2024ರ ಹೊಸವರ್ಷದ ಸಂಭ್ರಮಾಚರಣೆ: ಮಾದಕ ವಸ್ತು ಹೆಚ್ಚಿನ ಬೆಲೆಗೆ ಮಾರಾಟ ಆರೋಪ:1.54 ಕೆಜಿ ಗಾಂಜಾ ಜಪ್ತಿ

2024ರ ಹೊಸವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ, ಮಾದಕ ವಸ್ತುಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿದ್ದ ಡ್ರಗ್ ಪೆಡ್ಲರ್‌ನ್ನು ಬೆಂಗಳೂರು ನಗರ ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಯು ಪತ್ತೆ ಹಚ್ಚಿ ಬಂಧಿಸಿದ್ದಾರೆ, 8,40,000 ಮೌಲ್ಯದ ನಿಷೇಧಿತ ಮಾದಕ ವಸ್ತುಗಳಾದ ಎಂ.ಡಿ.ಎಂ.ಎ 25g, 30 ಎಕ್ಸ್‌ಟಿಸಿ ಮಾತ್ರೆಗಳು ಹಾಗೂ ಸ್ಥಳೀಯ ಡ್ರಗ್‌ ಡೀಲರ್‌ ಗಳಿಂದ ಪಡೆದುಕೊಂಡಿದ್ದ ಎನ್ನಲಾಗಿದೆ. 1.54 ಕೆಜಿ ಗಾಂಜಾವನ್ನು  ವಶಕ್ಕೆ ಪಡೆಯುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ ಎಂದು ನಗರ ಪೊಲೀಸ್‌ ಆಯುಕ್ತರಾದ ಬಿ‌.ದಯಾನಂದ್ ಅವರು ತಿಳಿಸಿದ್ದಾರೆ.

ಲೋಕಾಯುಕ್ತ ಅಧಿಕಾರಿ ಎಂದು ಹೇಳಿಕೊಂಡು ಸರ್ಕಾರಿ ಅಧಿಕಾರಿಗಳಿಂದ ಹಣ ವಸೂಲಿ ಮಾಡಿ ವಂಚಿಸಲು ಯತ್ನಿಸಿರುವ ಆರೋಪದ ಮೇಲೆ ಓರ್ವನನ್ನು ಬೆಂಗಳೂರು ನಗರ ಅಪರಾಧ ನಿಯಂತ್ರಣ ದಳ ತಂಡದ ಪೊಲೀಸರು  ಬಂಧಿಸಿದ್ದಾರೆ. ಆರೋಪಿಯು, ಮೂಲತಃ ಆಂಧ್ರಪ್ರದೇಶದವನಾಗಿದ್ದು, ಸರ್ಕಾರಿ ಅಧಿಕಾರಿಗಳನ್ನು ಗುರಿಯಾಗಿಟ್ಟುಕೊಂಡು ದಾಖಲಾಗಿರುವ ಪ್ರಕರಣಗಳನ್ನು ಮುಚ್ಚಲು ಹಣ ನೀಡಬೇಕಾಗುತ್ತದೆ ಎಂದು ಬೇಡಿಕೆ ಇಟ್ಟು ಹಣ ಪಾವತಿಸುವಂತೆ ಅಧಿಕಾರಿಗಳನ್ನು ಒತ್ತಾಯಿಸುತ್ತಿದ್ದನು.

ಈತನು ಈ ಹಿಂದೆ ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕದಾದ್ಯಂತ  ಸಹ ಸರ್ಕಾರಿ ನೌಕರರಿಗೆ 35ಕ್ಕೂ ಹೆಚ್ಚು ಇದೇ ರೀತಿ ಕರೆ ಮಾಡಿ, ಬೆದರಿಸಿ ಹಣ ವಸೂಲಿ ಮಾಡಿರುವುದು ತನಿಖೆ ವೇಳೆ ತಿಳಿದು ಬಂದಿರುತ್ತದೆ. ಇದರ ಹಿನ್ನೆಲೆಯಲ್ಲಿ, ಈ ರೀತಿಯ ಹಗರಣಕ್ಕೆ ಬಲಿಯಾಗಿರಬಹುದಾದ ವ್ಯಕ್ತಿಗಳು ಮುಂದೆ ಬಂದು  ದೂರುಗಳೊಂದಿಗೆ ಪ್ರಕರಣವನ್ನು ತಕ್ಷಣವೇ   ದಾಖಲಿಸುವಂತೆ ಬೆಂಗಳೂರು ನಗರ ಪೊಲೀಸರು  ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಸಾರ್ವಜನಿಕರನ್ನು ಮಾರಕಾಸ್ತ್ರಗಳಿಂದ ಬೆದರಿಸಿ ಅವರಿಂದ ಹಣ ಮತ್ತು ಬೆಲೆ ಬಾಳುವ ವಸ್ತುಗಳನ್ನು ದರೋಡೆ ಮಾಡಲು ಪ್ರಯತ್ನಿಸುತ್ತಿದ್ದ 06 ಜನರನ್ನು ಹಾಗೂ ಅರೋಪಿಗಳಿಂದ 06 ಮಾರಕಾಸ್ತ್ರಗಳು ಮತ್ತು ಕೃತ್ಯಕ್ಕೆ ಉಪಯೋಗಿಸಿದ 03 ಬೈಕ್‌ಗಳನ್ನು ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿರುತ್ತಾರೆ.

ಆರೋಪಿತರ ಪೈಕಿ ಒಬ್ಬ ಆರೋಪಿಯ ವಿರುದ್ಧ 2018ರಲ್ಲಿ ಕೆ.ಜಿ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಡಕಾಯತಿ ಪ್ರಕರಣ ದಾಖಲಾಗಿರುತ್ತದೆ. ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡಲು ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

Ramesh Babu

Journalist

Recent Posts

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

  ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…

4 hours ago

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

6 hours ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

6 hours ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

7 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

9 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

13 hours ago