2013-18ರಲ್ಲಿ ಇದ್ದ ಸಿಎಂ ಸಿದ್ದರಾಮಯ್ಯನವರ ವರ್ಚಸ್ಸು ಕುಗ್ಗುತ್ತಿದೆ-ಶಾಸಕ ಧೀರಜ್ ಮುನಿರಾಜ್

ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ಮೂರು ಬಜೆಟ್ ಮಂಡನೆಯಾಗಿವೆ. ರಾಜ್ಯಪಾಲರಿಂದ ಮೂರು ಭಾಷಣಗಳು ನಡೆದಿವೆ. ಮೂರು ಬಜೆಟ್ ನಲ್ಲಿ ಈ ರಾಜ್ಯದ ಮಧ್ಯಮ ವರ್ಗ, ದುಡಿಯುವ ಕೈಗಳಿಗೆ, ರೈತರಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಕೊಡುಗೆ ಶೂನ್ಯವಾಗಿದೆ. ಗ್ಯಾರೆಂಟಿಗಳೇ ಪ್ರಪಂಚ, ಗ್ಯಾರೆಂಟಿಗಳಿಂದಲೇ ದೇಶ, ರಾಜ್ಯ ನಡೆಯುತ್ತಿದೆ ಎಂದು ಕಾಂಗ್ರೆಸ್ ಅಂದುಕೊಂಡಿದೆ. ಆದರೆ ಇದಕ್ಕೆ ವಿರುದ್ಧವಾಗಿ ಜನ ದಂಗೆ ಏಳುತ್ತಿದ್ದಾರೆ. ಮಧ್ಯಮ ವರ್ಗ, ದುಡಿಯುವ ಕೈಗಳಿಗೆ, ರೈತರ ಅಭಿವೃದ್ಧಿಗೆ ಒಂದಾದರೂ ಹೊಸ ಯೋಜನೆಗಳನ್ನು ಸಿಎಂ ಸಿದ್ದರಾಮಯ್ಯನವರು ಈ ಬಾರಿಯಾದರೂ ಬಜೆಟ್ ನಲ್ಲಿ ಅಳವಡಿಸಬೇಕು. ಈ ಹಿಂದೆ ಅಂದರೆ 2013-18ರಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಒಂದು ಚೂರಾದರೂ ಗೌರವ ಇತ್ತು. ಆದರೆ, ಇತ್ತೀಚೆಗೆ ಅಂದರೆ ಮೂರು ವರ್ಷಗಳಿಂದ ಆ ಗೌರವ ನಶಿಸಿಹೋಗುತ್ತಿದೆ.‌ ಸಿಎಂ ಸಿದ್ದರಾಮಯ್ಯನವರೇ ನಾವು ಅಂದರೆ ಬಿಜೆಪಿಯವರು ನಿಮ್ಮನ್ನ ಟೀಕೆ ಮಾಡಿದರೆ ಅದು ನಿಮಗೆ ಗೊತ್ತಾಗಲ್ಲ. ದಯವಿಟ್ಟು ರಾಜ್ಯದಲ್ಲಿ ಒಂದು ಸರ್ವೇ ನಡೆಸಬೇಕು, ಆ ಸರ್ವೇಯಲ್ಲಿ ಗೊತ್ತಾಗುತ್ತೆ ನಿಮ್ಮ ಹೆಸರು ಯಾವರೀತಿ ಕುಗ್ಗುತ್ತಿದೆ ಎಂದು ಗೊತ್ತಾಗುತ್ತೆ. 2013-18ರಲ್ಲಿ ಇದ್ದ ವರ್ಚಸ್ಸು ಕಳೆದ ಮೂರು ವರ್ಷಗಳಿಂದ ಯಾವ ರೀತಿ ಹಾಳಾಗುತ್ತಿದೆ ಎಂಬುದು ತಿಳಿಯುತ್ತದೆ. ನಿಮ್ಮ ಹೆಸರು ನೀರುಪಾಲಾಗುತ್ತಿದೆ. ಬೆಂಕಿಯಲ್ಲಿ ಆಹುತಿಯಾಗುವ ರೀತಿಯಲ್ಲಿ ಹಾಳಾಗುತ್ತಿದೆ. ದಯವಿಟ್ಟು, ದೇವರು ನಿಮಗೆ ಒಂದು ಅವಕಾಶ ಕೊಟ್ಟಿದ್ದಾನೆ, ಈ ಬಜೆಟ್ ನಲ್ಲಿಯಾದರೂ ಮಧ್ಯಮ ವರ್ಗ, ದುಡಿಯುವ ಕೈಗಳು, ರೈತರಿಗೆ ಒಳಿತಾಗುವ ರೀತಿಯಲ್ಲಿ ಅನುದಾನ ನಿಗದಿಪಡಿಸಿ ಎಂದು ಶಾಸಕ ದೀರಜ್ ಮುನಿರಾಜ್ ಹೇಳಿದರು.

ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ನಿಮ್ಮ ನಿಮ್ಮ ಒಳ ಜಗಳದಲ್ಲಿ ನೀರಾವರಿ, ಬೆಂಗಳೂರು ಅಭಿವೃದ್ಧಿ ಬಗ್ಗೆ ಕಾಳಜಿ ವಹಿಸಿ, ಬೆಂಗಳೂರಿನ ಮೂಲಕ‌ ರಾಜ್ಯವನ್ನು ನೋಡುವಂತಹದ್ದು, ಆದ್ದರಿಂದ ಎಸ್ ಎಂ ಕೃಷ್ಣ, ಯಡಿಯೂರಪ್ಪ, ಕುಮಾರಸ್ವಾಮಿ ಅವರು ಬೆಂಗಳೂರನ್ನು ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ಅವರು ಮಾಡಿರುವ ಅಭಿವೃದ್ಧಿಯನ್ನು ಜನ ಈಗಲೂ ನೆನೆಸಿಕೊಳ್ಳುತ್ತಾರೆ. ಅದರ ಮುಂದುವರಿದ ಭಾಗವಾಗಿ ನೀವು ಸಹ ಅಭಿವೃದ್ಧಿ ಮಾಡಬೇಕು ಎಂದರು.

ಏನಾದರೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ನಡೆದರೆ ಕಾಂಗ್ರೆಸ್ ಗೆ ಸೋಲು ಕಟ್ಟಿಟ್ಟಬುತ್ತಿ. ಏಕೆಂದರೆ ರಾಜ್ಯದಲ್ಲಿ ಕಾಂಗ್ರೆಸ್ ವರ್ಚಸ್ ಕುಗ್ಗಿದೆ. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಘನತೆ, ಗೌರವ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎಂದು ಹೇಳಿದರು.

ದೊಡ್ಡಬಳ್ಳಾಪುರಕ್ಕೆ ವಿಶೇಷವಾಗಿ 25ಕೋಟಿ ವೆಚ್ಚದಲ್ಲಿ ರೇಷ್ಮೆ ಇಲಾಖೆಯಿಂದ ಜವಳಿ ಇಲಾಖೆಗೆ ನಾವು ಏನು ಎರಡು ಎಕರೆ ವರ್ಗಾಯಿಸಿದ್ದೇವೆ ಅದರಲ್ಲಿ ಮಾರಾಟ ಮಳಿಗೆಗಳನ್ನು ಮಾಡಲು 25 ಕೋಟಿ ಅನುದಾನಕ್ಕೆ ಪ್ರಸ್ತಾಪ ಸಲ್ಲಿಸಿದ್ದೇವೆ. ಅದಕ್ಕೆ ಅನುಮೋದನೆ ನೀಡಬೇಕು. ನೇಕಾರರ ಬದುಕು ಇಂದು ದುಸ್ತಿಗೆ ಬಂದು ತಲುಪಿದೆ. ರೈತರು, ನೇಕಾರರು ಕಂಗಾಲಾಗುವ ಪರಿಸ್ಥಿತಿಯಲ್ಲಿದ್ದಾರೆ. ಜಿಲ್ಲಾಸ್ಪತ್ರೆಗೆ ಅಗತ್ಯ ಅನುದಾನ ನೀಡಬೇಕು. 42ಎಕರೆ ಜಾಗದಲ್ಲಿ ವಸತಿ ಯೋಜನೆ ಕಲ್ಪಿಸುವಂತೆ ವರದಿ ಸಲ್ಲಿಸಿದ್ದೇವೆ. ಈ ವಸತಿ ಯೋಜನೆಯಲ್ಲಿ ಒಂದು ಎಕರೆಯಲ್ಲಿ ನೂರು ಮನೆ ಸ್ಯಾಂಕ್ಷನ್ ಮಾಡಲಾಗುತ್ತದೆ. 2004ನೇ ಸಾಲಿನಿಂದ 1500 ಜನ ಅರ್ಜಿಯನ್ನ ಸಲ್ಲಿಸಿ 500 ರೂ. ಹಣ ಕಟ್ಟಿ ಸುಮ್ಮನೆ ಕುಳಿತ್ತಿದ್ದಾರೆ. 42ಎಕರೆಯಲ್ಲಿ 4,200 ಮನೆ ಕಟ್ಟಲು ರಾಜೀವ್ ಗಾಂಧಿ ವಸತಿ ನಿಗಮಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಅದನ್ನು ಬಜೆಟ್ ನಲ್ಲಿಟ್ಟು ಅನುಮೋದಿಸಬೇಕು ಎಂದರು.

ಜಗತ್ತು ಆಧುನಿಕ ತಂತ್ರಜ್ಞಾನದಿಂದ ಮುನ್ನುಗ್ಗುತ್ತಿರುವ ಈ ಸಮಯದಲ್ಲಿ ಇಡೀ ವಿಶ್ವವೇ, ವಿಶ್ವಸಂಸ್ಥೆಯೇ ನೋಡುವ ಇವಿಎಂ ಅನ್ನು  ಕಾಂಗ್ರೆಸ್ ಸರ್ಕಾರ  ಕ್ಯಾನ್ಸಲ್ ಮಾಡಿ ಬ್ಯಾಲೆಟ್ ಪೇಪರ್ ತರುವ ವ್ಯವಸ್ಥೆಗೆ ಅನುಮೋದನೆ ನೀಡಿದೆ. ಆದರೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರಲ್ಲೂ ಕೂಡ ಮತದಾರರು ತಕ್ಕ ಪಾಠ ಕಾಂಗ್ರೆಸ್ ಗೆ ಕಲಿಸಲಿದ್ದಾರೆ ಎಂದರು.

ಈ ವೇಳೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ರಾಮಕೃಷ್ಣ, ಹಿರಿಯ ಮುಖಂಡರಾದ ಕೆ.ಎಚ್ ಹನುಮಂತರಾಯಪ್ಪ, ಗೋಪಿ, ಜಿಲ್ಲಾ ಪ್ರಧಾನಕಾರ್ಯದರ್ಶಿ ವೆಂಕಟೇಶ್, ನಗರಾಧ್ಯಕ್ಷ ಮುದ್ದಪ್ಪ, ಮಂಜುನಾಥ ಇದ್ದರು.

Ramesh Babu

Journalist

Recent Posts

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

22 minutes ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

3 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

17 hours ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

23 hours ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

1 day ago

ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿಸಿದ ಶನಿವಾರ: ಜಿಲ್ಲೆಯನ್ನ ಬೆಚ್ಚಿಬೀಳಿಸಿದ ಸರಣಿ ದುರಂತಗಳು: ಒಂದೇ ದಿನ 7 ಮಂದಿ ಮೃತ್ಯು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…

2 days ago