Categories: ರಾಜ್ಯ

2005ರಲ್ಲಿ ಜೆಡಿಎಸ್ ನಿಂದ ನನ್ನನ್ನು ಉಚ್ಛಾಟನೆ: ಅನಿವಾರ್ಯವಾಗಿ ಕಾಂಗ್ರೆಸ್ ಸೇರ್ಪಡೆ- ಸಿಎಂ ಸಿದ್ದರಾಮಯ್ಯ

ನಾನು ರಾಜಕೀಯಕ್ಕೆ ಬಂದು 50 ವರ್ಷಗಳಾಗಿದೆ. 2005 ರಲ್ಲಿ ಜೆಡಿಎಸ್ ನಿಂದ ನನ್ನನ್ನು ಉಚ್ಛಾಟನೆ ಮಾಡಿದ ನಂತರ ಅನಿವಾರ್ಯವಾಗಿ ಕಾಂಗ್ರೆಸ್ ಸೇರಬೇಕಾಗಿ ಬಂತು. ಅಹ್ಮದ್ ಪಟೇಲ್ ಸೇರಿದಂತೆ ಅಂದಿನ ಕಾಂಗ್ರೆಸ್ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರಲು ತಿಳಿಸಿದರು. ಜನರ ಆಶೀರ್ವಾದದಿಂದ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗುವ ಅವಕಾಶ ದೊರೆತಿದ್ದು, ಜಾತ್ಯಾತೀತ ರಾಜಕೀಯ ನೀತಿಯನ್ನು ಪಾಲಿಸುತ್ತಿದ್ದೇನೆ. ಸಂವಿಧಾನದಲ್ಲಿ ತಿಳಿಸಿದಂತೆ ಎಲ್ಲ ಜಾತಿ ಮತ್ತು ಧರ್ಮದವರನ್ನು ಗೌರವಿಸಿ, ಜಾತ್ಯಾತಿತವಾಗಿರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಾ, ಸಾಮಾಜಿಕ ನ್ಯಾಯದಿಂದ ವಂಚಿತರಾಗಿರುವ ವರ್ಗಗಳಿಗೆ ನ್ಯಾಯ ಕೊಡಿಸುವ ಕೆಲಸ ಮಾಡುತ್ತಿದ್ದೇನೆ ಎಂದ ಸಿಎಂ ಸಿದ್ದರಾಮಯ್ಯ.

ಜಗದ್ಗುರು ಶ್ರೀ ರೇವಣಸಿದ್ದೇಶ್ವರ ಸಿದ್ದಸಿಂಹಾಸನದ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ವಿಭಾಗೀಯ ಮಠ ಮೈಸೂರು ಇವರ ವತಿಯಿಂದ ಗುರುಪೀಠದ ಬಳಿ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು, ಇಂದಿರಾ ಕ್ಯಾಂಟೀನ್, ಕ್ಷೀರಭಾಗ್ಯ ಯೋಜನೆಗಳು ಎಲ್ಲ ಜಾತಿ ಧರ್ಮದ ಜನರಿಗೂ ತಲುಪುತ್ತಿದ್ದು, ಅವಕಾಶ ವಂಚಿತರಿಗೆ ನ್ಯಾಯ ಒದಗಿಸುವ ಯೋಜನೆಗಳಾಗಿವೆ. ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಮುಖ್ಯವಾಹಿನಿಗೆ ಬರಬೇಕು. ಶಕ್ತಿ ಯೋಜನೆಯಡಿ 70 ಕೋಟಿಗೂ ಹೆಚ್ಚು ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಇದರಿಂದ  ಪ್ರವಾಸೋದ್ಯಮ, ಆರ್ಥಿಕ ಚಟುವಟಿಕೆಗೆ ಚುರುಕುಗೊಂಡು ರಾಜ್ಯದ ಜಿಡಿಪಿ ಹೆಚ್ಚಾಗುತ್ತಿದೆ. ರಾಜ್ಯದ ತಲಾ ಆದಾಯ ಹೆಚ್ಚಾಗಿದೆ. ಪ್ರತಿ ಅರ್ಹ ಫಲಾನುಭವಿ ಕುಟುಂಬಕ್ಕೆ ವಾರ್ಷಿಕವಾಗಿ 50 ರಿಂದ 60 ಸಾವಿರ ಸರ್ಕಾರ ಒದಗಿಸುತ್ತಿದ್ದು, ಕುಟುಂಬದ ಆರ್ಥಿಕ ಸಬಲೀಕರಣಕ್ಕೆ ಕಾರಣವಾಗಿದೆ ಎಂದರು.

ಜನರ ಆಶೀರ್ವಾದದ ಫಲದಿಂದ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗುತ್ತಿದೆ. ಇತರೆ ರಾಜಕೀಯ ಪಕ್ಷಗಳು ರಾಜಕೀಯ ಪ್ರೇರಿತವಾಗಿ ಟೀಕೆ ಮಾಡುತ್ತವೆ. ವಿರೋಧಪಕ್ಷಗಳು ಮಾಡುವುದು ಕೇವಲ ಆರೋಪಗಳೇ ಹೊರತು, ಸತ್ಯವಲ್ಲ ಎಂದು ಹೇಳಿದರು.

Ramesh Babu

Journalist

Recent Posts

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

25 minutes ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

10 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

10 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

13 hours ago

ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

15 hours ago

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧ ಆಯ್ಕೆ

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…

17 hours ago