2023ರ ವಿಧಾನಸಭಾ ಚುನಾವಣೆ: ಹಾಲಿ‌ ಶಾಸಕರ ಆಡಳಿತ ವೈಖರಿಗೆ ಬೇಸತ್ತ ಮಾದಿಗ ಸಮುದಾಯ: ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಪರ ನಿಂತ ಮಾದಿಗ ಸಮುದಾಯ

ಕ್ಷೇತ್ರದ ಶಾಸಕ ಟಿ.ವೆಂಕಟರಮಣಯ್ಯ ನವರ ಮಲತಾಯಿ ಧೋರಣೆಯಿಂದ ಎಸ್ ಸಿ, ಎಸ್ ಟಿ ಜನಾಂಗವನ್ನು ಕಡೆಗಣಿಸುತ್ತಲೇ ಬಂದಿದ್ದಾರೆ. ಅವರು ಮೇಲ್ನೋಟಕ್ಕೆ ನಾನು ಜಾತ್ಯಾತೀತ ವ್ಯಕ್ತಿ ಎಂದು ಹೇಳಿಕೊಂಡು ಒಳಗಡೆ ಕಳೆದ ಹತ್ತು ವರ್ಷಗಳಿಂದ ಜಾತಿ ರಾಜಕಾರಣ ಮಾಡಿಕೊಂಡು ಬಂದಿದ್ದಾರೆ. ಆದ್ದರಿಂದ ಶಾಸಕರ ನಡೆ ವಿರೋಧಿಸಿ ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಅವರಿಗೆ ಸಮಸ್ತ ಮಾದಿಗ ಸಮುದಾಯ ಚುನಾವಣೆಯಲ್ಲಿ ಸಂಪೂರ್ಣ ಬೆಂಬಲ ನೀಡುತ್ತೇವೆ ಎಂದು ಕರ್ನಾಟಕ ಸ್ವಾಭಿಮಾನಿ ಮಾದಿಗ ಸಂಘಟನೆಗಳ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಸಿದ್ದರಾಜು ತಿಳಿಸಿದರು.

ಈ ಕುರಿತು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹತ್ತು ವರ್ಷದ ಹಿಂದೆ ಹೋಬಳಿಗೊಂದು ಮದ್ಯದ ಅಂಗಡಿ ಇತ್ತು ಟಿ.ವೆಂಕಟರಮಣಯ್ಯ ಶಾಸಕರಾದ ಮೇಲೆ ಪ್ರತಿ ಹಳ್ಳಿಯಲ್ಲಿ ಕಾನೂನು ಬಾಹಿರವಾಗಿ ಎರಡು ಮೂರು ಮದ್ಯದ ಅಂಗಡಿಗಳು ಇದ್ದು, ಜನತೆಗೆ ಹಾಡು ಹಗಲೇ ಮದ್ಯ ಕೊಟ್ಟು ಜನರ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದಾರೆ, ಮದ್ಯದ ದಂಧೆ ಎಗ್ಗಿಲ್ಲದೆ ಕ್ಷೇತ್ರದಲ್ಲಿ ನಡೆಯುತ್ತಿದೆ ಎಂದು ಆರೋಪಿಸಿದರು.

ಕ್ಷೇತ್ರದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು ಜಮೀನು ಮಂಜೂರಾತಿಗಾಗಿ ನಮೂನೆ 53, ನಮೂನೆ 57ರ ಅಡಿಯಲ್ಲಿ ಅರ್ಜಿ ಹಾಕಿಕೊಂಡಿದ್ದು ಇದುವರೆಗೂ ಜಮೀನು ಮಂಜೂರು ಮಾಡದೇ ಕೇವಲ ಮೇಲ್ವರ್ಗದ ಜನಾಂಗಕ್ಕೆ ಮಂಜೂರು ಮಾಡಿ ನಮಗೆ ಅನ್ಯಾಯ ಮಾಡುತ್ತಿರುವ ಕಾಂಗ್ರೆಸ್ ಶಾಸಕ ಟಿ.ವೆಂಕಟರಮಣಯ್ಯ.

ಕಳೆದ 40 ವರ್ಷಗಳ ನಿರಂತರ ಮಾದಿಗರ ಸ್ವಾಭಿಮಾನದ ಒಕ್ಕೊರಲಿನ ಹೋರಾಟವನ್ನು ಗೌರವಿಸಿ ಕರ್ನಾಟಕದ ವಿಧಾನಸಭೆಯಲ್ಲಿ ವೈಜ್ಞಾನಿಕ ಒಳ ಮೀಸಲಾತಿಯನ್ನು ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸನ್ನು ಮಾಡಿದ ಬಿಜೆಪಿ ಪಕ್ಷಕ್ಕೆ ಹಾಗೂ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಅವರ ಪರ ಮಾದಿಗ ಸಮುದಾಯ ಬೆಂಬವಾಗಿ ನಿಲ್ಲಲಿದೆ ಎಂದರು.

ಸಮಸ್ತ ಪರಿಶಿಷ್ಟ ಜಾತಿಯ ವೈಜ್ಞಾನಿಕ ಒಳ ಮೀಸಲಾತಿಯಾದ ಎ.ಜೆ. ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡಿದ ಬಿಜೆಪಿ ಸರ್ಕಾರಕ್ಕೆ ನಮ್ಮ ಮಾದಿಗ ಸಮುದಾಯದ ಬೆಂಬಲ ಸೂಚಿಸುತ್ತಿದ್ದು, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಪರಿಶಿಷ್ಟರಲ್ಲೇ ಬಹುಸಂಖ್ಯಾತರಾದ ಮಾದಿಗರು ಈ ವೋಟಿನ ರಾಜಕಾರಣದಲ್ಲಿ ನಿರ್ಣಾಯಕವಾದ ಪಾತ್ರ ವಹಿಸುವುದು ಮಹತ್ವಪೂರ್ಣವಾಗಿದೆ ಎಂದರು.

ಸಂಘಟನೆಯ ರಾಜ್ಯ ಸಂಚಾಲಕರಾದ ಮೈಲಾರಪ್ಪ ಮಾತನಾಡಿ, ಮಾಜಿ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೊಳರ ಮಾರ್ಗದರ್ಶನದಂತೆ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಾರ್ಟಿಯ ಅಧಿಕೃತ ಅಭ್ಯರ್ಥಿ, ಹಿಂದುಳಿದ ವರ್ಗದ ಯುವ ಮುಖಂಡ, ಧೀರಜ್ ಮುನಿರಾಜು ಅವರನ್ನು ಬೆಂಬಲಿಸಿ, ಅವರಿಗೆ ಮತ ಚಲಾಯಿಸಿ ಅವರನ್ನು ಅತ್ಯಧಿಕ ಅಂತರದಿಂದ ಜಯಶೀಲರನ್ನಾಗಿ ಮಾಡುವ ಜವಾಬ್ದಾರಿ ಮಾದಿಗ ಸಮುದಾಯದ ಮುಖಂಡರಾದ ನಮ್ಮ ಮೇಲಿದೆ ಎಂದರು.

ಈ ಸಂದರ್ಭದಲ್ಲಿ ರಾಜ್ಯ ಖಜಾಂಚಿ ಕೆ.ಬಿ ಗೋವಿಂದರಾಜು, ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಅನ್ನಪೂರ್ಣ, ರಾಜ್ಯ ಸಂಘಟನಾ ಕಾರ್ಯದರ್ಶಿ ಚನ್ನಿಗರಾಯಪ್ಪ, ಜಿಲ್ಲಾಧ್ಯಕ್ಷ ನಾಗರಾಜು.ಪಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ್. ಜಿ ಇದ್ದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

12 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

15 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

16 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

19 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago