2023ರ ವಿಧಾನಸಭಾ ಚುನಾವಣೆ: ಹಾಲಿ‌ ಶಾಸಕರ ಆಡಳಿತ ವೈಖರಿಗೆ ಬೇಸತ್ತ ಮಾದಿಗ ಸಮುದಾಯ: ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಪರ ನಿಂತ ಮಾದಿಗ ಸಮುದಾಯ

ಕ್ಷೇತ್ರದ ಶಾಸಕ ಟಿ.ವೆಂಕಟರಮಣಯ್ಯ ನವರ ಮಲತಾಯಿ ಧೋರಣೆಯಿಂದ ಎಸ್ ಸಿ, ಎಸ್ ಟಿ ಜನಾಂಗವನ್ನು ಕಡೆಗಣಿಸುತ್ತಲೇ ಬಂದಿದ್ದಾರೆ. ಅವರು ಮೇಲ್ನೋಟಕ್ಕೆ ನಾನು ಜಾತ್ಯಾತೀತ ವ್ಯಕ್ತಿ ಎಂದು ಹೇಳಿಕೊಂಡು ಒಳಗಡೆ ಕಳೆದ ಹತ್ತು ವರ್ಷಗಳಿಂದ ಜಾತಿ ರಾಜಕಾರಣ ಮಾಡಿಕೊಂಡು ಬಂದಿದ್ದಾರೆ. ಆದ್ದರಿಂದ ಶಾಸಕರ ನಡೆ ವಿರೋಧಿಸಿ ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಅವರಿಗೆ ಸಮಸ್ತ ಮಾದಿಗ ಸಮುದಾಯ ಚುನಾವಣೆಯಲ್ಲಿ ಸಂಪೂರ್ಣ ಬೆಂಬಲ ನೀಡುತ್ತೇವೆ ಎಂದು ಕರ್ನಾಟಕ ಸ್ವಾಭಿಮಾನಿ ಮಾದಿಗ ಸಂಘಟನೆಗಳ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಸಿದ್ದರಾಜು ತಿಳಿಸಿದರು.

ಈ ಕುರಿತು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹತ್ತು ವರ್ಷದ ಹಿಂದೆ ಹೋಬಳಿಗೊಂದು ಮದ್ಯದ ಅಂಗಡಿ ಇತ್ತು ಟಿ.ವೆಂಕಟರಮಣಯ್ಯ ಶಾಸಕರಾದ ಮೇಲೆ ಪ್ರತಿ ಹಳ್ಳಿಯಲ್ಲಿ ಕಾನೂನು ಬಾಹಿರವಾಗಿ ಎರಡು ಮೂರು ಮದ್ಯದ ಅಂಗಡಿಗಳು ಇದ್ದು, ಜನತೆಗೆ ಹಾಡು ಹಗಲೇ ಮದ್ಯ ಕೊಟ್ಟು ಜನರ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದಾರೆ, ಮದ್ಯದ ದಂಧೆ ಎಗ್ಗಿಲ್ಲದೆ ಕ್ಷೇತ್ರದಲ್ಲಿ ನಡೆಯುತ್ತಿದೆ ಎಂದು ಆರೋಪಿಸಿದರು.

ಕ್ಷೇತ್ರದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು ಜಮೀನು ಮಂಜೂರಾತಿಗಾಗಿ ನಮೂನೆ 53, ನಮೂನೆ 57ರ ಅಡಿಯಲ್ಲಿ ಅರ್ಜಿ ಹಾಕಿಕೊಂಡಿದ್ದು ಇದುವರೆಗೂ ಜಮೀನು ಮಂಜೂರು ಮಾಡದೇ ಕೇವಲ ಮೇಲ್ವರ್ಗದ ಜನಾಂಗಕ್ಕೆ ಮಂಜೂರು ಮಾಡಿ ನಮಗೆ ಅನ್ಯಾಯ ಮಾಡುತ್ತಿರುವ ಕಾಂಗ್ರೆಸ್ ಶಾಸಕ ಟಿ.ವೆಂಕಟರಮಣಯ್ಯ.

ಕಳೆದ 40 ವರ್ಷಗಳ ನಿರಂತರ ಮಾದಿಗರ ಸ್ವಾಭಿಮಾನದ ಒಕ್ಕೊರಲಿನ ಹೋರಾಟವನ್ನು ಗೌರವಿಸಿ ಕರ್ನಾಟಕದ ವಿಧಾನಸಭೆಯಲ್ಲಿ ವೈಜ್ಞಾನಿಕ ಒಳ ಮೀಸಲಾತಿಯನ್ನು ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸನ್ನು ಮಾಡಿದ ಬಿಜೆಪಿ ಪಕ್ಷಕ್ಕೆ ಹಾಗೂ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಅವರ ಪರ ಮಾದಿಗ ಸಮುದಾಯ ಬೆಂಬವಾಗಿ ನಿಲ್ಲಲಿದೆ ಎಂದರು.

ಸಮಸ್ತ ಪರಿಶಿಷ್ಟ ಜಾತಿಯ ವೈಜ್ಞಾನಿಕ ಒಳ ಮೀಸಲಾತಿಯಾದ ಎ.ಜೆ. ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡಿದ ಬಿಜೆಪಿ ಸರ್ಕಾರಕ್ಕೆ ನಮ್ಮ ಮಾದಿಗ ಸಮುದಾಯದ ಬೆಂಬಲ ಸೂಚಿಸುತ್ತಿದ್ದು, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಪರಿಶಿಷ್ಟರಲ್ಲೇ ಬಹುಸಂಖ್ಯಾತರಾದ ಮಾದಿಗರು ಈ ವೋಟಿನ ರಾಜಕಾರಣದಲ್ಲಿ ನಿರ್ಣಾಯಕವಾದ ಪಾತ್ರ ವಹಿಸುವುದು ಮಹತ್ವಪೂರ್ಣವಾಗಿದೆ ಎಂದರು.

ಸಂಘಟನೆಯ ರಾಜ್ಯ ಸಂಚಾಲಕರಾದ ಮೈಲಾರಪ್ಪ ಮಾತನಾಡಿ, ಮಾಜಿ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೊಳರ ಮಾರ್ಗದರ್ಶನದಂತೆ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಾರ್ಟಿಯ ಅಧಿಕೃತ ಅಭ್ಯರ್ಥಿ, ಹಿಂದುಳಿದ ವರ್ಗದ ಯುವ ಮುಖಂಡ, ಧೀರಜ್ ಮುನಿರಾಜು ಅವರನ್ನು ಬೆಂಬಲಿಸಿ, ಅವರಿಗೆ ಮತ ಚಲಾಯಿಸಿ ಅವರನ್ನು ಅತ್ಯಧಿಕ ಅಂತರದಿಂದ ಜಯಶೀಲರನ್ನಾಗಿ ಮಾಡುವ ಜವಾಬ್ದಾರಿ ಮಾದಿಗ ಸಮುದಾಯದ ಮುಖಂಡರಾದ ನಮ್ಮ ಮೇಲಿದೆ ಎಂದರು.

ಈ ಸಂದರ್ಭದಲ್ಲಿ ರಾಜ್ಯ ಖಜಾಂಚಿ ಕೆ.ಬಿ ಗೋವಿಂದರಾಜು, ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಅನ್ನಪೂರ್ಣ, ರಾಜ್ಯ ಸಂಘಟನಾ ಕಾರ್ಯದರ್ಶಿ ಚನ್ನಿಗರಾಯಪ್ಪ, ಜಿಲ್ಲಾಧ್ಯಕ್ಷ ನಾಗರಾಜು.ಪಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ್. ಜಿ ಇದ್ದರು.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

12 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

13 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

19 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

20 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

1 day ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

2 days ago