Categories: ರಾಜ್ಯ

2023ರ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ: ಚುನಾವಣೆ ಘೋಷಣೆಗೆ ಕ್ಷಣಗಣನೆ; ಇಂದು ಬೆಳಿಗ್ಗೆ 11:30ಕ್ಕೆ ಭಾರತ ಚುನಾವಣಾ ಆಯೋಗದಿಂದ ಪತ್ರಿಕಾಗೋಷ್ಠಿ

ಭಾರತ ಚುನಾವಣಾ ಆಯೋಗವು ಇಂದು ಬೆಳಿಗ್ಗೆ 11.30ಕ್ಕೆ ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕವನ್ನು ಘೋಷಣೆ ಮಾಡುವ ಸಾಧ್ಯತೆ. ಈ ಹಿನ್ನೆಲೆ ಇಂದು ಬೆಳಿಗ್ಗೆ 11:30ಕ್ಕೆ ಭಾರತ ಚುನಾವಣಾ ಆಯೋಗದಿಂದ ಪತ್ರಿಕಾಗೋಷ್ಠಿ ನಡೆಸಲಾಗುತ್ತಿದೆ.

ಪತ್ರಿಕಾಗೋಷ್ಠಿಯಲ್ಲಿ ಚುನಾವಣೆಯ ವೇಳಾಪಟ್ಟಿಯನ್ನು ಘೋಷಣೆ ಆಗಲಿದೆ. ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳಿಗೆ ಮತದಾನದ ದಿನಾಂಕ, ಫಲಿತಾಂಶದ ದಿನದ ಜೊತೆಗೆ ನೀತಿ ಸಂಹಿತೆ ವಿಚಾರಗಳ ಬಗ್ಗೆ ಮುಖ್ಯ ಚುನಾವಣಾ ಆಯುಕ್ತ ವಿವರಣೆ ನೀಡುವ ಸಾಧ್ಯತೆ.

ಪ್ರಸ್ತುತ ವಿಧಾನಸಭೆಯ ಅವಧಿಯು ಮೇ 24, 2023 ರಂದು ಮುಕ್ತಾಯಗೊಳ್ಳುತ್ತದೆ. ಈ ಹಿನ್ನೆಲೆ ಬುಧವಾರ ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಿದೆ. ವೇಳಾಪಟ್ಟಿ ಪ್ರಕಟವಾದ ಬಳಿಕ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬರುವ ಸಾಧ್ಯತೆ.

ಈಗಾಗಲೇ ರಾಜ್ಯ ಚುನಾವಣಾ ಆಯೋಗದ ಜಂಟಿ ಆಯುಕ್ತರು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಪತ್ರ ಬರೆದು, ಯಾವುದೇ ಕ್ಷಣದಲ್ಲಿ ಚುನಾವಣೆ ಘೋಷಣೆ ಆಗಬಹುದು. ಅಗತ್ಯ ಚುನಾವಣಾ ಸಿದ್ಧತೆಯನ್ನು ಕೈಗೊಳ್ಳಿ ಎಂದು ಸೂಚಿಸಿತ್ತು. ಅದರ ಬೆನ್ನಲ್ಲೇ ಹಲವು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದು, ರಾಜಕೀಯ ನಾಯಕರ ಫ್ಲೆಕ್ಸ್‌, ಬ್ಯಾನರ್‌ ತೆರವುಗೊಳಿಸಿದ್ದಾರೆ. ಜಿಲ್ಲಾ ಗಡಿಯಲ್ಲಿ ಚೆಕ್‌ಪೋಸ್ಟ್‌ ನಿರ್ಮಿಸಿ ಚುನಾವಣಾ ಅಕ್ರಮಗಳ ಮೇಲೆ ಕಣ್ಣಿಟ್ಟಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ತಾಲೂಕು ಯಾದವ ಯುವ ವೇದಿಕೆಗೆ ನೂತನ ಪದಾಧಿಕಾರಿಗಳ ನೇಮಕ

ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…

13 hours ago

‘ಕೆಐಎಡಿಬಿ ಮಧ್ಯವರ್ತಿ ಸಂಸ್ಥೆ’: ಜೂ.5ಕ್ಕೆ ಭೂಸ್ವಾಧೀನ ವಿರೋಧಿಸಿ ರೈತರ ವಿಧಾನಸೌಧ ಚಲೋ: ರೈತ ಸಂಘದ ಜಿಲ್ಲಾ ಘಟಕ ಬೆಂಬಲ

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…

13 hours ago

ಇಂಧನ ಬೆಲೆ ಏರಿಕೆ ಖಂಡಿಸಿ ಕನ್ನಡ ಪಕ್ಷ ಪ್ರತಿಭಟನೆ

  ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…

13 hours ago

ಘನ ತ್ಯಾಜ್ಯ ಸಮರ್ಪಕ ನಿರ್ವಹಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಕರೆ

ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…

13 hours ago

ಮೀನಿನ ಬಲೆಯಲ್ಲಿ ಸಿಲುಕಿ ಒದ್ದಾಡಿದ ಬೃಹತ್ ಹೆಬ್ಬಾವು; ಗ್ರಾಮಸ್ಥರಿಂದ ರಕ್ಷಣೆ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…

16 hours ago

ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಆರೋಪ: ಚಾಲಕ, ಮಣ್ಣು ಸಮೇತ ಟಿಪ್ಪರ್ ಲಾರಿಗಳ ವಶ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್…

20 hours ago