200 ವರ್ಷಗಳ ಇತಿಹಾಸ ಇರುವ ಭದ್ರಕಾಳಮ್ಮ ಸಮೇತ ರುದ್ರದೇವರ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ಕೆ ಚಾಲನೆ

ನಗರದ ಸೌಂದರ್ಯ ಮಹಲ್ ಮುಖ್ಯರಸ್ತೆಯಲ್ಲಿ ಶಿಥಿಲಗೊಂಡಿದ್ದ ಸುಮಾರು 200 ವರ್ಷಗಳ ಇತಿಹಾಸ ಇರುವ ಭದ್ರಕಾಳಮ್ಮ ಸಮೇತ ರುದ್ರದೇವರ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ಕೆ ಓಬದೇನಹಳ್ಳಿ ಕೆ.ಮುನಿಯಪ್ಪ ನೇತೃತ್ವದಲ್ಲಿ ವೀರ ಶೈವ ಸಂಘದ ಪದಾಧಿಕಾರಿಗಳು ಹಾಗೂ ಭೋವಿ ಸಮುದಾಯದ ಮುಖಂಡರು ಪೂಜೆ ಸಲ್ಲಿಸಿ ಸಿಹಿ ಹಂಚುವ ಮೂಲಕ ಜೀರ್ಣೋದ್ಧಾರ ಕಾರ್ಯಕ್ಕೆ ಚಾಲನೆ ನೀಡಿದರು.

ಸಂದರ್ಭದಲ್ಲಿ ಮುಖಂಡರಾದ ಒಬದೇನಹಳ್ಳಿ ಕೆ.ಮುನಿಯಪ್ಪ ಮಾತನಾಡಿ, ಐತಿಹಾಸಿಕ ಭದ್ರಾಕಾಳಮ್ಮ ಸಮೇತ ವೀರಭದ್ರಸ್ವಾಮಿ ದೇವಾಲಯ ಶಿಥಿಲಾವಸ್ಥೆ ತಲುಪಿದ್ದು, ದೇವಾಲಯವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಭೋವಿ ಸಮಾಜ ಹಾಗೂ ವೀರ ಶೈವ ಸಮುದಾಯದ ಮುಖಂಡರು ಒಮ್ಮತದಿಂದ ನಿರ್ಧರಿಸಿ ಜೀರ್ಣೋದ್ಧಾರ ಕಾರ್ಯಕ್ಕೆ ಮುಂದಾಗಿದ್ದು. ಐತಿಹಾಸಿಕ ದೇವಾಲಯದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಿರುವುದು ಸಂತಸ ತಂದಿದೆ ಎಂದರು.

ವೀರ ಶೈವ ಸಮುದಾಯದ ಮುಖಂಡರಾದ ಸೋಮಣ್ಣ ಮಾತನಾಡಿ, ಪಾಳು ಬಿದಿದ್ದ ದೇವಾಲಯವನ್ನು ಅಭಿವೃದ್ಧಿಪಡಿಸುವ ಮೂಲಕ 200 ವರ್ಷಗಳಷ್ಟು ಹಳೆಯ ಭದ್ರಕಾಳಮ್ಮ ಸಮೇತ ವೀರಭದ್ರಸ್ವಾಮಿ ದೇವಾಲಯದ ಉಳಿವಿಗೆ ಎರಡು ಸಮುದಾಯದ ಮುಖಂಡರು ಮುಂದಾಗಿರುವುದು ಸಂತಸ ತಂದಿದೆ. ನಗರ ಭಾಗದಲ್ಲಿ ಕೇವಲ ಒಂದು ವೀರಭದ್ರಸ್ವಾಮಿ ದೇವಾಲಯವಿದ್ದು, ಈ ಜೀರ್ಣೋದ್ಧಾರ ಕಾರ್ಯವು ಆದಷ್ಟು ತೀವ್ರ ಗತಿಯಲ್ಲಿ ನಡೆಯಲಿದೆ ಎಂದರು.

ಈ ವೇಳೆ ವೀರ ಶೈವ ಸಂಘದ ಅಧ್ಯಕ್ಷರಾದ ಸೋಮ ರುದ್ರಶರ್ಮ, ಕಾರ್ಯದರ್ಶಿ ಮಂಜುನಾಥ್, ಖಜಾಂಜಿ ಗಿರೀಶ್, ಮುಖಂಡರಾದ ಪಣೀಶ್, ಪರಮೇಶ್, ಗಿರೀಶ್ , ಶಿವಾನಂದಪ್ಪ , ಮಂಜುನಾಥ್ , ಉಮಾಪತಿ , ಸಿದ್ದಣ್ಣ , ನಗರ ಸಭಾ ಸದಸ್ಯ ಪದ್ಮರಾಜು, ಸದಸ್ಯರಾದ ಭಾಸ್ಕರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಪರೀಕ್ಷಾ ಅಕ್ರಮಗಳು……

ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…

1 hour ago

ಮುತ್ತತ್ತಿಯಲ್ಲಿ ದುರಂತ: ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಸಾವು

ರಾಮನಗರ: ಮುತ್ತತ್ತಿಯ ಕಾವೇರಿ ನದಿಯಲ್ಲಿ ಫೋಟೋ ತೆಗೆಯಲು ನೀರಿಗೆ ಇಳಿದ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ನೀರಿನಲ್ಲಿ…

2 hours ago

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

16 hours ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

19 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

21 hours ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

2 days ago