Categories: ರಾಜ್ಯ

2019ರ ಲೋಕಸಭೆ ಚುನಾವಣೆ: ಪಕ್ಷೇತರ ಅಭ್ಯರ್ಥಿ ಗೆಲುವಿಗೆ ಕಾಂಗ್ರೆಸ್ಸೇ ಕಾರಣ ಎಂದು ಸ್ವತಃ ನೀವೇ ಒಪ್ಪಿಕೊಂಡಿದ್ದೀರಿ- ಮಾಜಿ ಸಿಎಂ‌ ಎಚ್.ಡಿ ಕುಮಾರಸ್ವಾಮಿ

ಮಂಡ್ಯ ಜಿಲ್ಲೆಯ ಗ್ಯಾರಂಟಿಗಳ 2ನೇ ಸಮಾವೇಶದಲ್ಲಿ ಅಲವತ್ತುಕೊಂಡ ಸಿಎಂ ಸಿದ್ದರಾಮಯ್ಯನವರೇ.. ಕೊನೆಗೂ ಸತ್ಯ ನುಡಿದಿದ್ದೀರಿ! ಸುಳ್ಳುರಾಮಯ್ಯ ಬಿರುದಾಂಕಿತರಾದ ನೀವು, ಕೊನೆಗೂ ಸತ್ಯ ಕಕ್ಕಿದ್ದೀರಿ! ಸುಳ್ಳುರಾಮಯ್ಯನೆಂಬ ಕುಖ್ಯಾತಿಯಿಂದ ಹೊರಬರಲು ಪ್ರಾಮಾಣಿಕ ಪ್ರಯತ್ನ ನಡೆಸಿದ್ದೀರಿ. ಅಭಿನಂದನೆಗಳು.

ಸತ್ಯ ಗಂಟಲಲ್ಲಿ ಸಿಕ್ಕಿಕೊಂಡ ಬಿಸಿತುಪ್ಪದಂತೆ.. ಕಕ್ಕಲೇಬೇಕು. 2019ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಆಯ್ಕೆಯಾದ ಪಕ್ಷೇತರ ಅಭ್ಯರ್ಥಿ ಗೆಲುವಿಗೆ ಕಾಂಗ್ರೆಸ್ಸೇ ಕಾರಣ ಎಂದು ಸ್ವತಃ ನೀವೇ ಒಪ್ಪಿಕೊಂಡಿದ್ದೀರಿ. ನಿಮ್ಮದೇ ಮಾತುಗಳಲ್ಲಿ ಹೇಳುವುದಾದರೆ.. ಸುಮಲತಾ ಬಿಜೆಪಿಯಿಂದ ಗೆದ್ದಿದ್ದಲ್ಲ.. ಕಾಂಗ್ರೆಸ್‌ ವೋಟುಗಳಿಂದಲೇ ಗೆದ್ದಿದ್ದು ಆಯಮ್ಮ..!!

ಇದಲ್ಲವೇ ನಂಬಿಕೆದ್ರೋಹ..?

ನಿಮ್ಮ ಗೋಮುಖವ್ಯಾಘ್ರತನ ಅರಿಯಲು ಇಷ್ಟು ಸಾಕು. ಅಂದು ಕಾಂಗ್ರೆಸ್ ಮೈತ್ರಿ ಪಕ್ಷ, ನಿಖಿಲ್‌ ಕುಮಾರಸ್ವಾಮಿ ಮೈತ್ರಿ ಅಭ್ಯರ್ಥಿ. ಅವರ ಜತೆಯಲ್ಲೇ ಪ್ರಚಾರದ ಸೋಗಿನಾಟವಾಡಿ, ಮಾಧ್ಯಮಗಳ ಮುಂದೆ ಗೆಲ್ಲಿಸುತ್ತೇವೆಂದು ಪೋಸು ಕೊಡುತ್ತಲೇ ನಿಖಿಲ್ ಸುತ್ತ ಶಕುನಿವ್ಯೂಹವನ್ನೇ ರಚಿಸಿದ ಕಲಿಯುಗ ಶಕುನಿ ನೀವಲ್ಲದೆ ಮತ್ತ್ಯಾರು ಸಿದ್ದರಾಮಯ್ಯನವರೇ?

ಕಳ್ಳಬೆಕ್ಕು ಕದ್ದು ಹಾಲು ಕುಡಿದರೆ ಗೊತ್ತಾಗದೇ? ಬೂದಿ ಮುಚ್ಚಿದ ಕೆಂಡ ತಣ್ಣಗಿರಲು ಸಾಧ್ಯವೇ? ಕುದಿಯುವ ಕುಲುಮೆಯಂತಿರುವ ನಿಮ್ಮ ಉದರಹುರಿಗೆ ತಂಪೆನ್ನುವುದುಂಟೆ? 5 ವರ್ಷಗಳ ನಂತರವಾದರೂ ಸತ್ಯ ಕಕ್ಕಿದ್ದೀರಿ ಹಾಗೂ ನಂಬಿದವನ ಮನೆ ನಾಶವಾಗಲಿ ಎನ್ನುವ ನಿಮ್ಮಹೇಯತನ ಬಯಲಾಗಿದೆ.
ಸತ್ಯಮೇಯ ಜಯತೆ. ಇದಿಷ್ಟೇ ನನ್ನ ಕಳಕಳಿ ಮತ್ತು ನಂಬಿಕೆ.

ಸಕ್ಕರೆ ಕಾರ್ಖಾನೆ ಬಗ್ಗೆ ಹೇಳಿದ್ದೀರಿ. ಬಜೆಟ್‌ʼನಲ್ಲಿ ‌ಘೋಷಣೆ ಮಾಡಿದ್ದೀರಿ, ಸರಿ.. ದುಡ್ಡು ಎಲ್ಲಿಟ್ಟಿದ್ದೀರಿ. ನಾನು 2019ರ ಬಜೆಟ್‌ ನಲ್ಲಿಯೇ ಈ ಕಾರ್ಖಾನೆಗೆ 100 ಕೋಟಿ ತೆಗೆದಿರಿಸಿದ್ದೆ. ಎಲ್ಲಿ ಹೋಯಿತು ಆ ದುಡ್ಡು? ಇದರ ಬಗ್ಗೆ ಗ್ಯಾರಂಟಿ ಸಮಾವೇಶದಲ್ಲಿ ಚಕಾರ ಎತ್ತಿಲಿಲ್ಲವೇಕೆ ಸಿದ್ದರಾಮಯ್ಯನವರೇ? ಇಂಥ ಆತ್ಮವಂಚನೆ ಏತಕ್ಕೆ?

ತನ್ನ ತಲೆಗೇ ಹರಳೆಣ್ಣೆ ಇಲ್ಲ, ಪಕ್ಕದವನಿಗೆ ಸಂಪಂಗೆಣ್ಣೆ ಕೊಟ್ಟನಂತೆ ನಿಮ್ಮಂಥವನೊಬ್ಬ! ನಿಮ್ಮ ವೈಖರಿ ಹಾಗಿದೆ. ಕನ್ನಡಿಗರು ಬರದ ಬೆಂಕಿಯಲ್ಲಿ ಬೇಯುತ್ತಿದ್ದರೆ ನಿಮ್ಮ ಸರಕಾರ ಕದ್ದೂಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿದೆ! ಒಂದು ಕೈಲಿ ಅಗ್ಗದ ಗ್ಯಾರಂಟಿ ಕೊಟ್ಟು ಹತ್ತು ಕೈಗಳಲ್ಲಿ ಬದುಕಿನ ಗ್ಯಾರಂಟಿ ಕಿತ್ತುಕೊಳ್ಳುತ್ತಿದ್ದೀರಿ? ಇದು ನ್ಯಾಯವೇ?

Ramesh Babu

Journalist

Recent Posts

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

4 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

6 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

9 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

23 hours ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

1 day ago