2023ರ ವಿಧಾನಸಭಾ ಚುನಾವಣೆ: ಹಾಲಿ‌ ಶಾಸಕರ ಆಡಳಿತ ವೈಖರಿಗೆ ಬೇಸತ್ತ ಮಾದಿಗ ಸಮುದಾಯ: ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಪರ ನಿಂತ ಮಾದಿಗ ಸಮುದಾಯ

ಕ್ಷೇತ್ರದ ಶಾಸಕ ಟಿ.ವೆಂಕಟರಮಣಯ್ಯ ನವರ ಮಲತಾಯಿ ಧೋರಣೆಯಿಂದ ಎಸ್ ಸಿ, ಎಸ್ ಟಿ ಜನಾಂಗವನ್ನು ಕಡೆಗಣಿಸುತ್ತಲೇ ಬಂದಿದ್ದಾರೆ. ಅವರು ಮೇಲ್ನೋಟಕ್ಕೆ ನಾನು ಜಾತ್ಯಾತೀತ ವ್ಯಕ್ತಿ ಎಂದು ಹೇಳಿಕೊಂಡು ಒಳಗಡೆ ಕಳೆದ ಹತ್ತು ವರ್ಷಗಳಿಂದ ಜಾತಿ ರಾಜಕಾರಣ ಮಾಡಿಕೊಂಡು ಬಂದಿದ್ದಾರೆ. ಆದ್ದರಿಂದ ಶಾಸಕರ ನಡೆ ವಿರೋಧಿಸಿ ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಅವರಿಗೆ ಸಮಸ್ತ ಮಾದಿಗ ಸಮುದಾಯ ಚುನಾವಣೆಯಲ್ಲಿ ಸಂಪೂರ್ಣ ಬೆಂಬಲ ನೀಡುತ್ತೇವೆ ಎಂದು ಕರ್ನಾಟಕ ಸ್ವಾಭಿಮಾನಿ ಮಾದಿಗ ಸಂಘಟನೆಗಳ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಸಿದ್ದರಾಜು ತಿಳಿಸಿದರು.

ಈ ಕುರಿತು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹತ್ತು ವರ್ಷದ ಹಿಂದೆ ಹೋಬಳಿಗೊಂದು ಮದ್ಯದ ಅಂಗಡಿ ಇತ್ತು ಟಿ.ವೆಂಕಟರಮಣಯ್ಯ ಶಾಸಕರಾದ ಮೇಲೆ ಪ್ರತಿ ಹಳ್ಳಿಯಲ್ಲಿ ಕಾನೂನು ಬಾಹಿರವಾಗಿ ಎರಡು ಮೂರು ಮದ್ಯದ ಅಂಗಡಿಗಳು ಇದ್ದು, ಜನತೆಗೆ ಹಾಡು ಹಗಲೇ ಮದ್ಯ ಕೊಟ್ಟು ಜನರ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದಾರೆ, ಮದ್ಯದ ದಂಧೆ ಎಗ್ಗಿಲ್ಲದೆ ಕ್ಷೇತ್ರದಲ್ಲಿ ನಡೆಯುತ್ತಿದೆ ಎಂದು ಆರೋಪಿಸಿದರು.

ಕ್ಷೇತ್ರದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು ಜಮೀನು ಮಂಜೂರಾತಿಗಾಗಿ ನಮೂನೆ 53, ನಮೂನೆ 57ರ ಅಡಿಯಲ್ಲಿ ಅರ್ಜಿ ಹಾಕಿಕೊಂಡಿದ್ದು ಇದುವರೆಗೂ ಜಮೀನು ಮಂಜೂರು ಮಾಡದೇ ಕೇವಲ ಮೇಲ್ವರ್ಗದ ಜನಾಂಗಕ್ಕೆ ಮಂಜೂರು ಮಾಡಿ ನಮಗೆ ಅನ್ಯಾಯ ಮಾಡುತ್ತಿರುವ ಕಾಂಗ್ರೆಸ್ ಶಾಸಕ ಟಿ.ವೆಂಕಟರಮಣಯ್ಯ.

ಕಳೆದ 40 ವರ್ಷಗಳ ನಿರಂತರ ಮಾದಿಗರ ಸ್ವಾಭಿಮಾನದ ಒಕ್ಕೊರಲಿನ ಹೋರಾಟವನ್ನು ಗೌರವಿಸಿ ಕರ್ನಾಟಕದ ವಿಧಾನಸಭೆಯಲ್ಲಿ ವೈಜ್ಞಾನಿಕ ಒಳ ಮೀಸಲಾತಿಯನ್ನು ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸನ್ನು ಮಾಡಿದ ಬಿಜೆಪಿ ಪಕ್ಷಕ್ಕೆ ಹಾಗೂ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಅವರ ಪರ ಮಾದಿಗ ಸಮುದಾಯ ಬೆಂಬವಾಗಿ ನಿಲ್ಲಲಿದೆ ಎಂದರು.

ಸಮಸ್ತ ಪರಿಶಿಷ್ಟ ಜಾತಿಯ ವೈಜ್ಞಾನಿಕ ಒಳ ಮೀಸಲಾತಿಯಾದ ಎ.ಜೆ. ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡಿದ ಬಿಜೆಪಿ ಸರ್ಕಾರಕ್ಕೆ ನಮ್ಮ ಮಾದಿಗ ಸಮುದಾಯದ ಬೆಂಬಲ ಸೂಚಿಸುತ್ತಿದ್ದು, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಪರಿಶಿಷ್ಟರಲ್ಲೇ ಬಹುಸಂಖ್ಯಾತರಾದ ಮಾದಿಗರು ಈ ವೋಟಿನ ರಾಜಕಾರಣದಲ್ಲಿ ನಿರ್ಣಾಯಕವಾದ ಪಾತ್ರ ವಹಿಸುವುದು ಮಹತ್ವಪೂರ್ಣವಾಗಿದೆ ಎಂದರು.

ಸಂಘಟನೆಯ ರಾಜ್ಯ ಸಂಚಾಲಕರಾದ ಮೈಲಾರಪ್ಪ ಮಾತನಾಡಿ, ಮಾಜಿ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೊಳರ ಮಾರ್ಗದರ್ಶನದಂತೆ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಾರ್ಟಿಯ ಅಧಿಕೃತ ಅಭ್ಯರ್ಥಿ, ಹಿಂದುಳಿದ ವರ್ಗದ ಯುವ ಮುಖಂಡ, ಧೀರಜ್ ಮುನಿರಾಜು ಅವರನ್ನು ಬೆಂಬಲಿಸಿ, ಅವರಿಗೆ ಮತ ಚಲಾಯಿಸಿ ಅವರನ್ನು ಅತ್ಯಧಿಕ ಅಂತರದಿಂದ ಜಯಶೀಲರನ್ನಾಗಿ ಮಾಡುವ ಜವಾಬ್ದಾರಿ ಮಾದಿಗ ಸಮುದಾಯದ ಮುಖಂಡರಾದ ನಮ್ಮ ಮೇಲಿದೆ ಎಂದರು.

ಈ ಸಂದರ್ಭದಲ್ಲಿ ರಾಜ್ಯ ಖಜಾಂಚಿ ಕೆ.ಬಿ ಗೋವಿಂದರಾಜು, ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಅನ್ನಪೂರ್ಣ, ರಾಜ್ಯ ಸಂಘಟನಾ ಕಾರ್ಯದರ್ಶಿ ಚನ್ನಿಗರಾಯಪ್ಪ, ಜಿಲ್ಲಾಧ್ಯಕ್ಷ ನಾಗರಾಜು.ಪಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ್. ಜಿ ಇದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

12 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

12 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago