2023 ಆಸ್ಕರ್ ಪ್ರಶಸ್ತಿ: ಭಾರತದ ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರಕ್ಕೆ ಲಭಿಸಿದ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ

95 ನೇ ಆಸ್ಕರ್ ಪ್ರಶಸ್ತಿ ಪ್ರಕಟಗೊಂಡಿದ್ದು, ಭಾರತದ ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರಕ್ಕೆ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ಲಭಿಸಿದೆ. ತಮಿಳಿನ ‘ದಿ ಎಲಿಫೆಂಟ್ ವಿಸ್ಪರರ್ಸ್’ಗೆ ಸಾಕ್ಷ್ಯಚಿತ್ರ ಇದಾಗಿದೆ. ಈ ಬಾರಿಯ ಆಸ್ಕರ್‌ನಲ್ಲಿ ಭಾರತಕ್ಕೆ ಲಭಿಸಿದ ಪ್ರಥಮ ಪ್ರಶಸ್ತಿಯಾಗಿದೆ.

ಲಾಸ್ ಎಂಜಲೀಸ್‌ನಲ್ಲಿ ನಡೆಯುತ್ತಿರುವ ಅದ್ದೂರಿ ಸಮಾರಂಭದಲ್ಲಿ ‘ದಿ ಎಲಿಫೆಂಟ್ ವಿಸ್ಪರರ್ಸ್’ ಎಂಬ ಸಾಕ್ಷ್ಯಚಿತ್ರಕ್ಕೆ ಆಸ್ಕರ್ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರವನ್ನು ಕಾರ್ತಿಕಿ ಗೊನ್ಸಾಲ್ವೆಸ್ ನಿರ್ದೇಶಿಸಿದ್ದಾರೆ. ಸಿಖ್ಯ ಎಂಟರ್‌ಟೈನ್‌ಮೆಂಟ್‌ನ ಗುನೀತ್ ಮೊಂಗಾ ಮತ್ತು ಅಚಿನ್ ಜೈನ್ ನಿರ್ಮಾಣದಲ್ಲಿ ಈ ಕಿರು ಚಿತ್ರ ಮೂಡಿಬಂದಿದೆ.

ಅನಾಥ ಆನೆ ಮರಿಯ ಆರೈಕೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ದಂಪತಿಯ ಕಥೆಯನ್ನು ‘ದಿ ಎಲಿಫೆಂಟ್ ವಿಸ್ಪರರ್ಸ್’ ಹೊಂದಿದೆ. ಮುದುಮಲೈ ರಾಷ್ಟ್ರೀಯ ಉದ್ಯಾನವನದಲ್ಲಿ ನಿರ್ಮಿಸಲಾದ ಈ ಸಾಕ್ಷ್ಯಚಿತ್ರದಲ್ಲಿ ಸ್ಥಳೀಯ ದಂಪತಿಗಳಾದ ಬೊಮ್ಮನ್ ಮತ್ತು ಬೆಳ್ಳಿಯ ಆರೈಕೆಯಲ್ಲಿ ಬೆಳೆದ ರಘು ಎಂಬ ಅನಾಥ ಆನೆ ಮರಿಯ ಕಥೆ ಹೇಳಲಾಗಿದೆ.

ಈ ಸಾಕ್ಷ್ಯಚಿತ್ರವು ಆನೆ ಮತ್ತು ಆ ದಂಪತಿ ನಡುವೆ ಬೆಳೆಯುವ ಬಾಂಧವ್ಯವನ್ನು ಮಾತ್ರವಲ್ಲದೆ ಅಲ್ಲಿನ ಪ್ರಾಕೃತಿಕ ಸೌಂದರ್ಯವನ್ನು ಕಾಣಬಹುದು.

‘ಹೌಲೌಟ್’, ‘ಹೌ ಡು ಯು ಮೆಷರ್ ಎ ಇಯರ್?’, ‘ದಿ ಮಾರ್ಥಾ ಮಿಚೆಲ್ ಎಫೆಕ್ಟ್’ ಮತ್ತು ‘ಸ್ಟ್ರೇಂಜರ್ ಅಟ್ ದಿ ಗೇಟ್’ ಕಿರು ಚಿತ್ರಗಳೊಡನೆ ಸ್ಪರ್ಧಿಸಿ, ‘ದಿ ಎಲಿಫೆಂಟ್ ವಿಸ್ಪರರ್ಸ್’ ಪ್ರಶಸ್ತಿ ಪಡೆದುಕೊಂಡಿದೆ.

ಹಿಂದೆ, ಭಾರತದಿಂದ “ಸ್ಮೈಲ್ ಪಿಂಕಿ” ಮತ್ತು “ಪಿರಿಯಡ್ ಎಂಡ್ ಆಫ್ ಸೆಂಟೆನ್ಸ್” ಸಾಕ್ಷ್ಯಚಿತ್ರ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿಗಳನ್ನು ಗೆದ್ದುಕೊಂಡಿತು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

13 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

16 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

17 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

20 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago