2024ರ ಟಿ20 ವಿಶ್ವಕಪ್ ಗೆದ್ದ ಭಾರತ: ಮುಂಬೈನಲ್ಲಿ ಟೀಮ್ ಇಂಡಿಯಾ ಭರ್ಜರಿ ವಿಜಯೋತ್ಸವ ಮೆರವಣಿಗೆ: ನೆಚ್ಚಿನ ಆಟಗಾರರನ್ನು ಕಣ್ತುಂಬಿಕೊಳ್ಳಲು ಕಿಕ್ಕಿರಿದು ನೆರೆದಿರುವ ಕ್ರಿಕೆಟ್ ಅಭಿಮಾನಿಗಳು

ಬಾರ್ಬಡೋಸ್‌ನಲ್ಲಿ ನಡೆದ 2024ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾದ ಆಟಗಾರರು ಇಂದು ಸ್ವದೇಶಕ್ಕೆ ಆಗಮಿಸಿದೆ.

ತವರಿಗೆ ಆಗಮಿಸಿದ ಕೂಡಲೇ ನೇರವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಪ್ರಧಾನಿ ಮೋದಿ ಅವರನ್ನು ಭೇಟಿ ಆದ ನಂತರ, ಮುಂಬೈನಲ್ಲಿ ಆಯೋಜನೆಯಾಗಿರುವ ವಿಜಯೋತ್ಸವ ಪರೇಡ್ ನಲ್ಲಿ ಭಾಗವಹಿಸಿದ್ದಾರೆ.

ವಿಜಯೋತ್ಸವ ಪರೇಡ್ ನಲ್ಲಿ ತಮ್ಮ ನೆಚ್ಚಿನ ಆಟಗಾರರನ್ನು ಸ್ವಾಗತಿಸಿ, ಆಟಗಾರರನ್ನು ಕಣ್ತುಂಬಿಕೊಳ್ಳಲು ವಾಂಖೆಡೆ ಕ್ರೀಡಾಂಗಣದ ಬಳಿ ಜನಸಾಗರವೇ ಸೇರಿದೆ.

ತೆರೆದ ಬಸ್‌ನಲ್ಲಿ ಟೀಂ ಇಂಡಿಯಾ ವಿಜಯೋತ್ಸವ ಮೆರವಣಿಗೆ ನಡೆದಿದೆ, ನಾರಿಮನ್ ಪಾಯಿಂಟ್‌ನಿಂದ ಪ್ರಾರಂಭವಾಗಿ ವಿಜಯೋತ್ಸವ ಮೆರವಣಿಗೆ ಮರೀನ್ ಡ್ರೈವ್ ಮೂಲಕ ವಾಂಖೆಡೆ ಕ್ರೀಡಾಂಗಣಕ್ಕೆ ತಲುಪಿದೆ.

ತಮ್ಮ ನೆಚ್ಚಿನ ಆಟಗಾರರನ್ನು ನೋಡಲು ಮುಂಬೈನ ಗಲ್ಲಿಗಲ್ಲಿಗಳಲ್ಲಿ ಜನ ಸೇರಿದ್ದು, ವಾಂಖೆಡೆ ಕ್ರೀಡಾಂಗಣ ಅಕ್ಷರಶಃ ಅಭಿಮಾನಿಗಳಿಂದ ತುಂಬಿ ಹೋಗಿದೆ.

ವಿಶ್ವಕಪ್ ವಿಜೇತ ಭಾರತ ತಂಡಕ್ಕೆ ಬಿಸಿಸಿಐ 125 ಕೋಟಿ ರೂ ಬಹುಮಾನ ಘೋಷಿಸಿದೆ.

Leave a Reply

Your email address will not be published. Required fields are marked *