹಾಸ ಇರುವ ಭದ್ರಕಾಳಮ್ಮ ಸಮೇತ ರುದ್ರದೇವರ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ಕೆ ಚಾಲನೆ

ನಗರದ ಸೌಂದರ್ಯ ಮಹಲ್ ಮುಖ್ಯರಸ್ತೆಯಲ್ಲಿ ಶಿಥಿಲಗೊಂಡಿದ್ದ ಸುಮಾರು 200 ವರ್ಷಗಳ ಇತಿಹಾಸ ಇರುವ ಭದ್ರಕಾಳಮ್ಮ ಸಮೇತ ರುದ್ರದೇವರ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ಕೆ ಓಬದೇನಹಳ್ಳಿ ಕೆ.ಮುನಿಯಪ್ಪ ನೇತೃತ್ವದಲ್ಲಿ ವೀರ ಶೈವ ಸಂಘದ ಪದಾಧಿಕಾರಿಗಳು ಹಾಗೂ ಭೋವಿ ಸಮುದಾಯದ ಮುಖಂಡರು ಪೂಜೆ ಸಲ್ಲಿಸಿ ಸಿಹಿ ಹಂಚುವ ಮೂಲಕ ಜೀರ್ಣೋದ್ಧಾರ ಕಾರ್ಯಕ್ಕೆ ಚಾಲನೆ ನೀಡಿದರು.

ಸಂದರ್ಭದಲ್ಲಿ ಮುಖಂಡರಾದ ಒಬದೇನಹಳ್ಳಿ ಕೆ.ಮುನಿಯಪ್ಪ ಮಾತನಾಡಿ, ಐತಿಹಾಸಿಕ ಭದ್ರಾಕಾಳಮ್ಮ ಸಮೇತ ವೀರಭದ್ರಸ್ವಾಮಿ ದೇವಾಲಯ ಶಿಥಿಲಾವಸ್ಥೆ ತಲುಪಿದ್ದು, ದೇವಾಲಯವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಭೋವಿ ಸಮಾಜ ಹಾಗೂ ವೀರ ಶೈವ ಸಮುದಾಯದ ಮುಖಂಡರು ಒಮ್ಮತದಿಂದ ನಿರ್ಧರಿಸಿ ಜೀರ್ಣೋದ್ಧಾರ ಕಾರ್ಯಕ್ಕೆ ಮುಂದಾಗಿದ್ದು. ಐತಿಹಾಸಿಕ ದೇವಾಲಯದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಿರುವುದು ಸಂತಸ ತಂದಿದೆ ಎಂದರು.

ವೀರ ಶೈವ ಸಮುದಾಯದ ಮುಖಂಡರಾದ ಸೋಮಣ್ಣ ಮಾತನಾಡಿ, ಪಾಳು ಬಿದಿದ್ದ ದೇವಾಲಯವನ್ನು ಅಭಿವೃದ್ಧಿಪಡಿಸುವ ಮೂಲಕ 200 ವರ್ಷಗಳಷ್ಟು ಹಳೆಯ ಭದ್ರಕಾಳಮ್ಮ ಸಮೇತ ವೀರಭದ್ರಸ್ವಾಮಿ ದೇವಾಲಯದ ಉಳಿವಿಗೆ ಎರಡು ಸಮುದಾಯದ ಮುಖಂಡರು ಮುಂದಾಗಿರುವುದು ಸಂತಸ ತಂದಿದೆ. ನಗರ ಭಾಗದಲ್ಲಿ ಕೇವಲ ಒಂದು ವೀರಭದ್ರಸ್ವಾಮಿ ದೇವಾಲಯವಿದ್ದು, ಈ ಜೀರ್ಣೋದ್ಧಾರ ಕಾರ್ಯವು ಆದಷ್ಟು ತೀವ್ರ ಗತಿಯಲ್ಲಿ ನಡೆಯಲಿದೆ ಎಂದರು.

ಈ ವೇಳೆ ವೀರ ಶೈವ ಸಂಘದ ಅಧ್ಯಕ್ಷರಾದ ಸೋಮ ರುದ್ರಶರ್ಮ, ಕಾರ್ಯದರ್ಶಿ ಮಂಜುನಾಥ್, ಖಜಾಂಜಿ ಗಿರೀಶ್, ಮುಖಂಡರಾದ ಪಣೀಶ್, ಪರಮೇಶ್, ಗಿರೀಶ್ , ಶಿವಾನಂದಪ್ಪ , ಮಂಜುನಾಥ್ , ಉಮಾಪತಿ , ಸಿದ್ದಣ್ಣ , ನಗರ ಸಭಾ ಸದಸ್ಯ ಪದ್ಮರಾಜು, ಸದಸ್ಯರಾದ ಭಾಸ್ಕರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

2 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

4 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

6 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

9 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

20 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

20 hours ago