2023-ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ನಾಮಪತ್ರ ಹಿಂಪಡೆಯುವ ದಿನವಾದ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಂದ ಒಟ್ಟು 05 ಅಭ್ಯರ್ಥಿಗಳು ನಾಮಪತ್ರಗಳನ್ನು ಹಿಂಪಡೆದಿದ್ದು, ಚುನಾವಣೆಯ ಅಂತಿಮ ಕಣದಲ್ಲಿ ಒಟ್ಟು 56 ಅಭ್ಯರ್ಥಿಗಳಿದ್ದಾರೆ.
178-ಹೊಸಕೋಟೆ ವಿಧಾನಸಭಾ ಕ್ಷೇತ್ರದ ಚುನಾವಣೆಯ ಅಂತಿಮ ಕಣದಲ್ಲಿ 23 ಅಭ್ಯರ್ಥಿಗಳು ಉಳಿದಿದ್ದು, ಒಬ್ಬ ಅಭ್ಯರ್ಥಿಯು ನಾಮಪತ್ರ ಹಿಂಪಡೆದಿದ್ದಾರೆ.
179-ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಚುನಾವಣೆಯ ಅಂತಿಮ ಕಣದಲ್ಲಿ 11 ಅಭ್ಯರ್ಥಿಗಳು ಉಳಿದಿದ್ದು, ಇಬ್ಬರು ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದಾರೆ.
180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಚುನಾವಣೆಯ ಅಂತಿಮ ಕಣದಲ್ಲಿ 12 ಅಭ್ಯರ್ಥಿಗಳು ಉಳಿದಿದ್ದು, ಒಬ್ಬ ಅಭ್ಯರ್ಥಿಯು ನಾಮಪತ್ರ ಹಿಂಪಡೆದಿದ್ದಾರೆ.
181-ನೆಲಮಂಗಲ ವಿಧಾನಸಭಾ ಕ್ಷೇತ್ರದ ಚುನಾವಣೆಯ ಅಂತಿಮ ಕಣದಲ್ಲಿ 10 ಅಭ್ಯರ್ಥಿಗಳು ಉಳಿದಿದ್ದು, ಒಬ್ಬ ಅಭ್ಯರ್ಥಿಯು ನಾಮಪತ್ರ ಹಿಂಪಡೆದಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ.
ನಾಮಪತ್ರ ಹಿಂಪಡೆದ ಅಭ್ಯರ್ಥಿಗಳ ವಿವರ
ಹೊಸಕೋಟೆ ವಿಧಾನಸಭಾ ಕ್ಷೇತ್ರ
1. ನವೀನ.ಕೆ (ಸ್ವತಂತ್ರ ಅಭ್ಯರ್ಥಿ)
ದೇವನಹಳ್ಳಿ ವಿಧಾನಸಭಾ ಕ್ಷೇತ್ರ
1. ಡಾ.ಎಂ.ವೆಂಕಟ ಸ್ವಾಮಿ (ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ)
2. ಮುನಿಯಪ್ಪ.ಕೆ (ಸ್ವತಂತ್ರ ಅಭ್ಯರ್ಥಿ)
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ
1. ಇಬ್ರಾಹಿಂ ಷರೀಫ್ ತೂಬಗೆರೆ ಷರೀಫ್ (ಸ್ವತಂತ್ರ ಅಭ್ಯರ್ಥಿ)
ನೆಲಮಂಗಲ ವಿಧಾನಸಭಾ ಕ್ಷೇತ್ರ
1. ಅರುಣ್ ಕುಮಾರ್.ಬಿ.ಎನ್ (ಸ್ವತಂತ್ರ ಅಭ್ಯರ್ಥಿ)
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…