2013-18ರಲ್ಲಿ ಇದ್ದ ಸಿಎಂ ಸಿದ್ದರಾಮಯ್ಯನವರ ವರ್ಚಸ್ಸು ಕುಗ್ಗುತ್ತಿದೆ-ಶಾಸಕ ಧೀರಜ್ ಮುನಿರಾಜ್

ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ಮೂರು ಬಜೆಟ್ ಮಂಡನೆಯಾಗಿವೆ. ರಾಜ್ಯಪಾಲರಿಂದ ಮೂರು ಭಾಷಣಗಳು ನಡೆದಿವೆ. ಮೂರು ಬಜೆಟ್ ನಲ್ಲಿ ಈ ರಾಜ್ಯದ ಮಧ್ಯಮ ವರ್ಗ, ದುಡಿಯುವ ಕೈಗಳಿಗೆ, ರೈತರಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಕೊಡುಗೆ ಶೂನ್ಯವಾಗಿದೆ. ಗ್ಯಾರೆಂಟಿಗಳೇ ಪ್ರಪಂಚ, ಗ್ಯಾರೆಂಟಿಗಳಿಂದಲೇ ದೇಶ, ರಾಜ್ಯ ನಡೆಯುತ್ತಿದೆ ಎಂದು ಕಾಂಗ್ರೆಸ್ ಅಂದುಕೊಂಡಿದೆ. ಆದರೆ ಇದಕ್ಕೆ ವಿರುದ್ಧವಾಗಿ ಜನ ದಂಗೆ ಏಳುತ್ತಿದ್ದಾರೆ. ಮಧ್ಯಮ ವರ್ಗ, ದುಡಿಯುವ ಕೈಗಳಿಗೆ, ರೈತರ ಅಭಿವೃದ್ಧಿಗೆ ಒಂದಾದರೂ ಹೊಸ ಯೋಜನೆಗಳನ್ನು ಸಿಎಂ ಸಿದ್ದರಾಮಯ್ಯನವರು ಈ ಬಾರಿಯಾದರೂ ಬಜೆಟ್ ನಲ್ಲಿ ಅಳವಡಿಸಬೇಕು. ಈ ಹಿಂದೆ ಅಂದರೆ 2013-18ರಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಒಂದು ಚೂರಾದರೂ ಗೌರವ ಇತ್ತು. ಆದರೆ, ಇತ್ತೀಚೆಗೆ ಅಂದರೆ ಮೂರು ವರ್ಷಗಳಿಂದ ಆ ಗೌರವ ನಶಿಸಿಹೋಗುತ್ತಿದೆ.‌ ಸಿಎಂ ಸಿದ್ದರಾಮಯ್ಯನವರೇ ನಾವು ಅಂದರೆ ಬಿಜೆಪಿಯವರು ನಿಮ್ಮನ್ನ ಟೀಕೆ ಮಾಡಿದರೆ ಅದು ನಿಮಗೆ ಗೊತ್ತಾಗಲ್ಲ. ದಯವಿಟ್ಟು ರಾಜ್ಯದಲ್ಲಿ ಒಂದು ಸರ್ವೇ ನಡೆಸಬೇಕು, ಆ ಸರ್ವೇಯಲ್ಲಿ ಗೊತ್ತಾಗುತ್ತೆ ನಿಮ್ಮ ಹೆಸರು ಯಾವರೀತಿ ಕುಗ್ಗುತ್ತಿದೆ ಎಂದು ಗೊತ್ತಾಗುತ್ತೆ. 2013-18ರಲ್ಲಿ ಇದ್ದ ವರ್ಚಸ್ಸು ಕಳೆದ ಮೂರು ವರ್ಷಗಳಿಂದ ಯಾವ ರೀತಿ ಹಾಳಾಗುತ್ತಿದೆ ಎಂಬುದು ತಿಳಿಯುತ್ತದೆ. ನಿಮ್ಮ ಹೆಸರು ನೀರುಪಾಲಾಗುತ್ತಿದೆ. ಬೆಂಕಿಯಲ್ಲಿ ಆಹುತಿಯಾಗುವ ರೀತಿಯಲ್ಲಿ ಹಾಳಾಗುತ್ತಿದೆ. ದಯವಿಟ್ಟು, ದೇವರು ನಿಮಗೆ ಒಂದು ಅವಕಾಶ ಕೊಟ್ಟಿದ್ದಾನೆ, ಈ ಬಜೆಟ್ ನಲ್ಲಿಯಾದರೂ ಮಧ್ಯಮ ವರ್ಗ, ದುಡಿಯುವ ಕೈಗಳು, ರೈತರಿಗೆ ಒಳಿತಾಗುವ ರೀತಿಯಲ್ಲಿ ಅನುದಾನ ನಿಗದಿಪಡಿಸಿ ಎಂದು ಶಾಸಕ ದೀರಜ್ ಮುನಿರಾಜ್ ಹೇಳಿದರು.

ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ನಿಮ್ಮ ನಿಮ್ಮ ಒಳ ಜಗಳದಲ್ಲಿ ನೀರಾವರಿ, ಬೆಂಗಳೂರು ಅಭಿವೃದ್ಧಿ ಬಗ್ಗೆ ಕಾಳಜಿ ವಹಿಸಿ, ಬೆಂಗಳೂರಿನ ಮೂಲಕ‌ ರಾಜ್ಯವನ್ನು ನೋಡುವಂತಹದ್ದು, ಆದ್ದರಿಂದ ಎಸ್ ಎಂ ಕೃಷ್ಣ, ಯಡಿಯೂರಪ್ಪ, ಕುಮಾರಸ್ವಾಮಿ ಅವರು ಬೆಂಗಳೂರನ್ನು ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ಅವರು ಮಾಡಿರುವ ಅಭಿವೃದ್ಧಿಯನ್ನು ಜನ ಈಗಲೂ ನೆನೆಸಿಕೊಳ್ಳುತ್ತಾರೆ. ಅದರ ಮುಂದುವರಿದ ಭಾಗವಾಗಿ ನೀವು ಸಹ ಅಭಿವೃದ್ಧಿ ಮಾಡಬೇಕು ಎಂದರು.

ಏನಾದರೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ನಡೆದರೆ ಕಾಂಗ್ರೆಸ್ ಗೆ ಸೋಲು ಕಟ್ಟಿಟ್ಟಬುತ್ತಿ. ಏಕೆಂದರೆ ರಾಜ್ಯದಲ್ಲಿ ಕಾಂಗ್ರೆಸ್ ವರ್ಚಸ್ ಕುಗ್ಗಿದೆ. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಘನತೆ, ಗೌರವ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎಂದು ಹೇಳಿದರು.

ದೊಡ್ಡಬಳ್ಳಾಪುರಕ್ಕೆ ವಿಶೇಷವಾಗಿ 25ಕೋಟಿ ವೆಚ್ಚದಲ್ಲಿ ರೇಷ್ಮೆ ಇಲಾಖೆಯಿಂದ ಜವಳಿ ಇಲಾಖೆಗೆ ನಾವು ಏನು ಎರಡು ಎಕರೆ ವರ್ಗಾಯಿಸಿದ್ದೇವೆ ಅದರಲ್ಲಿ ಮಾರಾಟ ಮಳಿಗೆಗಳನ್ನು ಮಾಡಲು 25 ಕೋಟಿ ಅನುದಾನಕ್ಕೆ ಪ್ರಸ್ತಾಪ ಸಲ್ಲಿಸಿದ್ದೇವೆ. ಅದಕ್ಕೆ ಅನುಮೋದನೆ ನೀಡಬೇಕು. ನೇಕಾರರ ಬದುಕು ಇಂದು ದುಸ್ತಿಗೆ ಬಂದು ತಲುಪಿದೆ. ರೈತರು, ನೇಕಾರರು ಕಂಗಾಲಾಗುವ ಪರಿಸ್ಥಿತಿಯಲ್ಲಿದ್ದಾರೆ. ಜಿಲ್ಲಾಸ್ಪತ್ರೆಗೆ ಅಗತ್ಯ ಅನುದಾನ ನೀಡಬೇಕು. 42ಎಕರೆ ಜಾಗದಲ್ಲಿ ವಸತಿ ಯೋಜನೆ ಕಲ್ಪಿಸುವಂತೆ ವರದಿ ಸಲ್ಲಿಸಿದ್ದೇವೆ. ಈ ವಸತಿ ಯೋಜನೆಯಲ್ಲಿ ಒಂದು ಎಕರೆಯಲ್ಲಿ ನೂರು ಮನೆ ಸ್ಯಾಂಕ್ಷನ್ ಮಾಡಲಾಗುತ್ತದೆ. 2004ನೇ ಸಾಲಿನಿಂದ 1500 ಜನ ಅರ್ಜಿಯನ್ನ ಸಲ್ಲಿಸಿ 500 ರೂ. ಹಣ ಕಟ್ಟಿ ಸುಮ್ಮನೆ ಕುಳಿತ್ತಿದ್ದಾರೆ. 42ಎಕರೆಯಲ್ಲಿ 4,200 ಮನೆ ಕಟ್ಟಲು ರಾಜೀವ್ ಗಾಂಧಿ ವಸತಿ ನಿಗಮಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಅದನ್ನು ಬಜೆಟ್ ನಲ್ಲಿಟ್ಟು ಅನುಮೋದಿಸಬೇಕು ಎಂದರು.

ಜಗತ್ತು ಆಧುನಿಕ ತಂತ್ರಜ್ಞಾನದಿಂದ ಮುನ್ನುಗ್ಗುತ್ತಿರುವ ಈ ಸಮಯದಲ್ಲಿ ಇಡೀ ವಿಶ್ವವೇ, ವಿಶ್ವಸಂಸ್ಥೆಯೇ ನೋಡುವ ಇವಿಎಂ ಅನ್ನು  ಕಾಂಗ್ರೆಸ್ ಸರ್ಕಾರ  ಕ್ಯಾನ್ಸಲ್ ಮಾಡಿ ಬ್ಯಾಲೆಟ್ ಪೇಪರ್ ತರುವ ವ್ಯವಸ್ಥೆಗೆ ಅನುಮೋದನೆ ನೀಡಿದೆ. ಆದರೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರಲ್ಲೂ ಕೂಡ ಮತದಾರರು ತಕ್ಕ ಪಾಠ ಕಾಂಗ್ರೆಸ್ ಗೆ ಕಲಿಸಲಿದ್ದಾರೆ ಎಂದರು.

ಈ ವೇಳೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ರಾಮಕೃಷ್ಣ, ಹಿರಿಯ ಮುಖಂಡರಾದ ಕೆ.ಎಚ್ ಹನುಮಂತರಾಯಪ್ಪ, ಗೋಪಿ, ಜಿಲ್ಲಾ ಪ್ರಧಾನಕಾರ್ಯದರ್ಶಿ ವೆಂಕಟೇಶ್, ನಗರಾಧ್ಯಕ್ಷ ಮುದ್ದಪ್ಪ, ಮಂಜುನಾಥ ಇದ್ದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

3 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

5 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

5 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

5 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

10 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

11 hours ago