2022-23ನೇ ಸಾಲಿನ‌ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಚಿತ್ರದುರ್ಗ ಫಸ್ಟ್, ಯಾದಗಿರಿ ಲಾಸ್ಟ್: ವಿದ್ಯಾರ್ಥಿನಿಯರೇ ಮೇಲುಗೈ

 

ಮಾರ್ಚ್ 2023ರ SSLC ವಾರ್ಷಿಕ ಪರೀಕ್ಷೆಯನ್ನು ಮಾರ್ಚ್ 31 ರಿಂದ ಏಪ್ರಿಲ್ 15ರವರೆಗೆ ನಡೆಸಲಾಗಿತ್ತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದ್ದು, ಇಂದು SSLC ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ.

ಈ ವರ್ಷ ಶೇ 83.89 ಫಲಿತಾಂಶ ಬಂದಿದ್ದು, ಪರೀಕ್ಷೆ ಬರೆದ 8,35,102 ವಿದ್ಯಾರ್ಥಿಗಳಲ್ಲಿ 7,00,619 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಪಡೆದಿದ್ದಾರೆ.

ಈ ಬಾರಿ ಬಾಲಕಿಯರೇ ಮೇಲುಗೈ ಸಾಧಿಸಿದ್ದು, ಶೇ 83.89 ವಿದ್ಯಾರ್ಥಿನಿಯರು, ಶೇ 80.08 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಚಿತ್ರದುರ್ಗಕ್ಕೆ ಶೇ. 96.80 ಪಡೆದು ಪ್ರಥಮ ಸ್ಥಾನ ಗಳಿಸಿದೆ, ಮಂಡ್ಯ ಜಿಲ್ಲೆಗೆ ಶೇ. 96.74, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 96.48% ಪಡೆದು ನಾಲ್ಕನೇ ಸ್ಥಾನ ಪಡೆದಿದೆ.  ಕೊನೆಯ ಸ್ಥಾನ ಗಳಿಸಿರುವ ಯಾದಗಿರಿ ಜಿಲ್ಲೆಯಲ್ಲಿ ಶೇ.75.49ರಷ್ಟು ಫಲಿತಾಂಶ ಬಂದಿದೆ.

ಈ ಬಾರಿ ರಾಜ್ಯದ 15,498 ಪ್ರೌಢಶಾಲೆಗಳ 8.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದರು. 3,305 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದವು. ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಮೌಲ್ಯಮಾಪನಕ್ಕೆ ವ್ಯವಸ್ಥೆ ಮಾಡಲಾಗಿತ್ತು. 63 ಸಾವಿರ ಶಿಕ್ಷಕರು ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸಿದ್ದರು.

ಈ ಮುಖ್ಯ ಪರೀಕ್ಷೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 273 ಪ್ರೌಢಶಾಲೆಗಳಿಂದ ಒಟ್ಟು 14040 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿತರಾಗಿದ್ದರು. ಇದರಲ್ಲಿ 7,218 ಮಂದಿ ಬಾಲಕರು, 6,822 ಮಂದಿ ಬಾಲಕಿಯರು ಇದ್ದಾರೆ. 295 ಖಾಸಗಿ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು

ಫಲಿತಾಂಶವನ್ನು http://karresults.nic.in ಜಾಲತಾಣದಲ್ಲಿ ಪ್ರಕಟಿಸಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

Ramesh Babu

Journalist

Recent Posts

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ: ನೀರಿನ ಸಮಸ್ಯೆ ನೀಗಿಸುವಂತೆ ನಗರಸಭೆ ಸದಸ್ಯರ ಒತ್ತಾಯ

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…

1 hour ago

ಗೃಹ ಅನಿಲ ಸೀಮಿತ ಬಳಕೆಗೆ ಡಿಸಿ ಸಲಹೆ: ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ.ಕೆ ಎನ್ ಅನುರಾಧಾ

ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…

2 hours ago

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

14 hours ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

1 day ago