ಕ್ಷೇತ್ರದ ಶಾಸಕ ಟಿ.ವೆಂಕಟರಮಣಯ್ಯ ನವರ ಮಲತಾಯಿ ಧೋರಣೆಯಿಂದ ಎಸ್ ಸಿ, ಎಸ್ ಟಿ ಜನಾಂಗವನ್ನು ಕಡೆಗಣಿಸುತ್ತಲೇ ಬಂದಿದ್ದಾರೆ. ಅವರು ಮೇಲ್ನೋಟಕ್ಕೆ ನಾನು ಜಾತ್ಯಾತೀತ ವ್ಯಕ್ತಿ ಎಂದು ಹೇಳಿಕೊಂಡು ಒಳಗಡೆ ಕಳೆದ ಹತ್ತು ವರ್ಷಗಳಿಂದ ಜಾತಿ ರಾಜಕಾರಣ ಮಾಡಿಕೊಂಡು ಬಂದಿದ್ದಾರೆ. ಆದ್ದರಿಂದ ಶಾಸಕರ ನಡೆ ವಿರೋಧಿಸಿ ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಅವರಿಗೆ ಸಮಸ್ತ ಮಾದಿಗ ಸಮುದಾಯ ಚುನಾವಣೆಯಲ್ಲಿ ಸಂಪೂರ್ಣ ಬೆಂಬಲ ನೀಡುತ್ತೇವೆ ಎಂದು ಕರ್ನಾಟಕ ಸ್ವಾಭಿಮಾನಿ ಮಾದಿಗ ಸಂಘಟನೆಗಳ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಸಿದ್ದರಾಜು ತಿಳಿಸಿದರು.
ಈ ಕುರಿತು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹತ್ತು ವರ್ಷದ ಹಿಂದೆ ಹೋಬಳಿಗೊಂದು ಮದ್ಯದ ಅಂಗಡಿ ಇತ್ತು ಟಿ.ವೆಂಕಟರಮಣಯ್ಯ ಶಾಸಕರಾದ ಮೇಲೆ ಪ್ರತಿ ಹಳ್ಳಿಯಲ್ಲಿ ಕಾನೂನು ಬಾಹಿರವಾಗಿ ಎರಡು ಮೂರು ಮದ್ಯದ ಅಂಗಡಿಗಳು ಇದ್ದು, ಜನತೆಗೆ ಹಾಡು ಹಗಲೇ ಮದ್ಯ ಕೊಟ್ಟು ಜನರ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದಾರೆ, ಮದ್ಯದ ದಂಧೆ ಎಗ್ಗಿಲ್ಲದೆ ಕ್ಷೇತ್ರದಲ್ಲಿ ನಡೆಯುತ್ತಿದೆ ಎಂದು ಆರೋಪಿಸಿದರು.
ಕಳೆದ 40 ವರ್ಷಗಳ ನಿರಂತರ ಮಾದಿಗರ ಸ್ವಾಭಿಮಾನದ ಒಕ್ಕೊರಲಿನ ಹೋರಾಟವನ್ನು ಗೌರವಿಸಿ ಕರ್ನಾಟಕದ ವಿಧಾನಸಭೆಯಲ್ಲಿ ವೈಜ್ಞಾನಿಕ ಒಳ ಮೀಸಲಾತಿಯನ್ನು ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸನ್ನು ಮಾಡಿದ ಬಿಜೆಪಿ ಪಕ್ಷಕ್ಕೆ ಹಾಗೂ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಅವರ ಪರ ಮಾದಿಗ ಸಮುದಾಯ ಬೆಂಬವಾಗಿ ನಿಲ್ಲಲಿದೆ ಎಂದರು.
ಸಮಸ್ತ ಪರಿಶಿಷ್ಟ ಜಾತಿಯ ವೈಜ್ಞಾನಿಕ ಒಳ ಮೀಸಲಾತಿಯಾದ ಎ.ಜೆ. ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡಿದ ಬಿಜೆಪಿ ಸರ್ಕಾರಕ್ಕೆ ನಮ್ಮ ಮಾದಿಗ ಸಮುದಾಯದ ಬೆಂಬಲ ಸೂಚಿಸುತ್ತಿದ್ದು, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಪರಿಶಿಷ್ಟರಲ್ಲೇ ಬಹುಸಂಖ್ಯಾತರಾದ ಮಾದಿಗರು ಈ ವೋಟಿನ ರಾಜಕಾರಣದಲ್ಲಿ ನಿರ್ಣಾಯಕವಾದ ಪಾತ್ರ ವಹಿಸುವುದು ಮಹತ್ವಪೂರ್ಣವಾಗಿದೆ ಎಂದರು.
ಈ ಸಂದರ್ಭದಲ್ಲಿ ರಾಜ್ಯ ಖಜಾಂಚಿ ಕೆ.ಬಿ ಗೋವಿಂದರಾಜು, ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಅನ್ನಪೂರ್ಣ, ರಾಜ್ಯ ಸಂಘಟನಾ ಕಾರ್ಯದರ್ಶಿ ಚನ್ನಿಗರಾಯಪ್ಪ, ಜಿಲ್ಲಾಧ್ಯಕ್ಷ ನಾಗರಾಜು.ಪಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ್. ಜಿ ಇದ್ದರು.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…