ನಾನು ರಾಜಕೀಯಕ್ಕೆ ಬಂದು 50 ವರ್ಷಗಳಾಗಿದೆ. 2005 ರಲ್ಲಿ ಜೆಡಿಎಸ್ ನಿಂದ ನನ್ನನ್ನು ಉಚ್ಛಾಟನೆ ಮಾಡಿದ ನಂತರ ಅನಿವಾರ್ಯವಾಗಿ ಕಾಂಗ್ರೆಸ್ ಸೇರಬೇಕಾಗಿ ಬಂತು. ಅಹ್ಮದ್ ಪಟೇಲ್ ಸೇರಿದಂತೆ ಅಂದಿನ ಕಾಂಗ್ರೆಸ್ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರಲು ತಿಳಿಸಿದರು. ಜನರ ಆಶೀರ್ವಾದದಿಂದ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗುವ ಅವಕಾಶ ದೊರೆತಿದ್ದು, ಜಾತ್ಯಾತೀತ ರಾಜಕೀಯ ನೀತಿಯನ್ನು ಪಾಲಿಸುತ್ತಿದ್ದೇನೆ. ಸಂವಿಧಾನದಲ್ಲಿ ತಿಳಿಸಿದಂತೆ ಎಲ್ಲ ಜಾತಿ ಮತ್ತು ಧರ್ಮದವರನ್ನು ಗೌರವಿಸಿ, ಜಾತ್ಯಾತಿತವಾಗಿರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಾ, ಸಾಮಾಜಿಕ ನ್ಯಾಯದಿಂದ ವಂಚಿತರಾಗಿರುವ ವರ್ಗಗಳಿಗೆ ನ್ಯಾಯ ಕೊಡಿಸುವ ಕೆಲಸ ಮಾಡುತ್ತಿದ್ದೇನೆ ಎಂದ ಸಿಎಂ ಸಿದ್ದರಾಮಯ್ಯ.
ಜಗದ್ಗುರು ಶ್ರೀ ರೇವಣಸಿದ್ದೇಶ್ವರ ಸಿದ್ದಸಿಂಹಾಸನದ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ವಿಭಾಗೀಯ ಮಠ ಮೈಸೂರು ಇವರ ವತಿಯಿಂದ ಗುರುಪೀಠದ ಬಳಿ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು, ಇಂದಿರಾ ಕ್ಯಾಂಟೀನ್, ಕ್ಷೀರಭಾಗ್ಯ ಯೋಜನೆಗಳು ಎಲ್ಲ ಜಾತಿ ಧರ್ಮದ ಜನರಿಗೂ ತಲುಪುತ್ತಿದ್ದು, ಅವಕಾಶ ವಂಚಿತರಿಗೆ ನ್ಯಾಯ ಒದಗಿಸುವ ಯೋಜನೆಗಳಾಗಿವೆ. ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಮುಖ್ಯವಾಹಿನಿಗೆ ಬರಬೇಕು. ಶಕ್ತಿ ಯೋಜನೆಯಡಿ 70 ಕೋಟಿಗೂ ಹೆಚ್ಚು ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಇದರಿಂದ ಪ್ರವಾಸೋದ್ಯಮ, ಆರ್ಥಿಕ ಚಟುವಟಿಕೆಗೆ ಚುರುಕುಗೊಂಡು ರಾಜ್ಯದ ಜಿಡಿಪಿ ಹೆಚ್ಚಾಗುತ್ತಿದೆ. ರಾಜ್ಯದ ತಲಾ ಆದಾಯ ಹೆಚ್ಚಾಗಿದೆ. ಪ್ರತಿ ಅರ್ಹ ಫಲಾನುಭವಿ ಕುಟುಂಬಕ್ಕೆ ವಾರ್ಷಿಕವಾಗಿ 50 ರಿಂದ 60 ಸಾವಿರ ಸರ್ಕಾರ ಒದಗಿಸುತ್ತಿದ್ದು, ಕುಟುಂಬದ ಆರ್ಥಿಕ ಸಬಲೀಕರಣಕ್ಕೆ ಕಾರಣವಾಗಿದೆ ಎಂದರು.
ಜನರ ಆಶೀರ್ವಾದದ ಫಲದಿಂದ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗುತ್ತಿದೆ. ಇತರೆ ರಾಜಕೀಯ ಪಕ್ಷಗಳು ರಾಜಕೀಯ ಪ್ರೇರಿತವಾಗಿ ಟೀಕೆ ಮಾಡುತ್ತವೆ. ವಿರೋಧಪಕ್ಷಗಳು ಮಾಡುವುದು ಕೇವಲ ಆರೋಪಗಳೇ ಹೊರತು, ಸತ್ಯವಲ್ಲ ಎಂದು ಹೇಳಿದರು.
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…