2024ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆ ಫಲಿತಾಂಶ ಪ್ರಕಟ: ಪ್ರಥಮ ರ‍್ಯಾಂಕ್ ಪಡೆದ ಶಕ್ತಿ ದುಬೆ

2024ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆ ಫಲಿತಾಂಶವನ್ನು ಕೇಂದ್ರ ಲೋಕಸೇವಾ ಆಯೋಗ ಮಂಗಳವಾರ ಪ್ರಕಟಿಸಿದ್ದು, ಶಕ್ತಿ ದುಬೆ ಪ್ರಥಮ ರ‍್ಯಾಂಕ್
ಪಡೆದಿದ್ದಾರೆ.

ದುಬೆ ಅವರು ಅಲಹಾಬಾದ್ ವಿಶ್ವವಿದ್ಯಾನಿಲಯದಿಂದ ಬಯೋಕೆಮಿಸ್ಟ್ರಿಯಲ್ಲಿ ಪದವಿ (Bachelor of Science) ಪಡೆದಿದ್ದಾರೆ. ಅವರು ರಾಜ್ಯಶಾಸ್ತ್ರ ಮತ್ತು ಅಂತಾರಾಷ್ಟ್ರೀಯ ಸಂಬಂಧ ವಿಷಯವನ್ನು ಐಚ್ಛಿಕ ವಿಷಯವನ್ನಾಗಿ ತೆಗೆದುಕೊಂಡು ಪರೀಕ್ಷೆಗೆ ಅರ್ಹರಾಗಿದ್ದರು ಎಂದು ಆಯೋಗದ ಹೇಳಿಕೆ ತಿಳಿಸಿದೆ.

ಹರ್ಷಿತಾ ಗೋಯಲ್ ಅವರು 2ನೇ Rank ಪಡೆದುಕೊಂಡಿದ್ದಾರೆ. ಇವರು ಬರೋಡಾದ ಎಂಎಸ್ ವಿಶ್ವವಿದ್ಯಾನಿಲಯದಿಂದ ಬಿ.ಕಾಂ ಪದವಿ ಪಡೆದಿರುವ ಹರ್ಷಿತಾ ಗೋಯಲ್ ಕೂಡಾ ರಾಜಕೀಯ ವಿಜ್ಞಾನ ಮತ್ತು ಅಂತಾರಾಷ್ಟ್ರೀಯ ಸಂಬಂಧಗಳನ್ನು ಐಚ್ಛಿಕ ವಿಷಯವಾಗಿ ತೆಗೆದುಕೊಂಡು,

ವೆಲ್ಲೂರಿನ VITಯಲ್ಲಿ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ ಬ್ಯಾಚುಲರ್ ಆಫ್ ಟೆಕ್ನಾಲಜಿ (ಬಿಟೆಕ್) ಹೊಂದಿರುವ ಡೋಂಗ್ರೆ ಅರ್ಚಿತ್ ಪರಾಗ್, ತತ್ವಶಾಸ್ತ್ರವನ್ನು ಐಚ್ಛಿಕ ವಿಷಯವಾಗಿ ತೆಗೆದುಕೊಂಡು ಮೂರನೇ ಸ್ಥಾನದಲ್ಲಿದ್ದಾರೆ.

ಭಾರತೀಯ ಆಡಳಿತ ಸೇವೆ IAS,ಭಾರತೀಯ ಪೊಲೀಸ್ ಸೇವೆ (IPS) ಭಾರತೀಯ ವಿದೇಶಾಂಗ ಸೇವೆ (IFS)ಮತ್ತಿತರ ಹುದ್ದೆಗಳಿಗೆ ಆಯ್ಕೆ ಮಾಡಲು ಯುಪಿಎಸ್ ಸಿ ಪ್ರಿಲಿಮರಿ, ಮುಖ್ಯ ಮತ್ತು ಸಂದರ್ಶನ ಮೂರು ಹಂತದಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಕಳೆದ ವರ್ಷ ಜೂನ್ 16 ರಂದು ಪ್ರಿಲಿಮರಿ ಪರೀಕ್ಷೆ ನಡೆಸಲಾಯಿತು. ಈ ಪರೀಕ್ಷೆಗೆ ಒಟ್ಟು 9,92,599 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಈ ಪೈಕಿ 5,83,213 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಸೆಪ್ಟೆಂಬರ್ 2024 ರಲ್ಲಿ ನಡೆದ ಮುಖ್ಯ ಪರೀಕ್ಷೆಗೆ ಹಾಜರಾಗಲು ಒಟ್ಟು 14,627 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದರು. ಈ ಪೈಕಿ 2,845 ಅಭ್ಯರ್ಥಿಗಳು ವ್ಯಕ್ತಿತ್ವ ಪರೀಕ್ಷೆ ಅಥವಾ ಸಂದರ್ಶನಕ್ಕೆ ಆಯ್ಕೆಯಾಗಿದ್ದರು. ಇವರಲ್ಲಿ 1,009 ಅಭ್ಯರ್ಥಿಗಳನ್ನು (725 ಪುರುಷರು ಮತ್ತು 284 ಮಹಿಳೆಯರು) ವಿವಿಧ ಸೇವೆಗಳಿಗೆ ನೇಮಕ ಮಾಡಲು ಆಯೋಗ ಶಿಫಾರಸು ಮಾಡಿದೆ. ಅಂತಿಮವಾಗಿ ಅರ್ಹತೆ ಪಡೆದ ಅಭ್ಯರ್ಥಿಗಳಲ್ಲಿ, ಅಗ್ರ ಸ್ಥಾನ ಪಡೆದ ಐವರಲ್ಲಿ ಮೂವರು ಮಹಿಳೆಯರು ಮತ್ತು ಇಬ್ಬರು ಪುರುಷರು ಇದ್ದಾರೆ.

Ramesh Babu

Journalist

Recent Posts

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

56 minutes ago

ರಾಹುಲ್ ಗಾಂಧಿ ಸೈದ್ಧಾಂತಿಕ ಬದ್ಧತೆಯಿರುವ ವ್ಯಕ್ತಿ….

ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…

3 hours ago

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

16 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

17 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

21 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

23 hours ago