ಕ್ಷೇತ್ರದ ಶಾಸಕ ಟಿ.ವೆಂಕಟರಮಣಯ್ಯ ನವರ ಮಲತಾಯಿ ಧೋರಣೆಯಿಂದ ಎಸ್ ಸಿ, ಎಸ್ ಟಿ ಜನಾಂಗವನ್ನು ಕಡೆಗಣಿಸುತ್ತಲೇ ಬಂದಿದ್ದಾರೆ. ಅವರು ಮೇಲ್ನೋಟಕ್ಕೆ ನಾನು ಜಾತ್ಯಾತೀತ ವ್ಯಕ್ತಿ ಎಂದು ಹೇಳಿಕೊಂಡು ಒಳಗಡೆ ಕಳೆದ ಹತ್ತು ವರ್ಷಗಳಿಂದ ಜಾತಿ ರಾಜಕಾರಣ ಮಾಡಿಕೊಂಡು ಬಂದಿದ್ದಾರೆ. ಆದ್ದರಿಂದ ಶಾಸಕರ ನಡೆ ವಿರೋಧಿಸಿ ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಅವರಿಗೆ ಸಮಸ್ತ ಮಾದಿಗ ಸಮುದಾಯ ಚುನಾವಣೆಯಲ್ಲಿ ಸಂಪೂರ್ಣ ಬೆಂಬಲ ನೀಡುತ್ತೇವೆ ಎಂದು ಕರ್ನಾಟಕ ಸ್ವಾಭಿಮಾನಿ ಮಾದಿಗ ಸಂಘಟನೆಗಳ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಸಿದ್ದರಾಜು ತಿಳಿಸಿದರು.
ಈ ಕುರಿತು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹತ್ತು ವರ್ಷದ ಹಿಂದೆ ಹೋಬಳಿಗೊಂದು ಮದ್ಯದ ಅಂಗಡಿ ಇತ್ತು ಟಿ.ವೆಂಕಟರಮಣಯ್ಯ ಶಾಸಕರಾದ ಮೇಲೆ ಪ್ರತಿ ಹಳ್ಳಿಯಲ್ಲಿ ಕಾನೂನು ಬಾಹಿರವಾಗಿ ಎರಡು ಮೂರು ಮದ್ಯದ ಅಂಗಡಿಗಳು ಇದ್ದು, ಜನತೆಗೆ ಹಾಡು ಹಗಲೇ ಮದ್ಯ ಕೊಟ್ಟು ಜನರ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದಾರೆ, ಮದ್ಯದ ದಂಧೆ ಎಗ್ಗಿಲ್ಲದೆ ಕ್ಷೇತ್ರದಲ್ಲಿ ನಡೆಯುತ್ತಿದೆ ಎಂದು ಆರೋಪಿಸಿದರು.
ಕಳೆದ 40 ವರ್ಷಗಳ ನಿರಂತರ ಮಾದಿಗರ ಸ್ವಾಭಿಮಾನದ ಒಕ್ಕೊರಲಿನ ಹೋರಾಟವನ್ನು ಗೌರವಿಸಿ ಕರ್ನಾಟಕದ ವಿಧಾನಸಭೆಯಲ್ಲಿ ವೈಜ್ಞಾನಿಕ ಒಳ ಮೀಸಲಾತಿಯನ್ನು ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸನ್ನು ಮಾಡಿದ ಬಿಜೆಪಿ ಪಕ್ಷಕ್ಕೆ ಹಾಗೂ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಅವರ ಪರ ಮಾದಿಗ ಸಮುದಾಯ ಬೆಂಬವಾಗಿ ನಿಲ್ಲಲಿದೆ ಎಂದರು.
ಸಮಸ್ತ ಪರಿಶಿಷ್ಟ ಜಾತಿಯ ವೈಜ್ಞಾನಿಕ ಒಳ ಮೀಸಲಾತಿಯಾದ ಎ.ಜೆ. ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡಿದ ಬಿಜೆಪಿ ಸರ್ಕಾರಕ್ಕೆ ನಮ್ಮ ಮಾದಿಗ ಸಮುದಾಯದ ಬೆಂಬಲ ಸೂಚಿಸುತ್ತಿದ್ದು, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಪರಿಶಿಷ್ಟರಲ್ಲೇ ಬಹುಸಂಖ್ಯಾತರಾದ ಮಾದಿಗರು ಈ ವೋಟಿನ ರಾಜಕಾರಣದಲ್ಲಿ ನಿರ್ಣಾಯಕವಾದ ಪಾತ್ರ ವಹಿಸುವುದು ಮಹತ್ವಪೂರ್ಣವಾಗಿದೆ ಎಂದರು.
ಈ ಸಂದರ್ಭದಲ್ಲಿ ರಾಜ್ಯ ಖಜಾಂಚಿ ಕೆ.ಬಿ ಗೋವಿಂದರಾಜು, ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಅನ್ನಪೂರ್ಣ, ರಾಜ್ಯ ಸಂಘಟನಾ ಕಾರ್ಯದರ್ಶಿ ಚನ್ನಿಗರಾಯಪ್ಪ, ಜಿಲ್ಲಾಧ್ಯಕ್ಷ ನಾಗರಾಜು.ಪಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ್. ಜಿ ಇದ್ದರು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…