ರಾಜ್ಯದಲ್ಲಿ ಖಾಲಿ ಉಳಿದಿರುವ ಪೊಲೀಸ್ ಹುದ್ದೆಗಳು ಭರ್ತಿಯಾಗದೆ ಇರುವುದು ರಾಜ್ಯದ ಕಾನೂನು ಸುವ್ಯವಸ್ಥೆಯ ಮೇಲೂ ಪರಿಣಾಮ ಉಂಟುಮಾಡಿದೆ. 2021 ರಲ್ಲಿ 402 PSI ಹುದ್ದೆಗಳಿಗಾಗಿ ನಡೆದ ನೇಮಕಾತಿ ಪ್ರಕ್ರಿಯೆಯನ್ನು ಬಹುತೇಕ ಪೂರ್ಣಗೊಳಿಸಿ 381 ಅಭ್ಯರ್ಥಿಗಳ ಹೆಸರನ್ನು ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಪ್ರಕಟಿಸಲಾಗಿದೆ. ಆದರೆ, ಅಧಿಕೃತ ನೇಮಕಾತಿ ಆದೇಶ ಈವರೆಗೂ ಹೊರಡಿಸದೇ ಅನಗತ್ಯ ವಿಳಂಬ ಮಾಡಲಾಗಿದೆ. ಇದರಿಂದ ಆಯ್ಕೆಯಾದ ಅಭ್ಯರ್ಥಿಗಳು ಅತಂತ್ರ ಸ್ಥಿತಿಯಲ್ಲಿ ಮಾನಸಿಕ ನೋವು ಅನುಭವಿಸುತ್ತಿದ್ದಾರೆ, ಇವರನ್ನು ಅವಲಂಬಿಸಿರುವ ಕುಟುಂಬಗಳು ಆತಂಕದಲ್ಲಿವೆ. ಈ ಕೂಡಲೇ ನೆನೆಗುದಿಗೆ ಬಿದ್ದಿರುವ ಆಯ್ಕೆಯಾಗಿರುವ ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆಯನ್ನು ಅಂತಿಮಗೊಳಿಸಲು ಗೃಹ ಸಚಿವರನ್ನು ಭೇಟಿಯಾಗಿ ಜರೂರು ಕ್ರಮ ವಹಿಸುವಂತೆ ವಿನಂತಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.
ಗೃಹ ಇಲಾಖೆ ಕೂಡಲೇ ಈ ವಿಷಯವನ್ನು ಆದ್ಯತೆಯಾಗಿ ಪರಿಗಣಿಸುವಂತೆ ಒತ್ತಾಯಿಸುವೆ ಎಂದು ತಿಳಿಸಿದ್ದಾರೆ.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…