2023-24 ನೇ ವರ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರಾಜ್ಯವಲಯ ಕ್ಷೇತ್ರ ಮತ್ತು ನರ್ಸರಿಗಳಲ್ಲಿ ಲಭ್ಯವಿರುವ ಸಸಿಗಳ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಅಗತ್ಯ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ರೈತರು ತೋಟಗಾರಿಕೆ ಇಲಾಖೆಯ ಕ್ಷೇತ್ರ ಮತ್ತು ನರ್ಸರಿಗಳಲ್ಲಿ ಲಭ್ಯವಿರುವ ತೆಂಗು, ಮಾವು, ಸೀಬೆ, ನುಗ್ಗೆ, ಕರಿಬೇವು, ನೆಲ್ಲಿ ಮತ್ತು ನಿಂಬೆ ಕಸಿ/ಸಸಿಗಳನ್ನು ತೋಟಗಾರಿಕೆ ಇಲಾಖೆ ನಿಗದಿಪಡಿಸಿದ ದರದಲ್ಲಿ ಖರೀದಿಸಲು ರೈತರಿಗೆ ಅರಿವು ಮೂಡಿಸಲಾಗುತ್ತಿದೆ.

2023ರ ಎಪ್ರಿಲ್ ಅಂತ್ಯಕ್ಕೆ ತೋಟಗಾರಿಕೆ ಇಲಾಖೆಯಡಿ ಒಟ್ಟಾರೆ ಉಳಿಕೆ ಕಸಿ/ಸಸಿಗಳ ವಿವರ:

ಕನ್ನಮಂಗಲ ನರ್ಸರಿಯಲ್ಲಿ ಮಾವು-3596, ಸೀಬೆ-3510, ನಿಂಬೆ-1830, ತೆಂಗು-9485, ಪಪ್ಪಾಯ-1977 , ನುಗ್ಗೆ-1262, ಕರಿಬೇವು-1977, ಇತರೆ (ಅಲಂಕಾರಿಕ ಗಿಡಗಳು)-6968, ಒಟ್ಟು-30605 ಗಿಡಗಳಿವೆ.

ನಗರೂರು ನರ್ಸರಿಯಲ್ಲಿ ತೆಂಗು-8550, ಇತರೆ (ಅಲಂಕಾರಿಕ ಗಿಡಗಳು)-2200
ಒಟ್ಟು-10750 ಗಿಡಗಳಿವೆ.

ದೊಡ್ಡಬಳ್ಳಾಪುರ ನರ್ಸರಿಯಲ್ಲಿ ತೆಂಗು-10650, ಅಡಿಕೆ-2000, ನುಗ್ಗೆ-990, ಕರಿಬೇವು-990, ಇತರೆ (ಅಲಂಕಾರಿಕ ಗಿಡಗಳು)-3402, ಒಟ್ಟು-18032 ಗಿಡಗಳಿವೆ.

ತಿಪ್ಪಗೊಂಡನಹಳ್ಳಿ ನರ್ಸರಿಯಲ್ಲಿ ಮಾವು-3000, ಸೀಬೆ-3000, ನಿಂಬೆ-3282, ತೆಂಗು-13300,ಅಡಿಕೆ- 20000,ನುಗ್ಗೆ-1918, ಕರಿಬೇವು-700, ಇತರೆ(ಅಲಂಕಾರಿಕ ಗಿಡಗಳು)- 235, ಒಟ್ಟು-45435 ಗಿಡಗಳಿವೆ.

ಕೆ.ಪೂಜೇನಹಳ್ಳಿ ನರ್ಸರಿಯಲ್ಲಿ ಮಾವು-1718, ಸೀಬೆ-3000, ನಿಂಬೆ-1130, ತೆಂಗು-10125, ಇತರೆ(ಅಲಂಕಾರಿಕ ಗಿಡಗಳು)-300 , ಒಟ್ಟು-16273 ಗಿಡಗಳಿವೆ.

ಒಟ್ಟು ಜಿಲ್ಲೆಯಲ್ಲಿ 8314ಮಾವು, 9510ಸೀಬೆ, ನಿಂಬೆ 6242, ತೆಂಗು52110, ಪಪ್ಪಾಯ1977, ಅಡಿಕೆ22000, ನುಗ್ಗೆ4170, ಕರಿಬೇವು3667, ಇತರೆ(ಅಲಂಕಾರಿಕ ಗಿಡಗಳು) 13105, ಒಟ್ಟು121095 ಗಿಡಗಳಿವೆ.

ಹೆಚ್ಚಿನ ಮಾಹಿತಿಗಾಗಿ

ಲಕ್ಷ್ಮಿ ಜೆ,ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಬೆಂಗಳೂರು ಗ್ರಾಮಾಂತರ ಜಿಲ್ಲೆ:9449045052,

ಸ್ಮಿತಾ ಎಂ.ಎನ್, ಸಹಾಯಕ ತೋಟಗಾರಿಕೆ ನಿರ್ದೇಶಕರು, ಕೆ.ಪೂಜೇನಹಳ್ಳಿ ತೋಟಗಾರಿಕೆ ಕ್ಷೇತ್ರ: 9035958286,

ಶಾಮಣ್ಣ.ಎಸ್.ಎನ್, ಸಹಾಯಕ ತೋಟಗಾರಿಕೆ ನಿರ್ದೇಶಕರು, ಕನ್ನಮಂಗಲ ಮಾವು ಉತ್ಕೃಷ್ಟ ಕೇಂದ್ರ: 7338011518,

ವಿಜಯ್ ಕುಮಾರ್ ಸಹಾಯಕ ತೋಟಗಾರಿಕೆ ನಿರ್ದೇಶಕರು, ತಿಪ್ಪಗೊಂಡನಹಳ್ಳಿ ತೋಟಗಾರಿಕೆ ಕ್ಷೇತ್ರ: 9035720179,

ಶಿವಾನಂದ್, ತೋಟಗಾರಿಕೆ ಸಹಾಯಕರು, ದೊಡ್ಡಬಳ್ಳಾಪುರ ತೋಟಗಾರಿಕೆ ಕ್ಷೇತ್ರ: 9164021289 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತೋಟಗಾರಿಕೆ ಉಪನಿರ್ದೇಶಕರಾದ ಗುಣವಂತ.ಜೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

6 hours ago

ಲಾರಿ-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…

8 hours ago

ಹಸಿವಿನ ಔಷಧಿ ಮತ್ತು ಮತದಾನ…..

ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…

11 hours ago

ಶಾಲಾ ಆವರಣ ಸುತ್ತಮುತ್ತ ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳ ಮೇಲೆ ದಾಳಿ: 9 ಕೆಜಿ ತಂಬಾಕು ಉತ್ಪನ್ನ, ನಿರ್ಬಂಧಿತ ಏಕಬಳಕೆ ಪ್ಲಾಸ್ಟಿಕ್ ಪತ್ತೆ: ಅಂಗಡಿ ಮಾಲೀಕರಿಗೆ ನೋಟಿಸ್ ಜಾರಿ ಮಾಡಿ, ದಂಡ ವಿಧಿಸಿದ ಅಧಿಕಾರಿಗಳು

ದೊಡ್ಡಬಳ್ಳಾಪುರ ನಗರದ ಶಾಲಾ ಆವರಣದ ಸುತ್ತಮುತ್ತ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಏ.4ರಂದು ದೊಡ್ಡಬಳ್ಳಾಪುರ…

22 hours ago

ವಕೀಲ ಪ್ರತಾಪ್ ಜಮೀನು ವ್ಯಾಜ್ಯಕ್ಕೆ ಬಿಗ್ ಟ್ವಿಸ್ಟ್: ‘ಕಾಂಪೌಂಡ್ ನಿರ್ಮಾಣಕ್ಕೆ ಅಡ್ಡಿಪಡಿಸಲು ಹೇಳಿದ್ದೇ ಶಾಸಕ ಧೀರಜ್ ಮುನಿರಾಜ್’- ವಕೀಲ ಪ್ರತಾಪ್ ಗಂಭೀರ ಆರೋಪ

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

22 hours ago

ಸೋಲು – ಸಾವು – ಭಯ – ಬದುಕು……

"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…

1 day ago