2023ರ ವಿಧಾನಸಭಾ ಚುನಾವಣೆ: ಹಾಲಿ‌ ಶಾಸಕರ ಆಡಳಿತ ವೈಖರಿಗೆ ಬೇಸತ್ತ ಮಾದಿಗ ಸಮುದಾಯ: ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಪರ ನಿಂತ ಮಾದಿಗ ಸಮುದಾಯ

ಕ್ಷೇತ್ರದ ಶಾಸಕ ಟಿ.ವೆಂಕಟರಮಣಯ್ಯ ನವರ ಮಲತಾಯಿ ಧೋರಣೆಯಿಂದ ಎಸ್ ಸಿ, ಎಸ್ ಟಿ ಜನಾಂಗವನ್ನು ಕಡೆಗಣಿಸುತ್ತಲೇ ಬಂದಿದ್ದಾರೆ. ಅವರು ಮೇಲ್ನೋಟಕ್ಕೆ ನಾನು ಜಾತ್ಯಾತೀತ ವ್ಯಕ್ತಿ ಎಂದು ಹೇಳಿಕೊಂಡು ಒಳಗಡೆ ಕಳೆದ ಹತ್ತು ವರ್ಷಗಳಿಂದ ಜಾತಿ ರಾಜಕಾರಣ ಮಾಡಿಕೊಂಡು ಬಂದಿದ್ದಾರೆ. ಆದ್ದರಿಂದ ಶಾಸಕರ ನಡೆ ವಿರೋಧಿಸಿ ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಅವರಿಗೆ ಸಮಸ್ತ ಮಾದಿಗ ಸಮುದಾಯ ಚುನಾವಣೆಯಲ್ಲಿ ಸಂಪೂರ್ಣ ಬೆಂಬಲ ನೀಡುತ್ತೇವೆ ಎಂದು ಕರ್ನಾಟಕ ಸ್ವಾಭಿಮಾನಿ ಮಾದಿಗ ಸಂಘಟನೆಗಳ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಸಿದ್ದರಾಜು ತಿಳಿಸಿದರು.

ಈ ಕುರಿತು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹತ್ತು ವರ್ಷದ ಹಿಂದೆ ಹೋಬಳಿಗೊಂದು ಮದ್ಯದ ಅಂಗಡಿ ಇತ್ತು ಟಿ.ವೆಂಕಟರಮಣಯ್ಯ ಶಾಸಕರಾದ ಮೇಲೆ ಪ್ರತಿ ಹಳ್ಳಿಯಲ್ಲಿ ಕಾನೂನು ಬಾಹಿರವಾಗಿ ಎರಡು ಮೂರು ಮದ್ಯದ ಅಂಗಡಿಗಳು ಇದ್ದು, ಜನತೆಗೆ ಹಾಡು ಹಗಲೇ ಮದ್ಯ ಕೊಟ್ಟು ಜನರ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದಾರೆ, ಮದ್ಯದ ದಂಧೆ ಎಗ್ಗಿಲ್ಲದೆ ಕ್ಷೇತ್ರದಲ್ಲಿ ನಡೆಯುತ್ತಿದೆ ಎಂದು ಆರೋಪಿಸಿದರು.

ಕ್ಷೇತ್ರದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು ಜಮೀನು ಮಂಜೂರಾತಿಗಾಗಿ ನಮೂನೆ 53, ನಮೂನೆ 57ರ ಅಡಿಯಲ್ಲಿ ಅರ್ಜಿ ಹಾಕಿಕೊಂಡಿದ್ದು ಇದುವರೆಗೂ ಜಮೀನು ಮಂಜೂರು ಮಾಡದೇ ಕೇವಲ ಮೇಲ್ವರ್ಗದ ಜನಾಂಗಕ್ಕೆ ಮಂಜೂರು ಮಾಡಿ ನಮಗೆ ಅನ್ಯಾಯ ಮಾಡುತ್ತಿರುವ ಕಾಂಗ್ರೆಸ್ ಶಾಸಕ ಟಿ.ವೆಂಕಟರಮಣಯ್ಯ.

ಕಳೆದ 40 ವರ್ಷಗಳ ನಿರಂತರ ಮಾದಿಗರ ಸ್ವಾಭಿಮಾನದ ಒಕ್ಕೊರಲಿನ ಹೋರಾಟವನ್ನು ಗೌರವಿಸಿ ಕರ್ನಾಟಕದ ವಿಧಾನಸಭೆಯಲ್ಲಿ ವೈಜ್ಞಾನಿಕ ಒಳ ಮೀಸಲಾತಿಯನ್ನು ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸನ್ನು ಮಾಡಿದ ಬಿಜೆಪಿ ಪಕ್ಷಕ್ಕೆ ಹಾಗೂ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಅವರ ಪರ ಮಾದಿಗ ಸಮುದಾಯ ಬೆಂಬವಾಗಿ ನಿಲ್ಲಲಿದೆ ಎಂದರು.

ಸಮಸ್ತ ಪರಿಶಿಷ್ಟ ಜಾತಿಯ ವೈಜ್ಞಾನಿಕ ಒಳ ಮೀಸಲಾತಿಯಾದ ಎ.ಜೆ. ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡಿದ ಬಿಜೆಪಿ ಸರ್ಕಾರಕ್ಕೆ ನಮ್ಮ ಮಾದಿಗ ಸಮುದಾಯದ ಬೆಂಬಲ ಸೂಚಿಸುತ್ತಿದ್ದು, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಪರಿಶಿಷ್ಟರಲ್ಲೇ ಬಹುಸಂಖ್ಯಾತರಾದ ಮಾದಿಗರು ಈ ವೋಟಿನ ರಾಜಕಾರಣದಲ್ಲಿ ನಿರ್ಣಾಯಕವಾದ ಪಾತ್ರ ವಹಿಸುವುದು ಮಹತ್ವಪೂರ್ಣವಾಗಿದೆ ಎಂದರು.

ಸಂಘಟನೆಯ ರಾಜ್ಯ ಸಂಚಾಲಕರಾದ ಮೈಲಾರಪ್ಪ ಮಾತನಾಡಿ, ಮಾಜಿ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೊಳರ ಮಾರ್ಗದರ್ಶನದಂತೆ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಾರ್ಟಿಯ ಅಧಿಕೃತ ಅಭ್ಯರ್ಥಿ, ಹಿಂದುಳಿದ ವರ್ಗದ ಯುವ ಮುಖಂಡ, ಧೀರಜ್ ಮುನಿರಾಜು ಅವರನ್ನು ಬೆಂಬಲಿಸಿ, ಅವರಿಗೆ ಮತ ಚಲಾಯಿಸಿ ಅವರನ್ನು ಅತ್ಯಧಿಕ ಅಂತರದಿಂದ ಜಯಶೀಲರನ್ನಾಗಿ ಮಾಡುವ ಜವಾಬ್ದಾರಿ ಮಾದಿಗ ಸಮುದಾಯದ ಮುಖಂಡರಾದ ನಮ್ಮ ಮೇಲಿದೆ ಎಂದರು.

ಈ ಸಂದರ್ಭದಲ್ಲಿ ರಾಜ್ಯ ಖಜಾಂಚಿ ಕೆ.ಬಿ ಗೋವಿಂದರಾಜು, ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಅನ್ನಪೂರ್ಣ, ರಾಜ್ಯ ಸಂಘಟನಾ ಕಾರ್ಯದರ್ಶಿ ಚನ್ನಿಗರಾಯಪ್ಪ, ಜಿಲ್ಲಾಧ್ಯಕ್ಷ ನಾಗರಾಜು.ಪಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ್. ಜಿ ಇದ್ದರು.

Ramesh Babu

Journalist

Recent Posts

ಕಾರಿನಲ್ಲಿ ಬೆಂಕಿ: ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮ: ಹಲವು ಅನುಮಾನ

ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…

7 hours ago

ಶ್ರೀ ಅಭಯ ಚೌಡೇಶ್ವರಿ ದೇವಿಯ ಜ್ಯೋತಿ, ಪಲ್ಲಕ್ಕಿ ಉತ್ಸವ

ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…

7 hours ago

ಗಂಗಸಂದ್ರದಲ್ಲಿ ಮೇ.6,7ರಂದು ಶ್ರೀ ಅಶ್ವತ್ಥ ಕಟ್ಟೆ ನಾಗ ದೇವರ ಪ್ರತಿಷ್ಠಾಪನಾ ಮಹೋತ್ಸವ

ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…

11 hours ago

ಬುದ್ದ ಹುಣ್ಣಿಮೆಯಲ್ಲಿ ಜ್ಞಾನವನ್ನು ಹುಡುಕುತ್ತಾ……

ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…

17 hours ago

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

1 day ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

1 day ago