Categories: ರಾಜ್ಯ

2019ರ ಲೋಕಸಭೆ ಚುನಾವಣೆ: ಪಕ್ಷೇತರ ಅಭ್ಯರ್ಥಿ ಗೆಲುವಿಗೆ ಕಾಂಗ್ರೆಸ್ಸೇ ಕಾರಣ ಎಂದು ಸ್ವತಃ ನೀವೇ ಒಪ್ಪಿಕೊಂಡಿದ್ದೀರಿ- ಮಾಜಿ ಸಿಎಂ‌ ಎಚ್.ಡಿ ಕುಮಾರಸ್ವಾಮಿ

ಮಂಡ್ಯ ಜಿಲ್ಲೆಯ ಗ್ಯಾರಂಟಿಗಳ 2ನೇ ಸಮಾವೇಶದಲ್ಲಿ ಅಲವತ್ತುಕೊಂಡ ಸಿಎಂ ಸಿದ್ದರಾಮಯ್ಯನವರೇ.. ಕೊನೆಗೂ ಸತ್ಯ ನುಡಿದಿದ್ದೀರಿ! ಸುಳ್ಳುರಾಮಯ್ಯ ಬಿರುದಾಂಕಿತರಾದ ನೀವು, ಕೊನೆಗೂ ಸತ್ಯ ಕಕ್ಕಿದ್ದೀರಿ! ಸುಳ್ಳುರಾಮಯ್ಯನೆಂಬ ಕುಖ್ಯಾತಿಯಿಂದ ಹೊರಬರಲು ಪ್ರಾಮಾಣಿಕ ಪ್ರಯತ್ನ ನಡೆಸಿದ್ದೀರಿ. ಅಭಿನಂದನೆಗಳು.

ಸತ್ಯ ಗಂಟಲಲ್ಲಿ ಸಿಕ್ಕಿಕೊಂಡ ಬಿಸಿತುಪ್ಪದಂತೆ.. ಕಕ್ಕಲೇಬೇಕು. 2019ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಆಯ್ಕೆಯಾದ ಪಕ್ಷೇತರ ಅಭ್ಯರ್ಥಿ ಗೆಲುವಿಗೆ ಕಾಂಗ್ರೆಸ್ಸೇ ಕಾರಣ ಎಂದು ಸ್ವತಃ ನೀವೇ ಒಪ್ಪಿಕೊಂಡಿದ್ದೀರಿ. ನಿಮ್ಮದೇ ಮಾತುಗಳಲ್ಲಿ ಹೇಳುವುದಾದರೆ.. ಸುಮಲತಾ ಬಿಜೆಪಿಯಿಂದ ಗೆದ್ದಿದ್ದಲ್ಲ.. ಕಾಂಗ್ರೆಸ್‌ ವೋಟುಗಳಿಂದಲೇ ಗೆದ್ದಿದ್ದು ಆಯಮ್ಮ..!!

ಇದಲ್ಲವೇ ನಂಬಿಕೆದ್ರೋಹ..?

ನಿಮ್ಮ ಗೋಮುಖವ್ಯಾಘ್ರತನ ಅರಿಯಲು ಇಷ್ಟು ಸಾಕು. ಅಂದು ಕಾಂಗ್ರೆಸ್ ಮೈತ್ರಿ ಪಕ್ಷ, ನಿಖಿಲ್‌ ಕುಮಾರಸ್ವಾಮಿ ಮೈತ್ರಿ ಅಭ್ಯರ್ಥಿ. ಅವರ ಜತೆಯಲ್ಲೇ ಪ್ರಚಾರದ ಸೋಗಿನಾಟವಾಡಿ, ಮಾಧ್ಯಮಗಳ ಮುಂದೆ ಗೆಲ್ಲಿಸುತ್ತೇವೆಂದು ಪೋಸು ಕೊಡುತ್ತಲೇ ನಿಖಿಲ್ ಸುತ್ತ ಶಕುನಿವ್ಯೂಹವನ್ನೇ ರಚಿಸಿದ ಕಲಿಯುಗ ಶಕುನಿ ನೀವಲ್ಲದೆ ಮತ್ತ್ಯಾರು ಸಿದ್ದರಾಮಯ್ಯನವರೇ?

ಕಳ್ಳಬೆಕ್ಕು ಕದ್ದು ಹಾಲು ಕುಡಿದರೆ ಗೊತ್ತಾಗದೇ? ಬೂದಿ ಮುಚ್ಚಿದ ಕೆಂಡ ತಣ್ಣಗಿರಲು ಸಾಧ್ಯವೇ? ಕುದಿಯುವ ಕುಲುಮೆಯಂತಿರುವ ನಿಮ್ಮ ಉದರಹುರಿಗೆ ತಂಪೆನ್ನುವುದುಂಟೆ? 5 ವರ್ಷಗಳ ನಂತರವಾದರೂ ಸತ್ಯ ಕಕ್ಕಿದ್ದೀರಿ ಹಾಗೂ ನಂಬಿದವನ ಮನೆ ನಾಶವಾಗಲಿ ಎನ್ನುವ ನಿಮ್ಮಹೇಯತನ ಬಯಲಾಗಿದೆ.
ಸತ್ಯಮೇಯ ಜಯತೆ. ಇದಿಷ್ಟೇ ನನ್ನ ಕಳಕಳಿ ಮತ್ತು ನಂಬಿಕೆ.

ಸಕ್ಕರೆ ಕಾರ್ಖಾನೆ ಬಗ್ಗೆ ಹೇಳಿದ್ದೀರಿ. ಬಜೆಟ್‌ʼನಲ್ಲಿ ‌ಘೋಷಣೆ ಮಾಡಿದ್ದೀರಿ, ಸರಿ.. ದುಡ್ಡು ಎಲ್ಲಿಟ್ಟಿದ್ದೀರಿ. ನಾನು 2019ರ ಬಜೆಟ್‌ ನಲ್ಲಿಯೇ ಈ ಕಾರ್ಖಾನೆಗೆ 100 ಕೋಟಿ ತೆಗೆದಿರಿಸಿದ್ದೆ. ಎಲ್ಲಿ ಹೋಯಿತು ಆ ದುಡ್ಡು? ಇದರ ಬಗ್ಗೆ ಗ್ಯಾರಂಟಿ ಸಮಾವೇಶದಲ್ಲಿ ಚಕಾರ ಎತ್ತಿಲಿಲ್ಲವೇಕೆ ಸಿದ್ದರಾಮಯ್ಯನವರೇ? ಇಂಥ ಆತ್ಮವಂಚನೆ ಏತಕ್ಕೆ?

ತನ್ನ ತಲೆಗೇ ಹರಳೆಣ್ಣೆ ಇಲ್ಲ, ಪಕ್ಕದವನಿಗೆ ಸಂಪಂಗೆಣ್ಣೆ ಕೊಟ್ಟನಂತೆ ನಿಮ್ಮಂಥವನೊಬ್ಬ! ನಿಮ್ಮ ವೈಖರಿ ಹಾಗಿದೆ. ಕನ್ನಡಿಗರು ಬರದ ಬೆಂಕಿಯಲ್ಲಿ ಬೇಯುತ್ತಿದ್ದರೆ ನಿಮ್ಮ ಸರಕಾರ ಕದ್ದೂಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿದೆ! ಒಂದು ಕೈಲಿ ಅಗ್ಗದ ಗ್ಯಾರಂಟಿ ಕೊಟ್ಟು ಹತ್ತು ಕೈಗಳಲ್ಲಿ ಬದುಕಿನ ಗ್ಯಾರಂಟಿ ಕಿತ್ತುಕೊಳ್ಳುತ್ತಿದ್ದೀರಿ? ಇದು ನ್ಯಾಯವೇ?

Ramesh Babu

Journalist

Recent Posts

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

52 minutes ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

20 hours ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 days ago