2024ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆ ಫಲಿತಾಂಶ ಪ್ರಕಟ: ಪ್ರಥಮ ರ‍್ಯಾಂಕ್ ಪಡೆದ ಶಕ್ತಿ ದುಬೆ

2024ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆ ಫಲಿತಾಂಶವನ್ನು ಕೇಂದ್ರ ಲೋಕಸೇವಾ ಆಯೋಗ ಮಂಗಳವಾರ ಪ್ರಕಟಿಸಿದ್ದು, ಶಕ್ತಿ ದುಬೆ ಪ್ರಥಮ ರ‍್ಯಾಂಕ್
ಪಡೆದಿದ್ದಾರೆ.

ದುಬೆ ಅವರು ಅಲಹಾಬಾದ್ ವಿಶ್ವವಿದ್ಯಾನಿಲಯದಿಂದ ಬಯೋಕೆಮಿಸ್ಟ್ರಿಯಲ್ಲಿ ಪದವಿ (Bachelor of Science) ಪಡೆದಿದ್ದಾರೆ. ಅವರು ರಾಜ್ಯಶಾಸ್ತ್ರ ಮತ್ತು ಅಂತಾರಾಷ್ಟ್ರೀಯ ಸಂಬಂಧ ವಿಷಯವನ್ನು ಐಚ್ಛಿಕ ವಿಷಯವನ್ನಾಗಿ ತೆಗೆದುಕೊಂಡು ಪರೀಕ್ಷೆಗೆ ಅರ್ಹರಾಗಿದ್ದರು ಎಂದು ಆಯೋಗದ ಹೇಳಿಕೆ ತಿಳಿಸಿದೆ.

ಹರ್ಷಿತಾ ಗೋಯಲ್ ಅವರು 2ನೇ Rank ಪಡೆದುಕೊಂಡಿದ್ದಾರೆ. ಇವರು ಬರೋಡಾದ ಎಂಎಸ್ ವಿಶ್ವವಿದ್ಯಾನಿಲಯದಿಂದ ಬಿ.ಕಾಂ ಪದವಿ ಪಡೆದಿರುವ ಹರ್ಷಿತಾ ಗೋಯಲ್ ಕೂಡಾ ರಾಜಕೀಯ ವಿಜ್ಞಾನ ಮತ್ತು ಅಂತಾರಾಷ್ಟ್ರೀಯ ಸಂಬಂಧಗಳನ್ನು ಐಚ್ಛಿಕ ವಿಷಯವಾಗಿ ತೆಗೆದುಕೊಂಡು,

ವೆಲ್ಲೂರಿನ VITಯಲ್ಲಿ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ ಬ್ಯಾಚುಲರ್ ಆಫ್ ಟೆಕ್ನಾಲಜಿ (ಬಿಟೆಕ್) ಹೊಂದಿರುವ ಡೋಂಗ್ರೆ ಅರ್ಚಿತ್ ಪರಾಗ್, ತತ್ವಶಾಸ್ತ್ರವನ್ನು ಐಚ್ಛಿಕ ವಿಷಯವಾಗಿ ತೆಗೆದುಕೊಂಡು ಮೂರನೇ ಸ್ಥಾನದಲ್ಲಿದ್ದಾರೆ.

ಭಾರತೀಯ ಆಡಳಿತ ಸೇವೆ IAS,ಭಾರತೀಯ ಪೊಲೀಸ್ ಸೇವೆ (IPS) ಭಾರತೀಯ ವಿದೇಶಾಂಗ ಸೇವೆ (IFS)ಮತ್ತಿತರ ಹುದ್ದೆಗಳಿಗೆ ಆಯ್ಕೆ ಮಾಡಲು ಯುಪಿಎಸ್ ಸಿ ಪ್ರಿಲಿಮರಿ, ಮುಖ್ಯ ಮತ್ತು ಸಂದರ್ಶನ ಮೂರು ಹಂತದಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಕಳೆದ ವರ್ಷ ಜೂನ್ 16 ರಂದು ಪ್ರಿಲಿಮರಿ ಪರೀಕ್ಷೆ ನಡೆಸಲಾಯಿತು. ಈ ಪರೀಕ್ಷೆಗೆ ಒಟ್ಟು 9,92,599 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಈ ಪೈಕಿ 5,83,213 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಸೆಪ್ಟೆಂಬರ್ 2024 ರಲ್ಲಿ ನಡೆದ ಮುಖ್ಯ ಪರೀಕ್ಷೆಗೆ ಹಾಜರಾಗಲು ಒಟ್ಟು 14,627 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದರು. ಈ ಪೈಕಿ 2,845 ಅಭ್ಯರ್ಥಿಗಳು ವ್ಯಕ್ತಿತ್ವ ಪರೀಕ್ಷೆ ಅಥವಾ ಸಂದರ್ಶನಕ್ಕೆ ಆಯ್ಕೆಯಾಗಿದ್ದರು. ಇವರಲ್ಲಿ 1,009 ಅಭ್ಯರ್ಥಿಗಳನ್ನು (725 ಪುರುಷರು ಮತ್ತು 284 ಮಹಿಳೆಯರು) ವಿವಿಧ ಸೇವೆಗಳಿಗೆ ನೇಮಕ ಮಾಡಲು ಆಯೋಗ ಶಿಫಾರಸು ಮಾಡಿದೆ. ಅಂತಿಮವಾಗಿ ಅರ್ಹತೆ ಪಡೆದ ಅಭ್ಯರ್ಥಿಗಳಲ್ಲಿ, ಅಗ್ರ ಸ್ಥಾನ ಪಡೆದ ಐವರಲ್ಲಿ ಮೂವರು ಮಹಿಳೆಯರು ಮತ್ತು ಇಬ್ಬರು ಪುರುಷರು ಇದ್ದಾರೆ.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

6 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

6 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

9 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

10 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

14 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

18 hours ago