ಮೇ.10ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಚುನಾವಣೆಯ ದಿನವನ್ನು ಮತದಾನದ ಹಬ್ಬವೆಂದು ಭಾವಿಸಿ ಪ್ರತಿಯೊಬ್ಬ ಮತದಾರರು ಯಾವುದೇ ಹಣ, ಆಸೆ-ಆಕಾಂಕ್ಷೆಗಳಿಗೆ ಒಳಗಾಗದೆ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ತಾ.ಪಂ ಕಾರ್ಯನಿರ್ವಾಹಕಾಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಶ್ರೀನಾಥ್ ಗೌಡ ತಿಳಿಸಿದರು.
ತಾಲೂಕು ಸ್ವೀಪ್ ಸಮಿತಿ ವತಿಯಿಂದ ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮತದಾನದ ದಿನದಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದ್ದು, ಮತದಾರರು ತಪ್ಪದೇ ಮತ ಚಲಾಯಿಸಿ ಪ್ರಾಮಾಣಿಕ ವ್ಯಕ್ತಿಗಳನ್ನು ಆರಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸದೃಢಗೊಳಿಸಿ ಉತ್ತಮ ದೇಶ ನಿರ್ಮಾಣ ಮಾಡಬೇಕೆಂದು ಮನವಿ ಮಾಡಿದರು.
ಗ್ರಾಮದ ಬೀದಿ-ಬೀದಿಗಳಲ್ಲಿ ಮತದಾನದ ಜಾಗೃತಿ ಮೂಡಿಸುವ ಘೋಷಣೆಗಳನ್ನು ಕೂಗುತ್ತಾ ಜಾಥಾ ಕೈಗೊಳ್ಳಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ಸಿಬ್ಬಂದಿ, ಎನ್.ಆರ್. ಎಲ್.ಎಂ.ವಲಯ ಮೇಲ್ವಿಚಾರಕ ಯೋಗೇಶ್, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.
ಶೋಕಿಗೆ ಬಿದ್ದ ಹೆಂಡತಿ ಹೈಪೈ ಜೀವನಕ್ಕಾಗಿ ಗಂಡನಿಗೆ ಊರು ಬಿಡಿಸಿ ಸಿಟಿ ಸೇರಿದ್ದರು.. ಗಂಡನ ಕೈತುಂಬಾ ಕಾಸಿದ್ದಾಗ ಚಿನ್ನ, ರನ್ನ…
ಚಿಕ್ಕಬಳ್ಳಾಪುರ: ಅನುಮಾನಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ರಂಗಸ್ಥಳ ದೇವಸ್ಥಾನದ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ನಾಳೆ(ಮೇ.18) ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಜನ್ಮದಿನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜೆಡಿಎಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ…
ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…
ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…