Categories: ರಾಜ್ಯ

2024ರ ಫೆ.28ರೊಳಗೆ ವಾಣಿಜ್ಯ ಮಳಿಗೆಗಳು ಹೆಸರನ್ನು ಪ್ರದರ್ಶಿಸುವ ಫಲಕಗಳ ಮೇಲಿನ ಅರ್ಧ ಭಾಗವು ಕನ್ನಡದಲ್ಲಿ ಅನುಷ್ಠಾನಗೊಳಿಸಲು ಗಡುವು

ಸುಗ್ರೀವಾಜ್ಞೆ ಹೊರಡಿಸಿ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್‌ 17 (6)ಕ್ಕೆ ತಿದ್ದುಪಡಿ ತಂದು 2024ರ ಫೆಬ್ರವರಿ 28ರೊಳಗೆ ವಾಣಿಜ್ಯ ಮಳಿಗೆಗಳು ಅನುಷ್ಠಾನಗೊಳಿಸಲು ಗಡುವು ನೀಡಲಾಗುವುದು. ಕಾಯ್ದೆ ಜಾರಿ ಮಾಡುತ್ತೇವೆ. ಅಲ್ಲಿವರೆಗೆ ಎಲ್ಲರೂ ಶಾಂತಿಯುತವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು ಎಂದು ಮನವಿ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್‌ 17 (6) ರ ಪ್ರಕಾರ ಸರ್ಕಾರದ ಅಥವಾ ಸ್ಥಳೀಯ ಪ್ರಾಧಿಕಾರದ ಅನುಮೋದನೆಯೊಂದಿಗೆ ನಡೆಸುತ್ತಿರುವ ವಾಣಿಜ್ಯ ಕೈಗಾರಿಕೆ, ವ್ಯಾಪಾರ ಸಂಸ್ಥೆ, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್‌ ಮುಂತಾದವುಗಳ ಹೆಸರನ್ನು ಪ್ರದರ್ಶಿಸುವ ಫಲಕಗಳ ಮೇಲಿನ ಅರ್ಧ ಭಾಗವು ಕನ್ನಡದಲ್ಲಿ ಇರತಕ್ಕದ್ದು ಎಂದು ತಿಳಿಸಲಾಗಿದೆ ಎಂದರು.

ಇದಕ್ಕೂ ಮೊದಲು 2018ರಲ್ಲಿ ಹೊರಡಿಸಿದ ಸುತ್ತೋಲೆಯಲ್ಲಿ ನಾಮಫಲಕದಲ್ಲಿ ಶೇ. 60 ಕನ್ನಡ ಭಾಷೆ ಹಾಗೂ ಶೇ. 40 ರಷ್ಟು ಇತರ ಭಾಷೆಯಲ್ಲಿರಬಹುದು ಎಂದು ತಿಳಿಸಲಾಗಿದೆ. ಇದರಂತೆಯೇ ಸುಗ್ರೀವಾಜ್ಞೆ ಹೊರಡಿಸಿ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್‌ 17 (6)ಕ್ಕೆ ತಿದ್ದುಪಡಿ ತಂದು 2024ರ ಫೆಬ್ರವರಿ 28 ರೊಳಗೆ ವಾಣಿಜ್ಯ ಮಳಿಗೆಗಳು ಅನುಷ್ಠಾನಗೊಳಿಸಲು ಗಡುವು ನೀಡಲಾಗುವುದು ಎಂದು‌ ತಿಳಿಸಿದ್ದಾರೆ.

ಈ ಕಾಯ್ದೆಯ ನಿಯಮ 17(8) ರಲ್ಲಿ ರಾಜ್ಯದಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾದ ಜಾಹೀರಾತು ಮತ್ತು ಸೂಚನೆಗಳನ್ನು ಪ್ರದರ್ಶಿಸುವ ಎಲ್ಲ ಫಲಕಗಳಲ್ಲಿ ವಿಷಯಗಳ ನಿಗದಿತ ಶೇಕಡಾವಾರು ಪ್ರಮಾಣವು ಕನ್ನಡ ಭಾಷೆಯಲ್ಲಿ ಇರತಕ್ಕದ್ದು ಎಂದಿದೆ. ಜಾಹೀರಾತುಗಳ ವರ್ಗೀಕರಣ ಮತ್ತು ಕನ್ನಡದಲ್ಲಿ ಪ್ರದರ್ಶಿಸಬೇಕಾದ ಜಾಹೀರಾತು ವಿಷಯಗಳ ಶೇಕಡಾವಾರು ಪ್ರಮಾಣವು ರಾಜ್ಯ ಸರ್ಕಾರದಿಂದ ನಿಯಮಿಸಲಾದಂತೆ ಇರತಕ್ಕದ್ದು ಎಂದು ತಿಳಿಸಲಾಗಿದೆ. ಇದನ್ನು ಸಹ ಅನುಷ್ಠಾನಗೊಳಿಸಲಾಗುವುದು. ಈ ಕಾಯ್ದೆಯ ಅಧಿಸೂಚನೆ ಹೊರಡಿಸಲು ಹಾಗೂ ನಿಯಮಗಳನ್ನು ರೂಪಿಸಲು ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಶಾಂತಿಯುತವಾದ ಪ್ರತಿಭಟನೆ ಮಾಡಲು ಸರ್ಕಾರದ ವಿರೋಧ ಇಲ್ಲ. ನಮಗೆ ಪ್ರಜಾಪ್ರಭುತ್ವದಲ್ಲಿ, ಸಂವಿಧಾನದಲ್ಲಿ ನಂಬಿಕೆ ಇದೆ. ಆದರೆ ಕಾನೂನಿಗೆ ವಿರುದ್ಧವಾಗಿ ಯಾರಾದರೂ ನಡೆದುಕೊಂಡರೆ ಅದನ್ನು ಸರ್ಕಾರ ಸಹಿಸುವುದಿಲ್ಲ ಎಂಬುದನ್ನು ಸ್ಪಷ್ಟವಾಗಿ ಹೇಳ ಬಯಸುತ್ತೇನೆ. 3-3-2022ರಲ್ಲಿ ಕರ್ನಾಟಕ ಉಚ್ಛನ್ಯಾಯಾಲಯವು ಪ್ರತಿಭಟನೆಗಳನ್ನು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಮಾತ್ರ ನಡೆಸಬೇಕು, ರಾಜ್ಯ ಸರ್ಕಾರವು ಇದನ್ನು ಖಾತರಿಪಡಿಸಬೇಕು ಎಂದು ಸ್ಪಷ್ಟವಾದ ಆದೇಶ ಹೊರಡಿಸಿದೆ ಎಂದಿದ್ದಾರೆ.

ಸಂಘಟನೆಯಿರಲಿ, ವ್ಯಕ್ತಿಗಳಿರಲಿ, ಖಾಸಗಿ ಸಂಸ್ಥೆಗಳಿರಲಿ ಯಾರೇ ಆಗಲಿ ಸಂವಿಧಾನಕ್ಕೆ ಅನುಗುಣವಾಗಿ ನಡೆದುಕೊಳ್ಳಬೇಕು. ಯಾರೂ ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದರು.

Ramesh Babu

Journalist

Recent Posts

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

8 hours ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

10 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

13 hours ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

1 day ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

1 day ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

1 day ago