ರಾಜ್ಯದಲ್ಲಿ ಖಾಲಿ ಉಳಿದಿರುವ ಪೊಲೀಸ್ ಹುದ್ದೆಗಳು ಭರ್ತಿಯಾಗದೆ ಇರುವುದು ರಾಜ್ಯದ ಕಾನೂನು ಸುವ್ಯವಸ್ಥೆಯ ಮೇಲೂ ಪರಿಣಾಮ ಉಂಟುಮಾಡಿದೆ. 2021 ರಲ್ಲಿ 402 PSI ಹುದ್ದೆಗಳಿಗಾಗಿ ನಡೆದ ನೇಮಕಾತಿ ಪ್ರಕ್ರಿಯೆಯನ್ನು ಬಹುತೇಕ ಪೂರ್ಣಗೊಳಿಸಿ 381 ಅಭ್ಯರ್ಥಿಗಳ ಹೆಸರನ್ನು ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಪ್ರಕಟಿಸಲಾಗಿದೆ. ಆದರೆ, ಅಧಿಕೃತ ನೇಮಕಾತಿ ಆದೇಶ ಈವರೆಗೂ ಹೊರಡಿಸದೇ ಅನಗತ್ಯ ವಿಳಂಬ ಮಾಡಲಾಗಿದೆ. ಇದರಿಂದ ಆಯ್ಕೆಯಾದ ಅಭ್ಯರ್ಥಿಗಳು ಅತಂತ್ರ ಸ್ಥಿತಿಯಲ್ಲಿ ಮಾನಸಿಕ ನೋವು ಅನುಭವಿಸುತ್ತಿದ್ದಾರೆ, ಇವರನ್ನು ಅವಲಂಬಿಸಿರುವ ಕುಟುಂಬಗಳು ಆತಂಕದಲ್ಲಿವೆ. ಈ ಕೂಡಲೇ ನೆನೆಗುದಿಗೆ ಬಿದ್ದಿರುವ ಆಯ್ಕೆಯಾಗಿರುವ ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆಯನ್ನು ಅಂತಿಮಗೊಳಿಸಲು ಗೃಹ ಸಚಿವರನ್ನು ಭೇಟಿಯಾಗಿ ಜರೂರು ಕ್ರಮ ವಹಿಸುವಂತೆ ವಿನಂತಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.
ಗೃಹ ಇಲಾಖೆ ಕೂಡಲೇ ಈ ವಿಷಯವನ್ನು ಆದ್ಯತೆಯಾಗಿ ಪರಿಗಣಿಸುವಂತೆ ಒತ್ತಾಯಿಸುವೆ ಎಂದು ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…