2024ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆ ಫಲಿತಾಂಶ ಪ್ರಕಟ: ಪ್ರಥಮ ರ‍್ಯಾಂಕ್ ಪಡೆದ ಶಕ್ತಿ ದುಬೆ

2024ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆ ಫಲಿತಾಂಶವನ್ನು ಕೇಂದ್ರ ಲೋಕಸೇವಾ ಆಯೋಗ ಮಂಗಳವಾರ ಪ್ರಕಟಿಸಿದ್ದು, ಶಕ್ತಿ ದುಬೆ ಪ್ರಥಮ ರ‍್ಯಾಂಕ್
ಪಡೆದಿದ್ದಾರೆ.

ದುಬೆ ಅವರು ಅಲಹಾಬಾದ್ ವಿಶ್ವವಿದ್ಯಾನಿಲಯದಿಂದ ಬಯೋಕೆಮಿಸ್ಟ್ರಿಯಲ್ಲಿ ಪದವಿ (Bachelor of Science) ಪಡೆದಿದ್ದಾರೆ. ಅವರು ರಾಜ್ಯಶಾಸ್ತ್ರ ಮತ್ತು ಅಂತಾರಾಷ್ಟ್ರೀಯ ಸಂಬಂಧ ವಿಷಯವನ್ನು ಐಚ್ಛಿಕ ವಿಷಯವನ್ನಾಗಿ ತೆಗೆದುಕೊಂಡು ಪರೀಕ್ಷೆಗೆ ಅರ್ಹರಾಗಿದ್ದರು ಎಂದು ಆಯೋಗದ ಹೇಳಿಕೆ ತಿಳಿಸಿದೆ.

ಹರ್ಷಿತಾ ಗೋಯಲ್ ಅವರು 2ನೇ Rank ಪಡೆದುಕೊಂಡಿದ್ದಾರೆ. ಇವರು ಬರೋಡಾದ ಎಂಎಸ್ ವಿಶ್ವವಿದ್ಯಾನಿಲಯದಿಂದ ಬಿ.ಕಾಂ ಪದವಿ ಪಡೆದಿರುವ ಹರ್ಷಿತಾ ಗೋಯಲ್ ಕೂಡಾ ರಾಜಕೀಯ ವಿಜ್ಞಾನ ಮತ್ತು ಅಂತಾರಾಷ್ಟ್ರೀಯ ಸಂಬಂಧಗಳನ್ನು ಐಚ್ಛಿಕ ವಿಷಯವಾಗಿ ತೆಗೆದುಕೊಂಡು,

ವೆಲ್ಲೂರಿನ VITಯಲ್ಲಿ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ ಬ್ಯಾಚುಲರ್ ಆಫ್ ಟೆಕ್ನಾಲಜಿ (ಬಿಟೆಕ್) ಹೊಂದಿರುವ ಡೋಂಗ್ರೆ ಅರ್ಚಿತ್ ಪರಾಗ್, ತತ್ವಶಾಸ್ತ್ರವನ್ನು ಐಚ್ಛಿಕ ವಿಷಯವಾಗಿ ತೆಗೆದುಕೊಂಡು ಮೂರನೇ ಸ್ಥಾನದಲ್ಲಿದ್ದಾರೆ.

ಭಾರತೀಯ ಆಡಳಿತ ಸೇವೆ IAS,ಭಾರತೀಯ ಪೊಲೀಸ್ ಸೇವೆ (IPS) ಭಾರತೀಯ ವಿದೇಶಾಂಗ ಸೇವೆ (IFS)ಮತ್ತಿತರ ಹುದ್ದೆಗಳಿಗೆ ಆಯ್ಕೆ ಮಾಡಲು ಯುಪಿಎಸ್ ಸಿ ಪ್ರಿಲಿಮರಿ, ಮುಖ್ಯ ಮತ್ತು ಸಂದರ್ಶನ ಮೂರು ಹಂತದಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಕಳೆದ ವರ್ಷ ಜೂನ್ 16 ರಂದು ಪ್ರಿಲಿಮರಿ ಪರೀಕ್ಷೆ ನಡೆಸಲಾಯಿತು. ಈ ಪರೀಕ್ಷೆಗೆ ಒಟ್ಟು 9,92,599 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಈ ಪೈಕಿ 5,83,213 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಸೆಪ್ಟೆಂಬರ್ 2024 ರಲ್ಲಿ ನಡೆದ ಮುಖ್ಯ ಪರೀಕ್ಷೆಗೆ ಹಾಜರಾಗಲು ಒಟ್ಟು 14,627 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದರು. ಈ ಪೈಕಿ 2,845 ಅಭ್ಯರ್ಥಿಗಳು ವ್ಯಕ್ತಿತ್ವ ಪರೀಕ್ಷೆ ಅಥವಾ ಸಂದರ್ಶನಕ್ಕೆ ಆಯ್ಕೆಯಾಗಿದ್ದರು. ಇವರಲ್ಲಿ 1,009 ಅಭ್ಯರ್ಥಿಗಳನ್ನು (725 ಪುರುಷರು ಮತ್ತು 284 ಮಹಿಳೆಯರು) ವಿವಿಧ ಸೇವೆಗಳಿಗೆ ನೇಮಕ ಮಾಡಲು ಆಯೋಗ ಶಿಫಾರಸು ಮಾಡಿದೆ. ಅಂತಿಮವಾಗಿ ಅರ್ಹತೆ ಪಡೆದ ಅಭ್ಯರ್ಥಿಗಳಲ್ಲಿ, ಅಗ್ರ ಸ್ಥಾನ ಪಡೆದ ಐವರಲ್ಲಿ ಮೂವರು ಮಹಿಳೆಯರು ಮತ್ತು ಇಬ್ಬರು ಪುರುಷರು ಇದ್ದಾರೆ.

Ramesh Babu

Journalist

Recent Posts

ರಾಜ್ಯ ರಾಜಕೀಯದಲ್ಲಿ ಮತ್ತೆ ತೀವ್ರಗೊಂಡ ನಾಯಕತ್ವ ಬದಲಾವಣೆಯ ಚರ್ಚೆ: ‘ಮುಂದಿನ ಸಿಎಂ ಡಿ.ಕೆ. ಶಿವಕುಮಾರ್’ ಎಂಬ ಪೋಸ್ಟರ್‌, ಬ್ಯಾನರ್‌ ಮತ್ತು ಸಾಮಾಜಿಕ ಜಾಲತಾಣ ಪೋಸ್ಟ್‌ಗಳು ವೈರಲ್

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮತ್ತೆ ನಾಯಕತ್ವ ಬದಲಾವಣೆಯ ಚರ್ಚೆ ತೀವ್ರಗೊಂಡಿದ್ದು, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ…

34 minutes ago

ಬಗರ್ ಹುಕ್ಕುಂ ಸಮಿತಿ ಸಭೆ ವಿಳಂಬ: ಹಕ್ಕುಪತ್ರಕ್ಕಾಗಿ ರೈತರ ಅಲೆದಾಟ: ಅರ್ಜಿ ಸಲ್ಲಿಸಿ ವರ್ಷಗಳಾದರೂ ಸಾಗುವಳಿ ಚೀಟಿ ಇಲ್ಲ: ಆತಂಕದಲ್ಲಿ ರೈತ

ಗ್ರಾಮೀಣ ಭಾಗದಲ್ಲಿ ಜೀವನ ನಡೆಸಲು ಸರ್ಕಾರಿ ಜಮೀನುಗಳಲ್ಲಿ ಉಳುಮೆ ಮಾಡಿಕೊಂಡು ಜೀವನೋಪಾಯ ರೂಪಿಸಿಕೊಂಡಿರುವ ರೈತಾಪಿ ವರ್ಗದ ಜನರಿಗಾಗಿ ಸರ್ಕಾರ ಸಾಗುವಳಿ…

7 hours ago

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

22 hours ago

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

1 day ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

1 day ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

2 days ago