Categories: ರಾಜ್ಯ

2019ರ ಲೋಕಸಭೆ ಚುನಾವಣೆ: ಪಕ್ಷೇತರ ಅಭ್ಯರ್ಥಿ ಗೆಲುವಿಗೆ ಕಾಂಗ್ರೆಸ್ಸೇ ಕಾರಣ ಎಂದು ಸ್ವತಃ ನೀವೇ ಒಪ್ಪಿಕೊಂಡಿದ್ದೀರಿ- ಮಾಜಿ ಸಿಎಂ‌ ಎಚ್.ಡಿ ಕುಮಾರಸ್ವಾಮಿ

ಮಂಡ್ಯ ಜಿಲ್ಲೆಯ ಗ್ಯಾರಂಟಿಗಳ 2ನೇ ಸಮಾವೇಶದಲ್ಲಿ ಅಲವತ್ತುಕೊಂಡ ಸಿಎಂ ಸಿದ್ದರಾಮಯ್ಯನವರೇ.. ಕೊನೆಗೂ ಸತ್ಯ ನುಡಿದಿದ್ದೀರಿ! ಸುಳ್ಳುರಾಮಯ್ಯ ಬಿರುದಾಂಕಿತರಾದ ನೀವು, ಕೊನೆಗೂ ಸತ್ಯ ಕಕ್ಕಿದ್ದೀರಿ! ಸುಳ್ಳುರಾಮಯ್ಯನೆಂಬ ಕುಖ್ಯಾತಿಯಿಂದ ಹೊರಬರಲು ಪ್ರಾಮಾಣಿಕ ಪ್ರಯತ್ನ ನಡೆಸಿದ್ದೀರಿ. ಅಭಿನಂದನೆಗಳು.

ಸತ್ಯ ಗಂಟಲಲ್ಲಿ ಸಿಕ್ಕಿಕೊಂಡ ಬಿಸಿತುಪ್ಪದಂತೆ.. ಕಕ್ಕಲೇಬೇಕು. 2019ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಆಯ್ಕೆಯಾದ ಪಕ್ಷೇತರ ಅಭ್ಯರ್ಥಿ ಗೆಲುವಿಗೆ ಕಾಂಗ್ರೆಸ್ಸೇ ಕಾರಣ ಎಂದು ಸ್ವತಃ ನೀವೇ ಒಪ್ಪಿಕೊಂಡಿದ್ದೀರಿ. ನಿಮ್ಮದೇ ಮಾತುಗಳಲ್ಲಿ ಹೇಳುವುದಾದರೆ.. ಸುಮಲತಾ ಬಿಜೆಪಿಯಿಂದ ಗೆದ್ದಿದ್ದಲ್ಲ.. ಕಾಂಗ್ರೆಸ್‌ ವೋಟುಗಳಿಂದಲೇ ಗೆದ್ದಿದ್ದು ಆಯಮ್ಮ..!!

ಇದಲ್ಲವೇ ನಂಬಿಕೆದ್ರೋಹ..?

ನಿಮ್ಮ ಗೋಮುಖವ್ಯಾಘ್ರತನ ಅರಿಯಲು ಇಷ್ಟು ಸಾಕು. ಅಂದು ಕಾಂಗ್ರೆಸ್ ಮೈತ್ರಿ ಪಕ್ಷ, ನಿಖಿಲ್‌ ಕುಮಾರಸ್ವಾಮಿ ಮೈತ್ರಿ ಅಭ್ಯರ್ಥಿ. ಅವರ ಜತೆಯಲ್ಲೇ ಪ್ರಚಾರದ ಸೋಗಿನಾಟವಾಡಿ, ಮಾಧ್ಯಮಗಳ ಮುಂದೆ ಗೆಲ್ಲಿಸುತ್ತೇವೆಂದು ಪೋಸು ಕೊಡುತ್ತಲೇ ನಿಖಿಲ್ ಸುತ್ತ ಶಕುನಿವ್ಯೂಹವನ್ನೇ ರಚಿಸಿದ ಕಲಿಯುಗ ಶಕುನಿ ನೀವಲ್ಲದೆ ಮತ್ತ್ಯಾರು ಸಿದ್ದರಾಮಯ್ಯನವರೇ?

ಕಳ್ಳಬೆಕ್ಕು ಕದ್ದು ಹಾಲು ಕುಡಿದರೆ ಗೊತ್ತಾಗದೇ? ಬೂದಿ ಮುಚ್ಚಿದ ಕೆಂಡ ತಣ್ಣಗಿರಲು ಸಾಧ್ಯವೇ? ಕುದಿಯುವ ಕುಲುಮೆಯಂತಿರುವ ನಿಮ್ಮ ಉದರಹುರಿಗೆ ತಂಪೆನ್ನುವುದುಂಟೆ? 5 ವರ್ಷಗಳ ನಂತರವಾದರೂ ಸತ್ಯ ಕಕ್ಕಿದ್ದೀರಿ ಹಾಗೂ ನಂಬಿದವನ ಮನೆ ನಾಶವಾಗಲಿ ಎನ್ನುವ ನಿಮ್ಮಹೇಯತನ ಬಯಲಾಗಿದೆ.
ಸತ್ಯಮೇಯ ಜಯತೆ. ಇದಿಷ್ಟೇ ನನ್ನ ಕಳಕಳಿ ಮತ್ತು ನಂಬಿಕೆ.

ಸಕ್ಕರೆ ಕಾರ್ಖಾನೆ ಬಗ್ಗೆ ಹೇಳಿದ್ದೀರಿ. ಬಜೆಟ್‌ʼನಲ್ಲಿ ‌ಘೋಷಣೆ ಮಾಡಿದ್ದೀರಿ, ಸರಿ.. ದುಡ್ಡು ಎಲ್ಲಿಟ್ಟಿದ್ದೀರಿ. ನಾನು 2019ರ ಬಜೆಟ್‌ ನಲ್ಲಿಯೇ ಈ ಕಾರ್ಖಾನೆಗೆ 100 ಕೋಟಿ ತೆಗೆದಿರಿಸಿದ್ದೆ. ಎಲ್ಲಿ ಹೋಯಿತು ಆ ದುಡ್ಡು? ಇದರ ಬಗ್ಗೆ ಗ್ಯಾರಂಟಿ ಸಮಾವೇಶದಲ್ಲಿ ಚಕಾರ ಎತ್ತಿಲಿಲ್ಲವೇಕೆ ಸಿದ್ದರಾಮಯ್ಯನವರೇ? ಇಂಥ ಆತ್ಮವಂಚನೆ ಏತಕ್ಕೆ?

ತನ್ನ ತಲೆಗೇ ಹರಳೆಣ್ಣೆ ಇಲ್ಲ, ಪಕ್ಕದವನಿಗೆ ಸಂಪಂಗೆಣ್ಣೆ ಕೊಟ್ಟನಂತೆ ನಿಮ್ಮಂಥವನೊಬ್ಬ! ನಿಮ್ಮ ವೈಖರಿ ಹಾಗಿದೆ. ಕನ್ನಡಿಗರು ಬರದ ಬೆಂಕಿಯಲ್ಲಿ ಬೇಯುತ್ತಿದ್ದರೆ ನಿಮ್ಮ ಸರಕಾರ ಕದ್ದೂಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿದೆ! ಒಂದು ಕೈಲಿ ಅಗ್ಗದ ಗ್ಯಾರಂಟಿ ಕೊಟ್ಟು ಹತ್ತು ಕೈಗಳಲ್ಲಿ ಬದುಕಿನ ಗ್ಯಾರಂಟಿ ಕಿತ್ತುಕೊಳ್ಳುತ್ತಿದ್ದೀರಿ? ಇದು ನ್ಯಾಯವೇ?

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

2 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

3 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

4 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

4 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

8 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

10 hours ago