Categories: ರಾಜ್ಯ

2005ರಲ್ಲಿ ಜೆಡಿಎಸ್ ನಿಂದ ನನ್ನನ್ನು ಉಚ್ಛಾಟನೆ: ಅನಿವಾರ್ಯವಾಗಿ ಕಾಂಗ್ರೆಸ್ ಸೇರ್ಪಡೆ- ಸಿಎಂ ಸಿದ್ದರಾಮಯ್ಯ

ನಾನು ರಾಜಕೀಯಕ್ಕೆ ಬಂದು 50 ವರ್ಷಗಳಾಗಿದೆ. 2005 ರಲ್ಲಿ ಜೆಡಿಎಸ್ ನಿಂದ ನನ್ನನ್ನು ಉಚ್ಛಾಟನೆ ಮಾಡಿದ ನಂತರ ಅನಿವಾರ್ಯವಾಗಿ ಕಾಂಗ್ರೆಸ್ ಸೇರಬೇಕಾಗಿ ಬಂತು. ಅಹ್ಮದ್ ಪಟೇಲ್ ಸೇರಿದಂತೆ ಅಂದಿನ ಕಾಂಗ್ರೆಸ್ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರಲು ತಿಳಿಸಿದರು. ಜನರ ಆಶೀರ್ವಾದದಿಂದ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗುವ ಅವಕಾಶ ದೊರೆತಿದ್ದು, ಜಾತ್ಯಾತೀತ ರಾಜಕೀಯ ನೀತಿಯನ್ನು ಪಾಲಿಸುತ್ತಿದ್ದೇನೆ. ಸಂವಿಧಾನದಲ್ಲಿ ತಿಳಿಸಿದಂತೆ ಎಲ್ಲ ಜಾತಿ ಮತ್ತು ಧರ್ಮದವರನ್ನು ಗೌರವಿಸಿ, ಜಾತ್ಯಾತಿತವಾಗಿರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಾ, ಸಾಮಾಜಿಕ ನ್ಯಾಯದಿಂದ ವಂಚಿತರಾಗಿರುವ ವರ್ಗಗಳಿಗೆ ನ್ಯಾಯ ಕೊಡಿಸುವ ಕೆಲಸ ಮಾಡುತ್ತಿದ್ದೇನೆ ಎಂದ ಸಿಎಂ ಸಿದ್ದರಾಮಯ್ಯ.

ಜಗದ್ಗುರು ಶ್ರೀ ರೇವಣಸಿದ್ದೇಶ್ವರ ಸಿದ್ದಸಿಂಹಾಸನದ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ವಿಭಾಗೀಯ ಮಠ ಮೈಸೂರು ಇವರ ವತಿಯಿಂದ ಗುರುಪೀಠದ ಬಳಿ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು, ಇಂದಿರಾ ಕ್ಯಾಂಟೀನ್, ಕ್ಷೀರಭಾಗ್ಯ ಯೋಜನೆಗಳು ಎಲ್ಲ ಜಾತಿ ಧರ್ಮದ ಜನರಿಗೂ ತಲುಪುತ್ತಿದ್ದು, ಅವಕಾಶ ವಂಚಿತರಿಗೆ ನ್ಯಾಯ ಒದಗಿಸುವ ಯೋಜನೆಗಳಾಗಿವೆ. ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಮುಖ್ಯವಾಹಿನಿಗೆ ಬರಬೇಕು. ಶಕ್ತಿ ಯೋಜನೆಯಡಿ 70 ಕೋಟಿಗೂ ಹೆಚ್ಚು ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಇದರಿಂದ  ಪ್ರವಾಸೋದ್ಯಮ, ಆರ್ಥಿಕ ಚಟುವಟಿಕೆಗೆ ಚುರುಕುಗೊಂಡು ರಾಜ್ಯದ ಜಿಡಿಪಿ ಹೆಚ್ಚಾಗುತ್ತಿದೆ. ರಾಜ್ಯದ ತಲಾ ಆದಾಯ ಹೆಚ್ಚಾಗಿದೆ. ಪ್ರತಿ ಅರ್ಹ ಫಲಾನುಭವಿ ಕುಟುಂಬಕ್ಕೆ ವಾರ್ಷಿಕವಾಗಿ 50 ರಿಂದ 60 ಸಾವಿರ ಸರ್ಕಾರ ಒದಗಿಸುತ್ತಿದ್ದು, ಕುಟುಂಬದ ಆರ್ಥಿಕ ಸಬಲೀಕರಣಕ್ಕೆ ಕಾರಣವಾಗಿದೆ ಎಂದರು.

ಜನರ ಆಶೀರ್ವಾದದ ಫಲದಿಂದ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗುತ್ತಿದೆ. ಇತರೆ ರಾಜಕೀಯ ಪಕ್ಷಗಳು ರಾಜಕೀಯ ಪ್ರೇರಿತವಾಗಿ ಟೀಕೆ ಮಾಡುತ್ತವೆ. ವಿರೋಧಪಕ್ಷಗಳು ಮಾಡುವುದು ಕೇವಲ ಆರೋಪಗಳೇ ಹೊರತು, ಸತ್ಯವಲ್ಲ ಎಂದು ಹೇಳಿದರು.

Ramesh Babu

Journalist

Recent Posts

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

4 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

13 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

19 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

21 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

3 days ago