2024ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆ ಫಲಿತಾಂಶ ಪ್ರಕಟ: ಪ್ರಥಮ ರ‍್ಯಾಂಕ್ ಪಡೆದ ಶಕ್ತಿ ದುಬೆ

2024ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆ ಫಲಿತಾಂಶವನ್ನು ಕೇಂದ್ರ ಲೋಕಸೇವಾ ಆಯೋಗ ಮಂಗಳವಾರ ಪ್ರಕಟಿಸಿದ್ದು, ಶಕ್ತಿ ದುಬೆ ಪ್ರಥಮ ರ‍್ಯಾಂಕ್
ಪಡೆದಿದ್ದಾರೆ.

ದುಬೆ ಅವರು ಅಲಹಾಬಾದ್ ವಿಶ್ವವಿದ್ಯಾನಿಲಯದಿಂದ ಬಯೋಕೆಮಿಸ್ಟ್ರಿಯಲ್ಲಿ ಪದವಿ (Bachelor of Science) ಪಡೆದಿದ್ದಾರೆ. ಅವರು ರಾಜ್ಯಶಾಸ್ತ್ರ ಮತ್ತು ಅಂತಾರಾಷ್ಟ್ರೀಯ ಸಂಬಂಧ ವಿಷಯವನ್ನು ಐಚ್ಛಿಕ ವಿಷಯವನ್ನಾಗಿ ತೆಗೆದುಕೊಂಡು ಪರೀಕ್ಷೆಗೆ ಅರ್ಹರಾಗಿದ್ದರು ಎಂದು ಆಯೋಗದ ಹೇಳಿಕೆ ತಿಳಿಸಿದೆ.

ಹರ್ಷಿತಾ ಗೋಯಲ್ ಅವರು 2ನೇ Rank ಪಡೆದುಕೊಂಡಿದ್ದಾರೆ. ಇವರು ಬರೋಡಾದ ಎಂಎಸ್ ವಿಶ್ವವಿದ್ಯಾನಿಲಯದಿಂದ ಬಿ.ಕಾಂ ಪದವಿ ಪಡೆದಿರುವ ಹರ್ಷಿತಾ ಗೋಯಲ್ ಕೂಡಾ ರಾಜಕೀಯ ವಿಜ್ಞಾನ ಮತ್ತು ಅಂತಾರಾಷ್ಟ್ರೀಯ ಸಂಬಂಧಗಳನ್ನು ಐಚ್ಛಿಕ ವಿಷಯವಾಗಿ ತೆಗೆದುಕೊಂಡು,

ವೆಲ್ಲೂರಿನ VITಯಲ್ಲಿ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ ಬ್ಯಾಚುಲರ್ ಆಫ್ ಟೆಕ್ನಾಲಜಿ (ಬಿಟೆಕ್) ಹೊಂದಿರುವ ಡೋಂಗ್ರೆ ಅರ್ಚಿತ್ ಪರಾಗ್, ತತ್ವಶಾಸ್ತ್ರವನ್ನು ಐಚ್ಛಿಕ ವಿಷಯವಾಗಿ ತೆಗೆದುಕೊಂಡು ಮೂರನೇ ಸ್ಥಾನದಲ್ಲಿದ್ದಾರೆ.

ಭಾರತೀಯ ಆಡಳಿತ ಸೇವೆ IAS,ಭಾರತೀಯ ಪೊಲೀಸ್ ಸೇವೆ (IPS) ಭಾರತೀಯ ವಿದೇಶಾಂಗ ಸೇವೆ (IFS)ಮತ್ತಿತರ ಹುದ್ದೆಗಳಿಗೆ ಆಯ್ಕೆ ಮಾಡಲು ಯುಪಿಎಸ್ ಸಿ ಪ್ರಿಲಿಮರಿ, ಮುಖ್ಯ ಮತ್ತು ಸಂದರ್ಶನ ಮೂರು ಹಂತದಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಕಳೆದ ವರ್ಷ ಜೂನ್ 16 ರಂದು ಪ್ರಿಲಿಮರಿ ಪರೀಕ್ಷೆ ನಡೆಸಲಾಯಿತು. ಈ ಪರೀಕ್ಷೆಗೆ ಒಟ್ಟು 9,92,599 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಈ ಪೈಕಿ 5,83,213 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಸೆಪ್ಟೆಂಬರ್ 2024 ರಲ್ಲಿ ನಡೆದ ಮುಖ್ಯ ಪರೀಕ್ಷೆಗೆ ಹಾಜರಾಗಲು ಒಟ್ಟು 14,627 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದರು. ಈ ಪೈಕಿ 2,845 ಅಭ್ಯರ್ಥಿಗಳು ವ್ಯಕ್ತಿತ್ವ ಪರೀಕ್ಷೆ ಅಥವಾ ಸಂದರ್ಶನಕ್ಕೆ ಆಯ್ಕೆಯಾಗಿದ್ದರು. ಇವರಲ್ಲಿ 1,009 ಅಭ್ಯರ್ಥಿಗಳನ್ನು (725 ಪುರುಷರು ಮತ್ತು 284 ಮಹಿಳೆಯರು) ವಿವಿಧ ಸೇವೆಗಳಿಗೆ ನೇಮಕ ಮಾಡಲು ಆಯೋಗ ಶಿಫಾರಸು ಮಾಡಿದೆ. ಅಂತಿಮವಾಗಿ ಅರ್ಹತೆ ಪಡೆದ ಅಭ್ಯರ್ಥಿಗಳಲ್ಲಿ, ಅಗ್ರ ಸ್ಥಾನ ಪಡೆದ ಐವರಲ್ಲಿ ಮೂವರು ಮಹಿಳೆಯರು ಮತ್ತು ಇಬ್ಬರು ಪುರುಷರು ಇದ್ದಾರೆ.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

7 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

11 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

18 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

19 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago