ರಾಜ್ಯದಲ್ಲಿ ಖಾಲಿ ಉಳಿದಿರುವ ಪೊಲೀಸ್ ಹುದ್ದೆಗಳು ಭರ್ತಿಯಾಗದೆ ಇರುವುದು ರಾಜ್ಯದ ಕಾನೂನು ಸುವ್ಯವಸ್ಥೆಯ ಮೇಲೂ ಪರಿಣಾಮ ಉಂಟುಮಾಡಿದೆ. 2021 ರಲ್ಲಿ 402 PSI ಹುದ್ದೆಗಳಿಗಾಗಿ ನಡೆದ ನೇಮಕಾತಿ ಪ್ರಕ್ರಿಯೆಯನ್ನು ಬಹುತೇಕ ಪೂರ್ಣಗೊಳಿಸಿ 381 ಅಭ್ಯರ್ಥಿಗಳ ಹೆಸರನ್ನು ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಪ್ರಕಟಿಸಲಾಗಿದೆ. ಆದರೆ, ಅಧಿಕೃತ ನೇಮಕಾತಿ ಆದೇಶ ಈವರೆಗೂ ಹೊರಡಿಸದೇ ಅನಗತ್ಯ ವಿಳಂಬ ಮಾಡಲಾಗಿದೆ. ಇದರಿಂದ ಆಯ್ಕೆಯಾದ ಅಭ್ಯರ್ಥಿಗಳು ಅತಂತ್ರ ಸ್ಥಿತಿಯಲ್ಲಿ ಮಾನಸಿಕ ನೋವು ಅನುಭವಿಸುತ್ತಿದ್ದಾರೆ, ಇವರನ್ನು ಅವಲಂಬಿಸಿರುವ ಕುಟುಂಬಗಳು ಆತಂಕದಲ್ಲಿವೆ. ಈ ಕೂಡಲೇ ನೆನೆಗುದಿಗೆ ಬಿದ್ದಿರುವ ಆಯ್ಕೆಯಾಗಿರುವ ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆಯನ್ನು ಅಂತಿಮಗೊಳಿಸಲು ಗೃಹ ಸಚಿವರನ್ನು ಭೇಟಿಯಾಗಿ ಜರೂರು ಕ್ರಮ ವಹಿಸುವಂತೆ ವಿನಂತಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.
ಗೃಹ ಇಲಾಖೆ ಕೂಡಲೇ ಈ ವಿಷಯವನ್ನು ಆದ್ಯತೆಯಾಗಿ ಪರಿಗಣಿಸುವಂತೆ ಒತ್ತಾಯಿಸುವೆ ಎಂದು ತಿಳಿಸಿದ್ದಾರೆ.
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…