2024ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆ ಫಲಿತಾಂಶ ಪ್ರಕಟ: ಪ್ರಥಮ ರ‍್ಯಾಂಕ್ ಪಡೆದ ಶಕ್ತಿ ದುಬೆ

2024ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆ ಫಲಿತಾಂಶವನ್ನು ಕೇಂದ್ರ ಲೋಕಸೇವಾ ಆಯೋಗ ಮಂಗಳವಾರ ಪ್ರಕಟಿಸಿದ್ದು, ಶಕ್ತಿ ದುಬೆ ಪ್ರಥಮ ರ‍್ಯಾಂಕ್
ಪಡೆದಿದ್ದಾರೆ.

ದುಬೆ ಅವರು ಅಲಹಾಬಾದ್ ವಿಶ್ವವಿದ್ಯಾನಿಲಯದಿಂದ ಬಯೋಕೆಮಿಸ್ಟ್ರಿಯಲ್ಲಿ ಪದವಿ (Bachelor of Science) ಪಡೆದಿದ್ದಾರೆ. ಅವರು ರಾಜ್ಯಶಾಸ್ತ್ರ ಮತ್ತು ಅಂತಾರಾಷ್ಟ್ರೀಯ ಸಂಬಂಧ ವಿಷಯವನ್ನು ಐಚ್ಛಿಕ ವಿಷಯವನ್ನಾಗಿ ತೆಗೆದುಕೊಂಡು ಪರೀಕ್ಷೆಗೆ ಅರ್ಹರಾಗಿದ್ದರು ಎಂದು ಆಯೋಗದ ಹೇಳಿಕೆ ತಿಳಿಸಿದೆ.

ಹರ್ಷಿತಾ ಗೋಯಲ್ ಅವರು 2ನೇ Rank ಪಡೆದುಕೊಂಡಿದ್ದಾರೆ. ಇವರು ಬರೋಡಾದ ಎಂಎಸ್ ವಿಶ್ವವಿದ್ಯಾನಿಲಯದಿಂದ ಬಿ.ಕಾಂ ಪದವಿ ಪಡೆದಿರುವ ಹರ್ಷಿತಾ ಗೋಯಲ್ ಕೂಡಾ ರಾಜಕೀಯ ವಿಜ್ಞಾನ ಮತ್ತು ಅಂತಾರಾಷ್ಟ್ರೀಯ ಸಂಬಂಧಗಳನ್ನು ಐಚ್ಛಿಕ ವಿಷಯವಾಗಿ ತೆಗೆದುಕೊಂಡು,

ವೆಲ್ಲೂರಿನ VITಯಲ್ಲಿ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ ಬ್ಯಾಚುಲರ್ ಆಫ್ ಟೆಕ್ನಾಲಜಿ (ಬಿಟೆಕ್) ಹೊಂದಿರುವ ಡೋಂಗ್ರೆ ಅರ್ಚಿತ್ ಪರಾಗ್, ತತ್ವಶಾಸ್ತ್ರವನ್ನು ಐಚ್ಛಿಕ ವಿಷಯವಾಗಿ ತೆಗೆದುಕೊಂಡು ಮೂರನೇ ಸ್ಥಾನದಲ್ಲಿದ್ದಾರೆ.

ಭಾರತೀಯ ಆಡಳಿತ ಸೇವೆ IAS,ಭಾರತೀಯ ಪೊಲೀಸ್ ಸೇವೆ (IPS) ಭಾರತೀಯ ವಿದೇಶಾಂಗ ಸೇವೆ (IFS)ಮತ್ತಿತರ ಹುದ್ದೆಗಳಿಗೆ ಆಯ್ಕೆ ಮಾಡಲು ಯುಪಿಎಸ್ ಸಿ ಪ್ರಿಲಿಮರಿ, ಮುಖ್ಯ ಮತ್ತು ಸಂದರ್ಶನ ಮೂರು ಹಂತದಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಕಳೆದ ವರ್ಷ ಜೂನ್ 16 ರಂದು ಪ್ರಿಲಿಮರಿ ಪರೀಕ್ಷೆ ನಡೆಸಲಾಯಿತು. ಈ ಪರೀಕ್ಷೆಗೆ ಒಟ್ಟು 9,92,599 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಈ ಪೈಕಿ 5,83,213 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಸೆಪ್ಟೆಂಬರ್ 2024 ರಲ್ಲಿ ನಡೆದ ಮುಖ್ಯ ಪರೀಕ್ಷೆಗೆ ಹಾಜರಾಗಲು ಒಟ್ಟು 14,627 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದರು. ಈ ಪೈಕಿ 2,845 ಅಭ್ಯರ್ಥಿಗಳು ವ್ಯಕ್ತಿತ್ವ ಪರೀಕ್ಷೆ ಅಥವಾ ಸಂದರ್ಶನಕ್ಕೆ ಆಯ್ಕೆಯಾಗಿದ್ದರು. ಇವರಲ್ಲಿ 1,009 ಅಭ್ಯರ್ಥಿಗಳನ್ನು (725 ಪುರುಷರು ಮತ್ತು 284 ಮಹಿಳೆಯರು) ವಿವಿಧ ಸೇವೆಗಳಿಗೆ ನೇಮಕ ಮಾಡಲು ಆಯೋಗ ಶಿಫಾರಸು ಮಾಡಿದೆ. ಅಂತಿಮವಾಗಿ ಅರ್ಹತೆ ಪಡೆದ ಅಭ್ಯರ್ಥಿಗಳಲ್ಲಿ, ಅಗ್ರ ಸ್ಥಾನ ಪಡೆದ ಐವರಲ್ಲಿ ಮೂವರು ಮಹಿಳೆಯರು ಮತ್ತು ಇಬ್ಬರು ಪುರುಷರು ಇದ್ದಾರೆ.

Ramesh Babu

Journalist

Recent Posts

NWKRTC ಮುಖ್ಯ ಯಾಂತ್ರಿಕ ಮೆಕ್ಯಾನಿಕಲ್ ಇಂಜಿನಿಯರ್ ಮನೆಯಲ್ಲಿ ಲಕ್ಷಾಂತರ ನಗದು-ಚಿನ್ನ ಪತ್ತೆ‌..!

ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ…

42 minutes ago

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: MLC ಚುನಾವಣೆ, ಎಸ್‌ಐಆರ್ ಕುರಿತ ಚರ್ಚೆ

ಬಿಡದಿಯ ಖಾಸಗಿ ರೆಸಾರ್ಟ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು, ಮುಂಬರುವ ವಿಧಾನ…

51 minutes ago

ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಲಾರಿ ಚಾಲಕನ ಅಜಾಗರೂಕತೆಯಿಂದ ಅನಾಹುತ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…

6 hours ago

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

15 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

1 day ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

1 day ago