2024ರ ಹೊಸವರ್ಷದ ಸಂಭ್ರಮಾಚರಣೆ: ಮಾದಕ ವಸ್ತು ಹೆಚ್ಚಿನ ಬೆಲೆಗೆ ಮಾರಾಟ ಆರೋಪ:1.54 ಕೆಜಿ ಗಾಂಜಾ ಜಪ್ತಿ

2024ರ ಹೊಸವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ, ಮಾದಕ ವಸ್ತುಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿದ್ದ ಡ್ರಗ್ ಪೆಡ್ಲರ್‌ನ್ನು ಬೆಂಗಳೂರು ನಗರ ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಯು ಪತ್ತೆ ಹಚ್ಚಿ ಬಂಧಿಸಿದ್ದಾರೆ, 8,40,000 ಮೌಲ್ಯದ ನಿಷೇಧಿತ ಮಾದಕ ವಸ್ತುಗಳಾದ ಎಂ.ಡಿ.ಎಂ.ಎ 25g, 30 ಎಕ್ಸ್‌ಟಿಸಿ ಮಾತ್ರೆಗಳು ಹಾಗೂ ಸ್ಥಳೀಯ ಡ್ರಗ್‌ ಡೀಲರ್‌ ಗಳಿಂದ ಪಡೆದುಕೊಂಡಿದ್ದ ಎನ್ನಲಾಗಿದೆ. 1.54 ಕೆಜಿ ಗಾಂಜಾವನ್ನು  ವಶಕ್ಕೆ ಪಡೆಯುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ ಎಂದು ನಗರ ಪೊಲೀಸ್‌ ಆಯುಕ್ತರಾದ ಬಿ‌.ದಯಾನಂದ್ ಅವರು ತಿಳಿಸಿದ್ದಾರೆ.

ಲೋಕಾಯುಕ್ತ ಅಧಿಕಾರಿ ಎಂದು ಹೇಳಿಕೊಂಡು ಸರ್ಕಾರಿ ಅಧಿಕಾರಿಗಳಿಂದ ಹಣ ವಸೂಲಿ ಮಾಡಿ ವಂಚಿಸಲು ಯತ್ನಿಸಿರುವ ಆರೋಪದ ಮೇಲೆ ಓರ್ವನನ್ನು ಬೆಂಗಳೂರು ನಗರ ಅಪರಾಧ ನಿಯಂತ್ರಣ ದಳ ತಂಡದ ಪೊಲೀಸರು  ಬಂಧಿಸಿದ್ದಾರೆ. ಆರೋಪಿಯು, ಮೂಲತಃ ಆಂಧ್ರಪ್ರದೇಶದವನಾಗಿದ್ದು, ಸರ್ಕಾರಿ ಅಧಿಕಾರಿಗಳನ್ನು ಗುರಿಯಾಗಿಟ್ಟುಕೊಂಡು ದಾಖಲಾಗಿರುವ ಪ್ರಕರಣಗಳನ್ನು ಮುಚ್ಚಲು ಹಣ ನೀಡಬೇಕಾಗುತ್ತದೆ ಎಂದು ಬೇಡಿಕೆ ಇಟ್ಟು ಹಣ ಪಾವತಿಸುವಂತೆ ಅಧಿಕಾರಿಗಳನ್ನು ಒತ್ತಾಯಿಸುತ್ತಿದ್ದನು.

ಈತನು ಈ ಹಿಂದೆ ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕದಾದ್ಯಂತ  ಸಹ ಸರ್ಕಾರಿ ನೌಕರರಿಗೆ 35ಕ್ಕೂ ಹೆಚ್ಚು ಇದೇ ರೀತಿ ಕರೆ ಮಾಡಿ, ಬೆದರಿಸಿ ಹಣ ವಸೂಲಿ ಮಾಡಿರುವುದು ತನಿಖೆ ವೇಳೆ ತಿಳಿದು ಬಂದಿರುತ್ತದೆ. ಇದರ ಹಿನ್ನೆಲೆಯಲ್ಲಿ, ಈ ರೀತಿಯ ಹಗರಣಕ್ಕೆ ಬಲಿಯಾಗಿರಬಹುದಾದ ವ್ಯಕ್ತಿಗಳು ಮುಂದೆ ಬಂದು  ದೂರುಗಳೊಂದಿಗೆ ಪ್ರಕರಣವನ್ನು ತಕ್ಷಣವೇ   ದಾಖಲಿಸುವಂತೆ ಬೆಂಗಳೂರು ನಗರ ಪೊಲೀಸರು  ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಸಾರ್ವಜನಿಕರನ್ನು ಮಾರಕಾಸ್ತ್ರಗಳಿಂದ ಬೆದರಿಸಿ ಅವರಿಂದ ಹಣ ಮತ್ತು ಬೆಲೆ ಬಾಳುವ ವಸ್ತುಗಳನ್ನು ದರೋಡೆ ಮಾಡಲು ಪ್ರಯತ್ನಿಸುತ್ತಿದ್ದ 06 ಜನರನ್ನು ಹಾಗೂ ಅರೋಪಿಗಳಿಂದ 06 ಮಾರಕಾಸ್ತ್ರಗಳು ಮತ್ತು ಕೃತ್ಯಕ್ಕೆ ಉಪಯೋಗಿಸಿದ 03 ಬೈಕ್‌ಗಳನ್ನು ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿರುತ್ತಾರೆ.

ಆರೋಪಿತರ ಪೈಕಿ ಒಬ್ಬ ಆರೋಪಿಯ ವಿರುದ್ಧ 2018ರಲ್ಲಿ ಕೆ.ಜಿ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಡಕಾಯತಿ ಪ್ರಕರಣ ದಾಖಲಾಗಿರುತ್ತದೆ. ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡಲು ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

Ramesh Babu

Journalist

Recent Posts

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

2 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

4 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

9 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

10 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

14 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago