ಮಂಡ್ಯ ಜಿಲ್ಲೆಯ ಗ್ಯಾರಂಟಿಗಳ 2ನೇ ಸಮಾವೇಶದಲ್ಲಿ ಅಲವತ್ತುಕೊಂಡ ಸಿಎಂ ಸಿದ್ದರಾಮಯ್ಯನವರೇ.. ಕೊನೆಗೂ ಸತ್ಯ ನುಡಿದಿದ್ದೀರಿ! ಸುಳ್ಳುರಾಮಯ್ಯ ಬಿರುದಾಂಕಿತರಾದ ನೀವು, ಕೊನೆಗೂ ಸತ್ಯ ಕಕ್ಕಿದ್ದೀರಿ! ಸುಳ್ಳುರಾಮಯ್ಯನೆಂಬ ಕುಖ್ಯಾತಿಯಿಂದ ಹೊರಬರಲು ಪ್ರಾಮಾಣಿಕ ಪ್ರಯತ್ನ ನಡೆಸಿದ್ದೀರಿ. ಅಭಿನಂದನೆಗಳು.
ಸತ್ಯ ಗಂಟಲಲ್ಲಿ ಸಿಕ್ಕಿಕೊಂಡ ಬಿಸಿತುಪ್ಪದಂತೆ.. ಕಕ್ಕಲೇಬೇಕು. 2019ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಆಯ್ಕೆಯಾದ ಪಕ್ಷೇತರ ಅಭ್ಯರ್ಥಿ ಗೆಲುವಿಗೆ ಕಾಂಗ್ರೆಸ್ಸೇ ಕಾರಣ ಎಂದು ಸ್ವತಃ ನೀವೇ ಒಪ್ಪಿಕೊಂಡಿದ್ದೀರಿ. ನಿಮ್ಮದೇ ಮಾತುಗಳಲ್ಲಿ ಹೇಳುವುದಾದರೆ.. ಸುಮಲತಾ ಬಿಜೆಪಿಯಿಂದ ಗೆದ್ದಿದ್ದಲ್ಲ.. ಕಾಂಗ್ರೆಸ್ ವೋಟುಗಳಿಂದಲೇ ಗೆದ್ದಿದ್ದು ಆಯಮ್ಮ..!!
ಇದಲ್ಲವೇ ನಂಬಿಕೆದ್ರೋಹ..?
ನಿಮ್ಮ ಗೋಮುಖವ್ಯಾಘ್ರತನ ಅರಿಯಲು ಇಷ್ಟು ಸಾಕು. ಅಂದು ಕಾಂಗ್ರೆಸ್ ಮೈತ್ರಿ ಪಕ್ಷ, ನಿಖಿಲ್ ಕುಮಾರಸ್ವಾಮಿ ಮೈತ್ರಿ ಅಭ್ಯರ್ಥಿ. ಅವರ ಜತೆಯಲ್ಲೇ ಪ್ರಚಾರದ ಸೋಗಿನಾಟವಾಡಿ, ಮಾಧ್ಯಮಗಳ ಮುಂದೆ ಗೆಲ್ಲಿಸುತ್ತೇವೆಂದು ಪೋಸು ಕೊಡುತ್ತಲೇ ನಿಖಿಲ್ ಸುತ್ತ ಶಕುನಿವ್ಯೂಹವನ್ನೇ ರಚಿಸಿದ ಕಲಿಯುಗ ಶಕುನಿ ನೀವಲ್ಲದೆ ಮತ್ತ್ಯಾರು ಸಿದ್ದರಾಮಯ್ಯನವರೇ?
ಕಳ್ಳಬೆಕ್ಕು ಕದ್ದು ಹಾಲು ಕುಡಿದರೆ ಗೊತ್ತಾಗದೇ? ಬೂದಿ ಮುಚ್ಚಿದ ಕೆಂಡ ತಣ್ಣಗಿರಲು ಸಾಧ್ಯವೇ? ಕುದಿಯುವ ಕುಲುಮೆಯಂತಿರುವ ನಿಮ್ಮ ಉದರಹುರಿಗೆ ತಂಪೆನ್ನುವುದುಂಟೆ? 5 ವರ್ಷಗಳ ನಂತರವಾದರೂ ಸತ್ಯ ಕಕ್ಕಿದ್ದೀರಿ ಹಾಗೂ ನಂಬಿದವನ ಮನೆ ನಾಶವಾಗಲಿ ಎನ್ನುವ ನಿಮ್ಮಹೇಯತನ ಬಯಲಾಗಿದೆ.
ಸತ್ಯಮೇಯ ಜಯತೆ. ಇದಿಷ್ಟೇ ನನ್ನ ಕಳಕಳಿ ಮತ್ತು ನಂಬಿಕೆ.
ಸಕ್ಕರೆ ಕಾರ್ಖಾನೆ ಬಗ್ಗೆ ಹೇಳಿದ್ದೀರಿ. ಬಜೆಟ್ʼನಲ್ಲಿ ಘೋಷಣೆ ಮಾಡಿದ್ದೀರಿ, ಸರಿ.. ದುಡ್ಡು ಎಲ್ಲಿಟ್ಟಿದ್ದೀರಿ. ನಾನು 2019ರ ಬಜೆಟ್ ನಲ್ಲಿಯೇ ಈ ಕಾರ್ಖಾನೆಗೆ 100 ಕೋಟಿ ತೆಗೆದಿರಿಸಿದ್ದೆ. ಎಲ್ಲಿ ಹೋಯಿತು ಆ ದುಡ್ಡು? ಇದರ ಬಗ್ಗೆ ಗ್ಯಾರಂಟಿ ಸಮಾವೇಶದಲ್ಲಿ ಚಕಾರ ಎತ್ತಿಲಿಲ್ಲವೇಕೆ ಸಿದ್ದರಾಮಯ್ಯನವರೇ? ಇಂಥ ಆತ್ಮವಂಚನೆ ಏತಕ್ಕೆ?
ತನ್ನ ತಲೆಗೇ ಹರಳೆಣ್ಣೆ ಇಲ್ಲ, ಪಕ್ಕದವನಿಗೆ ಸಂಪಂಗೆಣ್ಣೆ ಕೊಟ್ಟನಂತೆ ನಿಮ್ಮಂಥವನೊಬ್ಬ! ನಿಮ್ಮ ವೈಖರಿ ಹಾಗಿದೆ. ಕನ್ನಡಿಗರು ಬರದ ಬೆಂಕಿಯಲ್ಲಿ ಬೇಯುತ್ತಿದ್ದರೆ ನಿಮ್ಮ ಸರಕಾರ ಕದ್ದೂಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿದೆ! ಒಂದು ಕೈಲಿ ಅಗ್ಗದ ಗ್ಯಾರಂಟಿ ಕೊಟ್ಟು ಹತ್ತು ಕೈಗಳಲ್ಲಿ ಬದುಕಿನ ಗ್ಯಾರಂಟಿ ಕಿತ್ತುಕೊಳ್ಳುತ್ತಿದ್ದೀರಿ? ಇದು ನ್ಯಾಯವೇ?
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…